ಚುನಾವಣಾ ಕಣ | ಪುತ್ತೂರಿನಲ್ಲಿ ಆರಂಭವಾಗಿದೆ #PuttilaForPuttur ಟ್ವೀಟ್ ಅಭಿಯಾನ | ಭಾನುವಾರ ನಡೆಯಲಿದೆ ಟ್ವೀಟರ್ ಅಭಿಯಾನ |

January 28, 2023
10:25 PM

ರಾಜ್ಯದಲ್ಲಿ ಚುನಾವಣಾ  ದಿನಗಳು ಹತ್ತಿರ ಬರುತ್ತಿವೆ. ಈಗ ಅಭಿವೃದ್ಧಿ, ಓಲೈಕೆ ಸೇರಿದಂತೆ ವಿವಿಧ ಪ್ರಯತ್ನಗಳು ನಡೆಯುತ್ತಿವೆ. ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಟಿಯಾಗುತ್ತಿದೆ. ಕೆಲವು ಕಡೆ ಅಭ್ಯರ್ಥು ಬದಲಾವಣೆ, ಇನ್ನೂ ಕೆಲವು ಕಡೆ ಮುಂದುವರಿಕೆ ಇತ್ಯಾದಿಗಳ ಬಗ್ಗೆ ಚರ್ಚೆಯಾಗುತ್ತಿದ್ದಂತೆಯೇ ಇದೀಗ ಟ್ವೀಟ್‌ ಅಭಿಯಾನಗಳೂ ಆರಂಭವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಯುವಕರಿಂದ ಹಿಂದೂ ಮುಖಂಡ ಅರುಣ್‌ ಕುಮಾರ್‌ ಪುತ್ತಿಲ ಪರವಾದ ಒತ್ತಾಯ ಹೆಚ್ಚಾಗಿದ್ದು ಭಾನುವಾರ #PuttilaForPuttur ಟ್ವೀಟ್ ಅಭಿಯಾನ ನಡೆಯಲಿದೆ. 

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿಯಿಂದ ಅರುಣ್‌ ಕುಮಾರ್‌ ಪುತ್ತಿಲ ಅವರ ಹೆಸರು ಬಲವಾಗಿ ಕೇಳಿಬರುತ್ತಿದ್ದು ಹಿಂದೂ ಕಾರ್ಯಕರ್ತರು ಾರುಣ್ ಕುಮಾರ್‌ ಪುತ್ತಿಲ ಅವರ ಹೆಸರನ್ನು ಹೇಳುತ್ತಿದ್ದಾರೆ. ಅರುಣ್‌ ಕುಮಾರ್‌ ಪುತ್ತಿಲ ಅವರೇ ಅಭ್ಯರ್ಥಿ ಆಗಬೇಕು ಎಂದು ಒತ್ತಾಯ ಮಾಡುತ್ತಿದ್ದಾರೆ. ಇದರ ಹಿನ್ನೆಲೆಯಲ್ಲಿ ಅರುಣ್‌ ಕುಮಾರ್‌ ಅಭಿಮಾನಿಗಳು ಟ್ವೀಟ್‌ ಅಭಿಯಾನ ಆರಂಭಿಸಿದ್ದು, ಬಿಜೆಪಿಯಿಂದ ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಅರುಣ್‌ ಅವರೇ ಅಭ್ಯರ್ಥಿ ಆಗಬೇಕು ಎಂದು ಒತ್ತಾಯ ಹೆಚ್ಚಿದೆ. ಇದಕ್ಕಾಗಿ ಬಿ ಎಲ್‌ ಸಂತೋಷ್‌, ಬಿ ಎಸ್‌ ಯಡಿಯೂರಪ್ಪ , ನಳಿನ್‌ ಕುಮಾರ್‌ ಕಟೀಲು ಸೇರಿದಂತೆ ವಿವಿಧ ಮಂದಿಯನ್ನು ಟ್ಯಾಗ್‌ ಮಾಡಿ ಪ್ರತಿಕ್ರಿಯೆ ನೀಡಲು ಸಿದ್ಧತೆ ನಡೆದಿದೆ. ಕಳೆದ ಬಾರಿ ಕೂಡಾ ಅರುಣದ್‌ ಕುಮಾರ್‌ ಪುತ್ತಿಲ ಅವರು ಪುತ್ತೂರಿನಿಂದ ಸ್ಫರ್ಧಿಸಲು ಆಕಾಂಕ್ಷಿಯಾಗಿದ್ದರು. ಆದರೆ ಸೀಟು ಸಿಕ್ಕಿರಲಿಲ್ಲ, ಬಳಿಕ ಬಿಜೆಪಿ ಹಾಗೂ ಸಂಘ ಪರಿವಾರದ ಪ್ರಮುಖರು ಅರುಣ್‌ ಕುಮಾರ್‌ ಪುತ್ತಿಲ ಜೊತೆ ಮಾತುಕತೆ ನಡೆಸಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ
June 28, 2026
10:21 AM
by: ದ ರೂರಲ್ ಮಿರರ್.ಕಾಂ
ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ
June 28, 2026
7:21 AM
by: ಪ್ರಬಂಧ ಅಂಬುತೀರ್ಥ
ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ
June 28, 2026
6:57 AM
by: ದ ರೂರಲ್ ಮಿರರ್.ಕಾಂ
ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ
June 27, 2026
11:20 PM
by: ವಿಶೇಷ ಪ್ರತಿನಿಧಿ

You cannot copy content of this page - Copyright -The Rural Mirror