Advertisement
MIRROR FOCUS

ಮುಂಗಾರು ಆರಂಭವಾಗುತ್ತಿದ್ದಂತೆ ಏರಿದ ತರಕಾರಿ ಬೆಲೆ | ಗಗನಕ್ಕೇರಿದ ಬೀನ್ಸ್‌ ದರ | ಬಡವರ ಪಾಡೇನು..? |

Share

ಬರಗಾಲ(Drought) ಬಂದರೆ ಮಳೆ(Rain) ಇಲ್ಲದೆ ತರಕಾರಿ ರೇಟ್‌(Vegetable rate) ಗಗನಕ್ಕೆ ಹಾರುತ್ತದೆ. ಅದೇ ರೀತಿ ಮಳೆ ಜಾಸ್ತಿಯಾದರು ಮಳೆಗೆ ತರಕಾರಿ ಕೊಳೆತು ದರ ಏರುತ್ತದೆ(Price hike). ಇನ್ನೇನು ಮುಂಗಾರು(Mansoon rain) ಆರಂಭವಾಗಿದೆ. ತರಕಾರಿ ಕೊಳೆಯುವಂತೆ ಇನ್ನು ಮಳೆ ಆರಂಭವಾಗಿಲ್ಲ. ಆದರೂ ತರಕಾರಿ ರೇಟು ಜಾಸ್ತಿಯಾಗಿದೆ. ಯಾವ ತರಕಾರಿ ಬೆಲೆ ಕೇಳಿದರು ತರಕಾರಿ ಕೊಂಡುಕೊಳ್ಳುವುದೇ ಬೇಡ ಅನ್ನಿಸುತ್ತದೆ. ಪ್ರತಿ ವರ್ಷದಂತೆ  ಮಳೆಗಾಲ ಆರಂಭವಾಗುತ್ತಿದ್ದಂತೆ  ತರಕಾರಿ ದರಗಳು ಗಗನಮುಖಿಯಾಗಿವೆ. ಈ ಪೈಕಿ ಬೀನ್ಸ್ ದರ ಡಬಲ್ ಸೆಂಚುರಿ ದಾಟಿದೆ. ದೂರದ ಹಿಮಾಚಲ ಪ್ರದೇಶದಿಂದ(Himachala Pradesh) ಬೀನ್ಸ್ (Beans Price Hike) ತರಲಾಗ್ತಿದ್ದು, ಸದ್ಯಕ್ಕೆ ಬೀನ್ಸ್ ಶ್ರೀಮಂತರ ತರಕಾರಿಯಾಗಿ ಮಾರ್ಪಟ್ಟಿದೆ.

Advertisement
Advertisement

ತರಕಾರಿ ದರ ಏರುತ್ತಲೇ ಇದ್ದು, ಗ್ರಾಹಕರಿಗೆ ಬಹುದೊಡ್ಡ ಹೊರೆಯಾಗಿ ಪರಿಣಮಿಸಿದೆ. ಮಳೆ ಹೆಚ್ಚಾಗುತ್ತಿದ್ದಂತೆಯೇ ತರಕಾರಿ ದರವೂ ಗಗನಕ್ಕೇರಿದೆ. ಅದ್ರಲ್ಲೂ ಬೀನ್ಸ್ ದರ ದಾಖಲೆ ಪ್ರಮಾಣದಲ್ಲಿ ಏರಿಕೆ ಕಂಡಿದೆ. ಹೋಲ್ ಸೇಲ್ ದರವೇ ಡಬಲ್ ಸೆಂಚುರಿ ದಾಟಿ, ಗ್ರಾಹಕರನ್ನು ಹುಬ್ಬೇರುವಂತೆ ಮಾಡಿದೆ. ರೀಟೇಲ್‌ನಲ್ಲಿ ಪ್ರತಿ ಕೆಜಿ ಗೆ 200 ಕ್ಕೂ ಹೆಚ್ಚು ದರ ನಿಗದಿಯಾಗುತ್ತಿದೆ.

Advertisement

ಬೀನ್ಸ್ ದರ ಏರಿಕೆಗೆ ಇದೇ ಕಾರಣ : ಕಳೆದ ವರ್ಷದ ಬರಗಾಲದಿಂದ ರಾಜ್ಯದಲ್ಲಿ ಎಲ್ಲಿಯೂ ನಿರೀಕ್ಷಿತ ಮಟ್ಟದಲ್ಲಿ ಬೀನ್ಸ್ ಬೆಳೆದಿಲ್ಲ. ಹೀಗಾಗಿ ದೂರದ ಹಿಮಾಚಲ ಪ್ರದೇಶದಿಂದ ಬೀನ್ಸ್ ಖರೀದಿ ಮಾಡುವ ಅನಿವಾರ್ಯತೆ ಸೃಷ್ಟಿಯಾಗಿದೆ. ಹುಬ್ಬಳ್ಳಿ ವರ್ತಕರು ದೆಹಲಿ ಮೂಲಕ ಬೀನ್ಸ್ ತರಿಸಿಕೊಳ್ಳುತ್ತಿದ್ದಾರೆ. ಹುಬ್ಬಳ್ಳಿಗೆ ನಿತ್ಯ ಒಂದು ಟ್ರಕ್ ಬೀನ್ಸ್ ತರಿಸಲಾಗುತ್ತಿದೆ. ಪ್ರತಿ ಟ್ರಕ್ ನಲ್ಲಿ 15 ಟನ್ ಬೀನ್ಸ್ ಸಾಗಾಟ ಮಾಡಲಾಗುತ್ತಿದೆ. ಹುಬ್ಬಳ್ಳಿ ಮತ್ತು ಸುತ್ತಮುತ್ತಲಿನ ಜಿಲ್ಲೆಗಳಿಗೆ ಇಲ್ಲಿಂದಲೇ ಪೂರೈಕೆ ಮಾಡಲಾಗುತ್ತದೆ. ದೂರದ ಊರಿನಿಂದ ತರಿಸುತ್ತಿರುವುದರಿಂದ ದರ ಏರಿಕೆಯಾಗಿದೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ವರ್ಷಪೂರ್ತಿ ಜನರಿಗೆ ಮಾವು, ಹಲಸು..! | ಆಹಾರ ಭದ್ರತೆಯ ಕಡೆಗೆ ಹೆಜ್ಜೆ | ಹೊಸ ರೀತಿಯ ಹಣ್ಣುಗಳ ಪರಿಚಯಕ್ಕೆ ಇಳಿದ ಬಾಂಗ್ಲಾದೇಶ |

ಹಣ್ಣು ಕೃಷಿಯ ಕಡಗೆ ಪ್ರಪಂಚದ ಹಲವು ಕಡೆ ಆದ್ಯತೆ ನೀಡಲಾಗುತ್ತಿದೆ. ಭಾರತವೂ ಈ…

14 hours ago

ಮದ್ಲೆಗಾರ ಲಕ್ಷ್ಮೀಶ ಅಮ್ಮಣ್ಣಾಯರಿಗೆ ಪುತ್ತೂರು ‘ಗೋಪಣ್ಣ’ ಸ್ಮೃತಿ ಗೌರವ ಪ್ರದಾನ

ಹಿರಿಯ ಮದ್ಲೆಗಾರ ಲಕ್ಷ್ಮೀಶ ಅಮ್ಮಣ್ಣಾಯ-ಗೀತಾ ದಂಪತಿಗೆ ‘ಗೋಪಣ್ಣ ಸ್ಮೃತಿ’ ಗೌರವವನ್ನು ಪ್ರದಾನಿಸಲಾಯಿತು.

19 hours ago

ಹವಾಮಾನ ವರದಿ | 07-07-2024 | ರಾಜ್ಯದ ಕೆಲವು ಕಡೆ ಸಾಮಾನ್ಯ, ಕೆಲವು ಕಡೆ ಉತ್ತಮ ಮಳೆ ನಿರೀಕ್ಷೆ |

ಜುಲೈ 9 ಅಥವಾ 10ರಿಂದ ದಕ್ಷಿಣ ಕರಾವಳಿ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ…

20 hours ago

ಬೆಳೆಗಾರರೇ, ಅಡಿಕೆ ಹಳದಿ ಎಲೆರೋಗದ ಕಾರಣದಿಂದ ಆತ್ಮಹತ್ಯೆ ಮಾಡಬೇಡಿ | ಹಾಗೆಂದು ಹೊಸ ಹೊಸ ಗೊಬ್ಬರದ ಆಮಿಷಗಳಿಗೂ ಬಲಿಯಾಗಬೇಡಿ…!

ಅಡಿಕೆ ಬೆಳೆಗಾರರೊಬ್ಬರು ಅಡಿಕೆ ಹಳದಿ ಎಲೆರೋಗದ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡರು. ಈ ಮೂಲಕ…

22 hours ago

ಡ್ರಾಗನ್‌ ಫ್ರುಟ್‌ ಬೆಳೆದು ಮಾರುಕಟ್ಟೆ ಕಂಡುಕೊಂಡ ಕೃಷಿಕ | ಸಣ್ಣ ರೈತರು ಮಾರುಕಟ್ಟೆಗೆ ಚಿಂತಿಸಬೇಕಿಲ್ಲ…!

ಡ್ರಾಗನ್‌ ಫ್ರುಟ್‌ ಕೃಷಿ ಮಾಡಿ ಸ್ವತ: ಮಾರುಕಟ್ಟೆಯನ್ನೂ ಕಂಡುಕೊಂಡು ಮಾರಾಟವನ್ನೂ ಮಾಡುವ ಮೂಲಕ…

2 days ago

ಮಳೆ ಹಿನ್ನೆಲೆಯಲ್ಲಿ ಗಿರಿಶಿಖರಗಳ ಟ್ರೆಕ್ಕಿಂಗ್ ನಿಷೇಧ | ನೀರಿಗೆ ಇಳಿಯದಂತೆ ಜಿಲ್ಲಾಧಿಕಾರಿ ಆದೇಶ |

ಮುಂಗಾರು ಮಳೆ ಚುರುಕಾಗಿರುವುದರಿಂದ ಜಿಲ್ಲೆಯಾದ್ಯಂತ ಪ್ರಾಕೃತಿಕ ವಿಕೋಪದ ಘಟನೆಗಳು ಸಂಭವಿಸುತ್ತಿರುತ್ತವೆ. ಸಾರ್ವಜನಿಕರ ಹಿತಾಸಕ್ತಿಯನ್ನು…

2 days ago