ಶಿವಮೊಗ್ಗ ರಾಗಿಗುಡ್ಡದಲ್ಲಿ ಈದ್ ಮಿಲಾದ್ ನಂತರ ಭಯಾನಕ ಹಿಂಸಾಚಾರ ನಡೆದ ಎಲ್ಲಾ ಮನೆಗಳಿಗೆ ಅರುಣ್ ಪುತ್ತಿಲ ನೇತೃತ್ವದ ತಂಡ ಭೇಟಿ ನೀಡಿತು. ರಾಗಿಗುಡ್ಡದಲ್ಲಿ ಈದ್ ಮಿಲಾದ್ ಹಬ್ಬ ಆಚರಣೆಯಲ್ಲಿ ಮತಾಂಧ ಟಿಪ್ಪು, ಔರಂಗಜೇಬನನ್ನು ವೈಭವೀಕರಿಸಿ ತಲವಾರು ತೋರಿಸಿ ಪೊಲೀಸರಿಗೆ ಕಲ್ಲುತೂರಾಟ ನಡೆಸಿ, ನೂರಾರು ಮನೆಗಳಿಗೆ ಹಾನಿ ಉಂಟು ಮಾಡಿದ ಪ್ರದೇಶಗಳಿಗೆ ಅರುಣ್ ಕುಮಾರ್ ಪುತ್ತಿಲ ಭೇಟಿ ಸಂತ್ರಸ್ತರಿಗೆ ಸಾಂತ್ವನ ತಿಳಿಸಿದರು.
ಶಿವಮೊಗ್ಗ ರಾಗಿಗುಡ್ಡದಲ್ಲಿ ಲಕ್ಷ್ಮೀ ಎಂಬವರು ತಾಳಿ ಅಡವಿಟ್ಟು ಆಟೋ ಖರೀದಿಸಿದ್ದು ಮತಾಂದರ ಕ್ರೂರತೆಗೆ ಆಟೋ ಜಖಂಗೊಂಡಿದೆ. ಹಲವು ಮನೆಗಳ ಕಿಟಕಿ, ಬಾಗಿಲು , ಗೋಡೆ ಜಖಂಗೊಂಡಿದೆ. ಸ್ವಂತ ವಿದ್ಯಾಭ್ಯಾಸ ಕಲಿಸಿದ ಶಿಕ್ಷಕಿ ಮನೆಗೆ ಅವರ ಶಿಷ್ಯಂದಿರೇ ಕಲ್ಲು ತೂರಾಟ ನಡೆಸಿದ್ದು ನೆನೆಸಿಕೊಂಡು ನಿವೃತ್ತ ಶಿಕ್ಷಕಿ ಬೇಸರ ವ್ಯಕ್ತಪಡಿಸಿದರು. ಈಗಲೂ ಹಿಂದೂಗಳು ಅಲ್ಲಿ ಭಯದ ವಾತಾವರಣದಲ್ಲಿ ಬದುಕು ಸವೆಸುತ್ತಿದ್ದಾರೆ. ಈ ಘಟನೆಯಲ್ಲಿ ಭಯೋತ್ಪಾದಕ ಬೆಂಬಲಿಗರ ಕೈವಾಡವಿರುವುದು ಮೇಲ್ನೋಟಕ್ಕೆ ಕಾಣುತ್ತಿದೆ ಎಂದು ಪುತ್ತಿಲ ತಂಡ ಹೇಳಿತು.
ಸರ್ಕಾರ ಈ ಕ್ರೌರ್ಯ ಘಟನೆಯನ್ನು ಶೀಘ್ರ ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು ಮತ್ತು ಸಂತ್ರಸ್ಥರಿಗೆ ಸೂಕ್ತ ಭದ್ರತೆ ಹಾಗೂ ಪರಿಹಾರ ಒದಗಿಸಬೇಕು ಎಂದು ಅರುಣ್ ಕುಮಾರ್ ಪುತ್ತಿಲ ಒತ್ತಾಯಿಸಿದ್ದಾರೆ.
ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…
ಮಳೆ ಮಾಹಿತಿ ಮೂಲಕ ಕೃಷಿಕರಿಗೆ ನೆರವಾಗುತ್ತಿರುವ ಸಾಯಿಶೇಖರ್ ಕರಿಕಳ ಅವರಿಗೆ ರೈತ ರತ್ನ…
ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್ಶಿಪ್ಗೆ ಭವ್ಯ ಚಾಲನೆ ದೊರೆತಿದ್ದು, ದೇಶದ 28…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್ 3ರಿಂದ ತೋಟದ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…
ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…