Advertisement
MIRROR FOCUS

ಮುಂಗಾರು ಆರಂಭವಾಗುತ್ತಿದ್ದಂತೆ ಏರಿದ ತರಕಾರಿ ಬೆಲೆ | ಗಗನಕ್ಕೇರಿದ ಬೀನ್ಸ್‌ ದರ | ಬಡವರ ಪಾಡೇನು..? |

Share

ಬರಗಾಲ(Drought) ಬಂದರೆ ಮಳೆ(Rain) ಇಲ್ಲದೆ ತರಕಾರಿ ರೇಟ್‌(Vegetable rate) ಗಗನಕ್ಕೆ ಹಾರುತ್ತದೆ. ಅದೇ ರೀತಿ ಮಳೆ ಜಾಸ್ತಿಯಾದರು ಮಳೆಗೆ ತರಕಾರಿ ಕೊಳೆತು ದರ ಏರುತ್ತದೆ(Price hike). ಇನ್ನೇನು ಮುಂಗಾರು(Mansoon rain) ಆರಂಭವಾಗಿದೆ. ತರಕಾರಿ ಕೊಳೆಯುವಂತೆ ಇನ್ನು ಮಳೆ ಆರಂಭವಾಗಿಲ್ಲ. ಆದರೂ ತರಕಾರಿ ರೇಟು ಜಾಸ್ತಿಯಾಗಿದೆ. ಯಾವ ತರಕಾರಿ ಬೆಲೆ ಕೇಳಿದರು ತರಕಾರಿ ಕೊಂಡುಕೊಳ್ಳುವುದೇ ಬೇಡ ಅನ್ನಿಸುತ್ತದೆ. ಪ್ರತಿ ವರ್ಷದಂತೆ  ಮಳೆಗಾಲ ಆರಂಭವಾಗುತ್ತಿದ್ದಂತೆ  ತರಕಾರಿ ದರಗಳು ಗಗನಮುಖಿಯಾಗಿವೆ. ಈ ಪೈಕಿ ಬೀನ್ಸ್ ದರ ಡಬಲ್ ಸೆಂಚುರಿ ದಾಟಿದೆ. ದೂರದ ಹಿಮಾಚಲ ಪ್ರದೇಶದಿಂದ(Himachala Pradesh) ಬೀನ್ಸ್ (Beans Price Hike) ತರಲಾಗ್ತಿದ್ದು, ಸದ್ಯಕ್ಕೆ ಬೀನ್ಸ್ ಶ್ರೀಮಂತರ ತರಕಾರಿಯಾಗಿ ಮಾರ್ಪಟ್ಟಿದೆ.

ತರಕಾರಿ ದರ ಏರುತ್ತಲೇ ಇದ್ದು, ಗ್ರಾಹಕರಿಗೆ ಬಹುದೊಡ್ಡ ಹೊರೆಯಾಗಿ ಪರಿಣಮಿಸಿದೆ. ಮಳೆ ಹೆಚ್ಚಾಗುತ್ತಿದ್ದಂತೆಯೇ ತರಕಾರಿ ದರವೂ ಗಗನಕ್ಕೇರಿದೆ. ಅದ್ರಲ್ಲೂ ಬೀನ್ಸ್ ದರ ದಾಖಲೆ ಪ್ರಮಾಣದಲ್ಲಿ ಏರಿಕೆ ಕಂಡಿದೆ. ಹೋಲ್ ಸೇಲ್ ದರವೇ ಡಬಲ್ ಸೆಂಚುರಿ ದಾಟಿ, ಗ್ರಾಹಕರನ್ನು ಹುಬ್ಬೇರುವಂತೆ ಮಾಡಿದೆ. ರೀಟೇಲ್‌ನಲ್ಲಿ ಪ್ರತಿ ಕೆಜಿ ಗೆ 200 ಕ್ಕೂ ಹೆಚ್ಚು ದರ ನಿಗದಿಯಾಗುತ್ತಿದೆ.

ಬೀನ್ಸ್ ದರ ಏರಿಕೆಗೆ ಇದೇ ಕಾರಣ : ಕಳೆದ ವರ್ಷದ ಬರಗಾಲದಿಂದ ರಾಜ್ಯದಲ್ಲಿ ಎಲ್ಲಿಯೂ ನಿರೀಕ್ಷಿತ ಮಟ್ಟದಲ್ಲಿ ಬೀನ್ಸ್ ಬೆಳೆದಿಲ್ಲ. ಹೀಗಾಗಿ ದೂರದ ಹಿಮಾಚಲ ಪ್ರದೇಶದಿಂದ ಬೀನ್ಸ್ ಖರೀದಿ ಮಾಡುವ ಅನಿವಾರ್ಯತೆ ಸೃಷ್ಟಿಯಾಗಿದೆ. ಹುಬ್ಬಳ್ಳಿ ವರ್ತಕರು ದೆಹಲಿ ಮೂಲಕ ಬೀನ್ಸ್ ತರಿಸಿಕೊಳ್ಳುತ್ತಿದ್ದಾರೆ. ಹುಬ್ಬಳ್ಳಿಗೆ ನಿತ್ಯ ಒಂದು ಟ್ರಕ್ ಬೀನ್ಸ್ ತರಿಸಲಾಗುತ್ತಿದೆ. ಪ್ರತಿ ಟ್ರಕ್ ನಲ್ಲಿ 15 ಟನ್ ಬೀನ್ಸ್ ಸಾಗಾಟ ಮಾಡಲಾಗುತ್ತಿದೆ. ಹುಬ್ಬಳ್ಳಿ ಮತ್ತು ಸುತ್ತಮುತ್ತಲಿನ ಜಿಲ್ಲೆಗಳಿಗೆ ಇಲ್ಲಿಂದಲೇ ಪೂರೈಕೆ ಮಾಡಲಾಗುತ್ತದೆ. ದೂರದ ಊರಿನಿಂದ ತರಿಸುತ್ತಿರುವುದರಿಂದ ದರ ಏರಿಕೆಯಾಗಿದೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

2 hours ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

3 hours ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

1 day ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

2 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago