Advertisement
MIRROR FOCUS

ಮುಂಗಾರು ಆರಂಭವಾಗುತ್ತಿದ್ದಂತೆ ಏರಿದ ತರಕಾರಿ ಬೆಲೆ | ಗಗನಕ್ಕೇರಿದ ಬೀನ್ಸ್‌ ದರ | ಬಡವರ ಪಾಡೇನು..? |

Share

ಬರಗಾಲ(Drought) ಬಂದರೆ ಮಳೆ(Rain) ಇಲ್ಲದೆ ತರಕಾರಿ ರೇಟ್‌(Vegetable rate) ಗಗನಕ್ಕೆ ಹಾರುತ್ತದೆ. ಅದೇ ರೀತಿ ಮಳೆ ಜಾಸ್ತಿಯಾದರು ಮಳೆಗೆ ತರಕಾರಿ ಕೊಳೆತು ದರ ಏರುತ್ತದೆ(Price hike). ಇನ್ನೇನು ಮುಂಗಾರು(Mansoon rain) ಆರಂಭವಾಗಿದೆ. ತರಕಾರಿ ಕೊಳೆಯುವಂತೆ ಇನ್ನು ಮಳೆ ಆರಂಭವಾಗಿಲ್ಲ. ಆದರೂ ತರಕಾರಿ ರೇಟು ಜಾಸ್ತಿಯಾಗಿದೆ. ಯಾವ ತರಕಾರಿ ಬೆಲೆ ಕೇಳಿದರು ತರಕಾರಿ ಕೊಂಡುಕೊಳ್ಳುವುದೇ ಬೇಡ ಅನ್ನಿಸುತ್ತದೆ. ಪ್ರತಿ ವರ್ಷದಂತೆ  ಮಳೆಗಾಲ ಆರಂಭವಾಗುತ್ತಿದ್ದಂತೆ  ತರಕಾರಿ ದರಗಳು ಗಗನಮುಖಿಯಾಗಿವೆ. ಈ ಪೈಕಿ ಬೀನ್ಸ್ ದರ ಡಬಲ್ ಸೆಂಚುರಿ ದಾಟಿದೆ. ದೂರದ ಹಿಮಾಚಲ ಪ್ರದೇಶದಿಂದ(Himachala Pradesh) ಬೀನ್ಸ್ (Beans Price Hike) ತರಲಾಗ್ತಿದ್ದು, ಸದ್ಯಕ್ಕೆ ಬೀನ್ಸ್ ಶ್ರೀಮಂತರ ತರಕಾರಿಯಾಗಿ ಮಾರ್ಪಟ್ಟಿದೆ.

ತರಕಾರಿ ದರ ಏರುತ್ತಲೇ ಇದ್ದು, ಗ್ರಾಹಕರಿಗೆ ಬಹುದೊಡ್ಡ ಹೊರೆಯಾಗಿ ಪರಿಣಮಿಸಿದೆ. ಮಳೆ ಹೆಚ್ಚಾಗುತ್ತಿದ್ದಂತೆಯೇ ತರಕಾರಿ ದರವೂ ಗಗನಕ್ಕೇರಿದೆ. ಅದ್ರಲ್ಲೂ ಬೀನ್ಸ್ ದರ ದಾಖಲೆ ಪ್ರಮಾಣದಲ್ಲಿ ಏರಿಕೆ ಕಂಡಿದೆ. ಹೋಲ್ ಸೇಲ್ ದರವೇ ಡಬಲ್ ಸೆಂಚುರಿ ದಾಟಿ, ಗ್ರಾಹಕರನ್ನು ಹುಬ್ಬೇರುವಂತೆ ಮಾಡಿದೆ. ರೀಟೇಲ್‌ನಲ್ಲಿ ಪ್ರತಿ ಕೆಜಿ ಗೆ 200 ಕ್ಕೂ ಹೆಚ್ಚು ದರ ನಿಗದಿಯಾಗುತ್ತಿದೆ.

ಬೀನ್ಸ್ ದರ ಏರಿಕೆಗೆ ಇದೇ ಕಾರಣ : ಕಳೆದ ವರ್ಷದ ಬರಗಾಲದಿಂದ ರಾಜ್ಯದಲ್ಲಿ ಎಲ್ಲಿಯೂ ನಿರೀಕ್ಷಿತ ಮಟ್ಟದಲ್ಲಿ ಬೀನ್ಸ್ ಬೆಳೆದಿಲ್ಲ. ಹೀಗಾಗಿ ದೂರದ ಹಿಮಾಚಲ ಪ್ರದೇಶದಿಂದ ಬೀನ್ಸ್ ಖರೀದಿ ಮಾಡುವ ಅನಿವಾರ್ಯತೆ ಸೃಷ್ಟಿಯಾಗಿದೆ. ಹುಬ್ಬಳ್ಳಿ ವರ್ತಕರು ದೆಹಲಿ ಮೂಲಕ ಬೀನ್ಸ್ ತರಿಸಿಕೊಳ್ಳುತ್ತಿದ್ದಾರೆ. ಹುಬ್ಬಳ್ಳಿಗೆ ನಿತ್ಯ ಒಂದು ಟ್ರಕ್ ಬೀನ್ಸ್ ತರಿಸಲಾಗುತ್ತಿದೆ. ಪ್ರತಿ ಟ್ರಕ್ ನಲ್ಲಿ 15 ಟನ್ ಬೀನ್ಸ್ ಸಾಗಾಟ ಮಾಡಲಾಗುತ್ತಿದೆ. ಹುಬ್ಬಳ್ಳಿ ಮತ್ತು ಸುತ್ತಮುತ್ತಲಿನ ಜಿಲ್ಲೆಗಳಿಗೆ ಇಲ್ಲಿಂದಲೇ ಪೂರೈಕೆ ಮಾಡಲಾಗುತ್ತದೆ. ದೂರದ ಊರಿನಿಂದ ತರಿಸುತ್ತಿರುವುದರಿಂದ ದರ ಏರಿಕೆಯಾಗಿದೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

2 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

2 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

3 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

4 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

4 days ago