ಸುದ್ದಿಗಳು

ಚುನಾವಣಾ ಕಣ | ಪುತ್ತೂರಿನಲ್ಲಿ ಆರಂಭವಾಗಿದೆ #PuttilaForPuttur ಟ್ವೀಟ್ ಅಭಿಯಾನ | ಭಾನುವಾರ ನಡೆಯಲಿದೆ ಟ್ವೀಟರ್ ಅಭಿಯಾನ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ರಾಜ್ಯದಲ್ಲಿ ಚುನಾವಣಾ  ದಿನಗಳು ಹತ್ತಿರ ಬರುತ್ತಿವೆ. ಈಗ ಅಭಿವೃದ್ಧಿ, ಓಲೈಕೆ ಸೇರಿದಂತೆ ವಿವಿಧ ಪ್ರಯತ್ನಗಳು ನಡೆಯುತ್ತಿವೆ. ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಟಿಯಾಗುತ್ತಿದೆ. ಕೆಲವು ಕಡೆ ಅಭ್ಯರ್ಥು ಬದಲಾವಣೆ, ಇನ್ನೂ ಕೆಲವು ಕಡೆ ಮುಂದುವರಿಕೆ ಇತ್ಯಾದಿಗಳ ಬಗ್ಗೆ ಚರ್ಚೆಯಾಗುತ್ತಿದ್ದಂತೆಯೇ ಇದೀಗ ಟ್ವೀಟ್‌ ಅಭಿಯಾನಗಳೂ ಆರಂಭವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಯುವಕರಿಂದ ಹಿಂದೂ ಮುಖಂಡ ಅರುಣ್‌ ಕುಮಾರ್‌ ಪುತ್ತಿಲ ಪರವಾದ ಒತ್ತಾಯ ಹೆಚ್ಚಾಗಿದ್ದು ಭಾನುವಾರ #PuttilaForPuttur ಟ್ವೀಟ್ ಅಭಿಯಾನ ನಡೆಯಲಿದೆ. 

Advertisement

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿಯಿಂದ ಅರುಣ್‌ ಕುಮಾರ್‌ ಪುತ್ತಿಲ ಅವರ ಹೆಸರು ಬಲವಾಗಿ ಕೇಳಿಬರುತ್ತಿದ್ದು ಹಿಂದೂ ಕಾರ್ಯಕರ್ತರು ಾರುಣ್ ಕುಮಾರ್‌ ಪುತ್ತಿಲ ಅವರ ಹೆಸರನ್ನು ಹೇಳುತ್ತಿದ್ದಾರೆ. ಅರುಣ್‌ ಕುಮಾರ್‌ ಪುತ್ತಿಲ ಅವರೇ ಅಭ್ಯರ್ಥಿ ಆಗಬೇಕು ಎಂದು ಒತ್ತಾಯ ಮಾಡುತ್ತಿದ್ದಾರೆ. ಇದರ ಹಿನ್ನೆಲೆಯಲ್ಲಿ ಅರುಣ್‌ ಕುಮಾರ್‌ ಅಭಿಮಾನಿಗಳು ಟ್ವೀಟ್‌ ಅಭಿಯಾನ ಆರಂಭಿಸಿದ್ದು, ಬಿಜೆಪಿಯಿಂದ ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಅರುಣ್‌ ಅವರೇ ಅಭ್ಯರ್ಥಿ ಆಗಬೇಕು ಎಂದು ಒತ್ತಾಯ ಹೆಚ್ಚಿದೆ. ಇದಕ್ಕಾಗಿ ಬಿ ಎಲ್‌ ಸಂತೋಷ್‌, ಬಿ ಎಸ್‌ ಯಡಿಯೂರಪ್ಪ , ನಳಿನ್‌ ಕುಮಾರ್‌ ಕಟೀಲು ಸೇರಿದಂತೆ ವಿವಿಧ ಮಂದಿಯನ್ನು ಟ್ಯಾಗ್‌ ಮಾಡಿ ಪ್ರತಿಕ್ರಿಯೆ ನೀಡಲು ಸಿದ್ಧತೆ ನಡೆದಿದೆ. ಕಳೆದ ಬಾರಿ ಕೂಡಾ ಅರುಣದ್‌ ಕುಮಾರ್‌ ಪುತ್ತಿಲ ಅವರು ಪುತ್ತೂರಿನಿಂದ ಸ್ಫರ್ಧಿಸಲು ಆಕಾಂಕ್ಷಿಯಾಗಿದ್ದರು. ಆದರೆ ಸೀಟು ಸಿಕ್ಕಿರಲಿಲ್ಲ, ಬಳಿಕ ಬಿಜೆಪಿ ಹಾಗೂ ಸಂಘ ಪರಿವಾರದ ಪ್ರಮುಖರು ಅರುಣ್‌ ಕುಮಾರ್‌ ಪುತ್ತಿಲ ಜೊತೆ ಮಾತುಕತೆ ನಡೆಸಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪಹಲ್ಗಾಮ್‌ನಲ್ಲಿ ಭಯೋತ್ಪಾದಕರ ದಾಳಿ | ಮೃತಪಟ್ಟ ಕುಟುಂಬಗಳಿಗೆ  ಶೃಂಗೇರಿ ಮಠದಿಂದ 2 ಲಕ್ಷ ಪರಿಹಾರ

ಪಹಲ್ಗಾಮ್‌ನಲ್ಲಿ ಭಯೋತ್ಪಾದಕರ ದಾಳಿಯಿಂದ ಮೃತಪಟ್ಟ ಕುಟುಂಬಗಳಿಗೆ ಚಿಕ್ಕಮಗಳೂರು ಜಿಲ್ಲೆಯ  ಶೃಂಗೇರಿ ಶಾರದಾ ಮಠವು…

12 hours ago

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇಂದು ಮಳೆ ಸಾಧ್ಯತೆ

ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ.  ಮಂಡ್ಯ ಜಿಲ್ಲೆಯ…

12 hours ago

ಜೀವನ ಪೂರ್ತಿ ಈ ರಾಶಿಯವರ ಮೇಲಿರುವುದು ಗುರು ಬಲ !

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

12 hours ago

ಹವಾಮಾನ ವರದಿ | 01-05-2025 | ಕೆಲವು ಕಡೆ ಸಂಜೆ ಮಳೆ ನಿರೀಕ್ಷೆ | ಮೇ.6 ರಿಂದ ಮತ್ತೆ ಮಳೆ ಆರಂಭ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಒಂದೆರಡು ಕಡೆ ಹಾಗೂ…

1 day ago

ಅಪ್ಪ ಅಮ್ಮ ಇಲ್ಲದ ಪರೀಕ್ಷಾ ನಿಯಮಗಳು

ಉದ್ಯೋಗದ ಪರೀಕ್ಷೆಗಳಿಗೂ ಧಾರ್ಮಿಕ ಸಂಕೇತಗಳಿಗೂ ಯಾಕೆ ಹೊಂದಿ ಬರುವುದಿಲ್ಲ? ಇದೊಂದು ಮಿಲಿಯನ್ ಡಾಲರ್…

1 day ago