Advertisement
Opinion

ಪಶ್ಚಿಮಘಟ್ಟ ಅಂದ ತಕ್ಷಣ ಅತ್ಯಂತ ಸೂಕ್ಷ್ಮ ಪ್ರದೇಶ ಎಂಬ ಧ್ವನಿ ಮಾತ್ರ ಹೊರಡುತ್ತದೆ | ಕಾರ್ಯದಲ್ಲಿ ಇಲ್ಲದ ರಕ್ಷಣೆ

Share

ಬಹಳ ಗಂಭೀರ ಪರಿಸರ ಚರ್ಚೆ ಗಾಡ್ಗೀಳ್(Gadgil), ಕಸ್ತೂರಿ ರಂಗನ್ ವರದಿಗಳು(Kasturi Rangan report) ಮಳೆಗಾಲದಲ್ಲಿ(Rain season) ಗುಡ್ಡ – ಭೂಕುಸಿತ(Land slide) ಆದ ತಕ್ಷಣ ಧುತ್ತೆಂದು ಎದ್ದು ಶುರುವಾಗುತ್ತದೆ. ಜನರ ಮನಸ್ಸನ್ನು ಪರಿಸರ(Environment) ಪರ ಮಾಡುವುದು ಹರ ಸಾಹಸದ ಕೆಲಸ. ಯಾರು ಆದರ್ಶರು… ಈ ದೃಷ್ಟಿಯಿಂದ ಮಾರ್ಗದರ್ಶಿಸಬಲ್ಲರು ಎಂಬ ಪಶ್ನೆಗೆ ಅನೇಕ ಸಲ ಉತ್ತರ ಸಿಗದು. ಅನುಷ್ಠಾನ-ಕಾನೂನು ಜಾರಿ – ನೀತಿ ರೂಪಿಸುವುದು ನಾವೆಲ್ಲರೂ ಒಪ್ಪಿಕೊಂಡ ರಾಜಕಾರಣದ ಮತ್ತು ಅಧಿಕಾರಿಗಳ ವ್ಯವಸ್ಥೆಯಡಿ ಇದೆ.

ಇವತ್ತು ಗ್ರಾಮಗಳಲ್ಲಿ ಜೆಸಿಬಿ(JCB), ದೊಡ್ಡ ಮರಳ ಲಾರಿ-ಟಿಪ್ಪರ್, ಬೋರೆವೆಲ್ ಯಂತ್ರ(Borewell) …ಯಾರ ಕೈಲಿದೆ ? ಇವಕ್ಕೆಲ್ಲ ಕೆಲಸಬೇಕು. ಸುಮ್ಮನೆ ಕೂರುವ ಸ್ವಭಾವ ಅವುಗಳಿಗಿಲ್ಲ ! ಗುಡ್ಡದ ನೆತ್ತಿ ಸವರುವುದೊ, ಗುಡ್ಡದ ಬುಡವನ್ನು ಕೆರೆಯುವುದೊ, ಆಳದ ಕೊಳವೆಬಾವಿ ಕೊರೆಯುವುದೊ ಏನಾದರೊಂದನ್ನು ದಿನನಿತ್ಯ ಮಾಡುತ್ತಿರುತ್ತವೆ.

ಗ್ರಾಮಮಟ್ಟದ ರಾಜಕಾರಣಿಗಳೆ ಬಹುತೇಕ ಇವುಗಳ ಒಡೆಯರು. ಹೆಚ್ಚಿನ ಕಡೆ ಗ್ರಾಮದ ಈ ಪುಟ್ಟ ಪುಡಾರಿಗಳೆ ಇಂದಿನ ಗ್ರಾಮ ಪಂಚಾಯತ್ ಸದಸ್ಯರುಗಳು. ಇವರುಗಳೆ ದೊಡ್ಡ ರಾಜಕಾರಣಿಗಳನ್ನು ಉಳಿಸುವ ಕವಲು ಬೇರುಗಳು. ಪರಸ್ಪರ ಇವರಲ್ಲಿ ಬಹಳ ಸ್ನೇಹ- ಸಂಬಂಧ. ಉಳಿಸುವವರ ದನಿ ಹಾರಾಡುವ ಈ ಪುಡಾರಿಗಳ – ಅಧಿಕಾರಿಗಳ ಮುಂದೆ ಕೇಳುವುದೆ ? ಗೋಮಾಳ, ಹುಲ್ಲುಬನ್ನಿ ಹರಾಜು, ಬ್ಯಾಣ, ಸೊಪ್ಪಿನ ಬೆಟ್ಟ …ಇದು ಆಗಾಗ ಕೇಳುವ ಪದಗಳು. ಕಾಣಲು ಎಲ್ಲಿದೆ ಅದು ? ಸಾತ್ವಿಕ ಜನ ಸಂಘಟನೆಯೊಂದೇ ಪರಿಹಾರ ತರಬಲ್ಲದು… ಉತ್ಸಾಹ ತುಂಬುವ ಭಾಷಣದ ಮಾತು… ಸಂಘಟಿಸುವ ಯುವ ಸಮುದಾಯ ಇಂದು ಗ್ರಾಮದಲ್ಲೆಲ್ಲಿದೆ. ಇದ್ದವರನ್ನು ಒಪ್ಪಿಕೊಳ್ಳುವ ಹಸಿರ ಸಂಗಾತಿ ಗೆಳತಿಯರು ಎಲ್ಲಿದ್ದಾರೆ ?

ಗ್ರಾಮದಲ್ಲಿ ಒಂದು ಕಾಲದಲ್ಲಿ ಸಹೋದರರಂತೆ ಇದ್ದ ವಿವಿಧ ಸಮುದಾಯಗಳ ಒಡೆದು ರಾಜಕಾರಣ ಮಾಡುವ ಪಕ್ಷಗಳಿಗೆ ಹಸಿರು – ಭೂಮಿ ರಾಜಕಾರಣದ, ಮತಗಳಿಕೆಯ ವಸ್ತು. ಗುಡ್ಡ ಕುಸಿದಾಗ – ಮಣ್ಣಿನೊಳಗೆ ಜೀವ ಸಿಕ್ಕಾಗ ಪಶ್ಚಿಮಘಟ್ಟ , ಪಶ್ಚಿಮಘಟ್ಟ ಸುದ್ದಿ ಮಾಧ್ಯಮಗಳ ಮುಖಪುಟದಲ್ಲಿ… ಕುಸಿದಿರುವುದು – ಕುಸಿಯುತ್ತಿರುವುದು ಗುಡ್ಡ – ಬೆಟ್ಟ -ಕಣಿವೆ ಅಲ್ಲ … ನಮ್ಮೆಲ್ಲರಲ್ಲಿದ್ದ ಜೀವಪ್ರಜ್ಞೆ – ಜೀವನ ಪ್ರಜ್ಞೆ ನಿತ್ಯ ಕುಸಿಯುತ್ತಿದೆ. ಯಾವ ಯಂತ್ರ – ಸೈನ್ಯ ಇದನ್ನು ತಡೆದೀತು ? ಸುಸ್ಥಿರ ಅಭಿವೃದ್ಧಿ ಅಂದರೆ ಹೀಗೆ ಅನ್ನುವ ಅಂಶಗಳನ್ನು ಸವಿವರವಾಗಿ ಪಟ್ಟಿಮಾಡಬೇಕು. ಸವಲತ್ತು ಮತ್ತು ಅವಶ್ಯಕತೆಗಳ ನಡುವೆ ಸಮನ್ವಯ ಸಾಧಿಸದಿದ್ದರೆ ಉಳಿವು ಮಾತು ಹಾಗೆಯೆ ಉಳಿದು ಬಿಡುತ್ತದೆ. ಆರಂಭದ ವಾಕ್ಯ ಮತ್ತೆ ನೆನಪಾಗುತ್ತೆ – ಮೇಲ್ಪಂಕ್ತಿ ಯಾರು?

ಬರಹ :
ಆನಂದ ಆ. ಶ್ರೀ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

12 hours ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

12 hours ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

12 hours ago

ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್

ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…

12 hours ago

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ

ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…

1 day ago

“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ

ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…

1 day ago