Advertisement
MIRROR FOCUS

ಮುಂಗಾರು ಆರಂಭವಾಗುತ್ತಿದ್ದಂತೆ ಏರಿದ ತರಕಾರಿ ಬೆಲೆ | ಗಗನಕ್ಕೇರಿದ ಬೀನ್ಸ್‌ ದರ | ಬಡವರ ಪಾಡೇನು..? |

Share

ಬರಗಾಲ(Drought) ಬಂದರೆ ಮಳೆ(Rain) ಇಲ್ಲದೆ ತರಕಾರಿ ರೇಟ್‌(Vegetable rate) ಗಗನಕ್ಕೆ ಹಾರುತ್ತದೆ. ಅದೇ ರೀತಿ ಮಳೆ ಜಾಸ್ತಿಯಾದರು ಮಳೆಗೆ ತರಕಾರಿ ಕೊಳೆತು ದರ ಏರುತ್ತದೆ(Price hike). ಇನ್ನೇನು ಮುಂಗಾರು(Mansoon rain) ಆರಂಭವಾಗಿದೆ. ತರಕಾರಿ ಕೊಳೆಯುವಂತೆ ಇನ್ನು ಮಳೆ ಆರಂಭವಾಗಿಲ್ಲ. ಆದರೂ ತರಕಾರಿ ರೇಟು ಜಾಸ್ತಿಯಾಗಿದೆ. ಯಾವ ತರಕಾರಿ ಬೆಲೆ ಕೇಳಿದರು ತರಕಾರಿ ಕೊಂಡುಕೊಳ್ಳುವುದೇ ಬೇಡ ಅನ್ನಿಸುತ್ತದೆ. ಪ್ರತಿ ವರ್ಷದಂತೆ  ಮಳೆಗಾಲ ಆರಂಭವಾಗುತ್ತಿದ್ದಂತೆ  ತರಕಾರಿ ದರಗಳು ಗಗನಮುಖಿಯಾಗಿವೆ. ಈ ಪೈಕಿ ಬೀನ್ಸ್ ದರ ಡಬಲ್ ಸೆಂಚುರಿ ದಾಟಿದೆ. ದೂರದ ಹಿಮಾಚಲ ಪ್ರದೇಶದಿಂದ(Himachala Pradesh) ಬೀನ್ಸ್ (Beans Price Hike) ತರಲಾಗ್ತಿದ್ದು, ಸದ್ಯಕ್ಕೆ ಬೀನ್ಸ್ ಶ್ರೀಮಂತರ ತರಕಾರಿಯಾಗಿ ಮಾರ್ಪಟ್ಟಿದೆ.

ತರಕಾರಿ ದರ ಏರುತ್ತಲೇ ಇದ್ದು, ಗ್ರಾಹಕರಿಗೆ ಬಹುದೊಡ್ಡ ಹೊರೆಯಾಗಿ ಪರಿಣಮಿಸಿದೆ. ಮಳೆ ಹೆಚ್ಚಾಗುತ್ತಿದ್ದಂತೆಯೇ ತರಕಾರಿ ದರವೂ ಗಗನಕ್ಕೇರಿದೆ. ಅದ್ರಲ್ಲೂ ಬೀನ್ಸ್ ದರ ದಾಖಲೆ ಪ್ರಮಾಣದಲ್ಲಿ ಏರಿಕೆ ಕಂಡಿದೆ. ಹೋಲ್ ಸೇಲ್ ದರವೇ ಡಬಲ್ ಸೆಂಚುರಿ ದಾಟಿ, ಗ್ರಾಹಕರನ್ನು ಹುಬ್ಬೇರುವಂತೆ ಮಾಡಿದೆ. ರೀಟೇಲ್‌ನಲ್ಲಿ ಪ್ರತಿ ಕೆಜಿ ಗೆ 200 ಕ್ಕೂ ಹೆಚ್ಚು ದರ ನಿಗದಿಯಾಗುತ್ತಿದೆ.

ಬೀನ್ಸ್ ದರ ಏರಿಕೆಗೆ ಇದೇ ಕಾರಣ : ಕಳೆದ ವರ್ಷದ ಬರಗಾಲದಿಂದ ರಾಜ್ಯದಲ್ಲಿ ಎಲ್ಲಿಯೂ ನಿರೀಕ್ಷಿತ ಮಟ್ಟದಲ್ಲಿ ಬೀನ್ಸ್ ಬೆಳೆದಿಲ್ಲ. ಹೀಗಾಗಿ ದೂರದ ಹಿಮಾಚಲ ಪ್ರದೇಶದಿಂದ ಬೀನ್ಸ್ ಖರೀದಿ ಮಾಡುವ ಅನಿವಾರ್ಯತೆ ಸೃಷ್ಟಿಯಾಗಿದೆ. ಹುಬ್ಬಳ್ಳಿ ವರ್ತಕರು ದೆಹಲಿ ಮೂಲಕ ಬೀನ್ಸ್ ತರಿಸಿಕೊಳ್ಳುತ್ತಿದ್ದಾರೆ. ಹುಬ್ಬಳ್ಳಿಗೆ ನಿತ್ಯ ಒಂದು ಟ್ರಕ್ ಬೀನ್ಸ್ ತರಿಸಲಾಗುತ್ತಿದೆ. ಪ್ರತಿ ಟ್ರಕ್ ನಲ್ಲಿ 15 ಟನ್ ಬೀನ್ಸ್ ಸಾಗಾಟ ಮಾಡಲಾಗುತ್ತಿದೆ. ಹುಬ್ಬಳ್ಳಿ ಮತ್ತು ಸುತ್ತಮುತ್ತಲಿನ ಜಿಲ್ಲೆಗಳಿಗೆ ಇಲ್ಲಿಂದಲೇ ಪೂರೈಕೆ ಮಾಡಲಾಗುತ್ತದೆ. ದೂರದ ಊರಿನಿಂದ ತರಿಸುತ್ತಿರುವುದರಿಂದ ದರ ಏರಿಕೆಯಾಗಿದೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

15 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

1 day ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

1 day ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

1 day ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

1 day ago