Advertisement
MIRROR FOCUS

ಮುಂಗಾರು ಆರಂಭವಾಗುತ್ತಿದ್ದಂತೆ ಏರಿದ ತರಕಾರಿ ಬೆಲೆ | ಗಗನಕ್ಕೇರಿದ ಬೀನ್ಸ್‌ ದರ | ಬಡವರ ಪಾಡೇನು..? |

Share

ಬರಗಾಲ(Drought) ಬಂದರೆ ಮಳೆ(Rain) ಇಲ್ಲದೆ ತರಕಾರಿ ರೇಟ್‌(Vegetable rate) ಗಗನಕ್ಕೆ ಹಾರುತ್ತದೆ. ಅದೇ ರೀತಿ ಮಳೆ ಜಾಸ್ತಿಯಾದರು ಮಳೆಗೆ ತರಕಾರಿ ಕೊಳೆತು ದರ ಏರುತ್ತದೆ(Price hike). ಇನ್ನೇನು ಮುಂಗಾರು(Mansoon rain) ಆರಂಭವಾಗಿದೆ. ತರಕಾರಿ ಕೊಳೆಯುವಂತೆ ಇನ್ನು ಮಳೆ ಆರಂಭವಾಗಿಲ್ಲ. ಆದರೂ ತರಕಾರಿ ರೇಟು ಜಾಸ್ತಿಯಾಗಿದೆ. ಯಾವ ತರಕಾರಿ ಬೆಲೆ ಕೇಳಿದರು ತರಕಾರಿ ಕೊಂಡುಕೊಳ್ಳುವುದೇ ಬೇಡ ಅನ್ನಿಸುತ್ತದೆ. ಪ್ರತಿ ವರ್ಷದಂತೆ  ಮಳೆಗಾಲ ಆರಂಭವಾಗುತ್ತಿದ್ದಂತೆ  ತರಕಾರಿ ದರಗಳು ಗಗನಮುಖಿಯಾಗಿವೆ. ಈ ಪೈಕಿ ಬೀನ್ಸ್ ದರ ಡಬಲ್ ಸೆಂಚುರಿ ದಾಟಿದೆ. ದೂರದ ಹಿಮಾಚಲ ಪ್ರದೇಶದಿಂದ(Himachala Pradesh) ಬೀನ್ಸ್ (Beans Price Hike) ತರಲಾಗ್ತಿದ್ದು, ಸದ್ಯಕ್ಕೆ ಬೀನ್ಸ್ ಶ್ರೀಮಂತರ ತರಕಾರಿಯಾಗಿ ಮಾರ್ಪಟ್ಟಿದೆ.

ತರಕಾರಿ ದರ ಏರುತ್ತಲೇ ಇದ್ದು, ಗ್ರಾಹಕರಿಗೆ ಬಹುದೊಡ್ಡ ಹೊರೆಯಾಗಿ ಪರಿಣಮಿಸಿದೆ. ಮಳೆ ಹೆಚ್ಚಾಗುತ್ತಿದ್ದಂತೆಯೇ ತರಕಾರಿ ದರವೂ ಗಗನಕ್ಕೇರಿದೆ. ಅದ್ರಲ್ಲೂ ಬೀನ್ಸ್ ದರ ದಾಖಲೆ ಪ್ರಮಾಣದಲ್ಲಿ ಏರಿಕೆ ಕಂಡಿದೆ. ಹೋಲ್ ಸೇಲ್ ದರವೇ ಡಬಲ್ ಸೆಂಚುರಿ ದಾಟಿ, ಗ್ರಾಹಕರನ್ನು ಹುಬ್ಬೇರುವಂತೆ ಮಾಡಿದೆ. ರೀಟೇಲ್‌ನಲ್ಲಿ ಪ್ರತಿ ಕೆಜಿ ಗೆ 200 ಕ್ಕೂ ಹೆಚ್ಚು ದರ ನಿಗದಿಯಾಗುತ್ತಿದೆ.

ಬೀನ್ಸ್ ದರ ಏರಿಕೆಗೆ ಇದೇ ಕಾರಣ : ಕಳೆದ ವರ್ಷದ ಬರಗಾಲದಿಂದ ರಾಜ್ಯದಲ್ಲಿ ಎಲ್ಲಿಯೂ ನಿರೀಕ್ಷಿತ ಮಟ್ಟದಲ್ಲಿ ಬೀನ್ಸ್ ಬೆಳೆದಿಲ್ಲ. ಹೀಗಾಗಿ ದೂರದ ಹಿಮಾಚಲ ಪ್ರದೇಶದಿಂದ ಬೀನ್ಸ್ ಖರೀದಿ ಮಾಡುವ ಅನಿವಾರ್ಯತೆ ಸೃಷ್ಟಿಯಾಗಿದೆ. ಹುಬ್ಬಳ್ಳಿ ವರ್ತಕರು ದೆಹಲಿ ಮೂಲಕ ಬೀನ್ಸ್ ತರಿಸಿಕೊಳ್ಳುತ್ತಿದ್ದಾರೆ. ಹುಬ್ಬಳ್ಳಿಗೆ ನಿತ್ಯ ಒಂದು ಟ್ರಕ್ ಬೀನ್ಸ್ ತರಿಸಲಾಗುತ್ತಿದೆ. ಪ್ರತಿ ಟ್ರಕ್ ನಲ್ಲಿ 15 ಟನ್ ಬೀನ್ಸ್ ಸಾಗಾಟ ಮಾಡಲಾಗುತ್ತಿದೆ. ಹುಬ್ಬಳ್ಳಿ ಮತ್ತು ಸುತ್ತಮುತ್ತಲಿನ ಜಿಲ್ಲೆಗಳಿಗೆ ಇಲ್ಲಿಂದಲೇ ಪೂರೈಕೆ ಮಾಡಲಾಗುತ್ತದೆ. ದೂರದ ಊರಿನಿಂದ ತರಿಸುತ್ತಿರುವುದರಿಂದ ದರ ಏರಿಕೆಯಾಗಿದೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

₹1.11 ಕೋಟಿ ಮೌಲ್ಯದ ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ – ಮಹಾರಾಷ್ಟ್ರದ ಕೋಲ್ಡ್ ಸ್ಟೋರೇಜ್‌ನಲ್ಲೂ ಕಳಪೆ ಅಡಿಕೆ ದಾಸ್ತಾನು..!

ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…

37 minutes ago

ಹವಾಮಾನ ವರದಿ | 14.06.2026 | ಜೂನ್ 20ರವರೆಗೆ ಕರಾವಳಿ-ಮಲೆನಾಡಿನಲ್ಲಿ ಇದೇ ವಾತಾವರಣ| ಎಲ್‌ನಿನೋ ಪ್ರಭಾವದ ನಡುವೆ ಮಳೆ ನೀರು ಸಂಗ್ರಹಕ್ಕೆ ರೈತರಿಗೆ ಸಲಹೆ

ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…

8 hours ago

ತುಮಕೂರಿನಲ್ಲಿ ಅಡಿಕೆ ಕ್ರಾಂತಿ -ತೆಂಗಿನ ತೋಟಗಳ ಜಾಗದಲ್ಲಿ ಅಡಿಕೆ ಬೆಳೆ..! 94 ಸಾವಿರ ಹೆಕ್ಟೇರ್‌ ದಾಟಿದ ವಿಸ್ತೀರ್ಣ

ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್‌ ದಾಟಿದ್ದು, ತೆಂಗಿನ…

10 hours ago

ಬ್ರಿಕ್ಸ್ ‘ಇಂದೋರ್ ಘೋಷಣೆ’ ಅಂಗೀಕಾರ – ಜಾಗತಿಕ ಕೃಷಿ ಸಹಕಾರಕ್ಕೆ ಹೊಸ ದಿಕ್ಕು

ಭಾರತದ ಅಧ್ಯಕ್ಷತೆಯಲ್ಲಿ ಬ್ರಿಕ್ಸ್ ರಾಷ್ಟ್ರಗಳು “ಇಂದೋರ್ ಘೋಷಣೆ” ಅಂಗೀಕರಿಸಿದ್ದು, ಆಹಾರ ಭದ್ರತೆ, ಡಿಜಿಟಲ್…

16 hours ago

2026ರಲ್ಲಿ ‘ಸೂಪರ್ ಎಲ್‌ನಿನೊ’ ಎಚ್ಚರಿಕೆ – ಭಾರತದ ಮುಂಗಾರು ಮತ್ತು ಕೃಷಿಗೆ ಹೊಸ ಸವಾಲು?

2026ರಲ್ಲಿ ಎಲ್‌ನಿನೊ ಅಧಿಕೃತವಾಗಿ ಆರಂಭಗೊಂಡಿದ್ದು, ಇದು ಅತ್ಯಂತ ಪ್ರಬಲ "ಸೂಪರ್ ಎಲ್‌ನಿನೊ" ಆಗುವ…

1 day ago

ಉತ್ತರ ಪ್ರದೇಶ ಸರ್ಕಾರದಿಂದ ಭಾರತೀಯ ಸೇನೆಗೆ ದೇಶೀ ಹಸುವಿನ ಹಾಲಿನ ಉತ್ಪನ್ನಗಳು

ಉತ್ತರ ಪ್ರದೇಶ ಸರ್ಕಾರವು ಭಾರತೀಯ ಸೇನೆಗೆ ದೇಶೀ ಹಸುವಿನ ಹಾಲಿನ ಉತ್ಪನ್ನಗಳನ್ನು ಪೂರೈಸಲು…

1 day ago