Advertisement
MIRROR FOCUS

ಮುಂಗಾರು ಆರಂಭವಾಗುತ್ತಿದ್ದಂತೆ ಏರಿದ ತರಕಾರಿ ಬೆಲೆ | ಗಗನಕ್ಕೇರಿದ ಬೀನ್ಸ್‌ ದರ | ಬಡವರ ಪಾಡೇನು..? |

Share

ಬರಗಾಲ(Drought) ಬಂದರೆ ಮಳೆ(Rain) ಇಲ್ಲದೆ ತರಕಾರಿ ರೇಟ್‌(Vegetable rate) ಗಗನಕ್ಕೆ ಹಾರುತ್ತದೆ. ಅದೇ ರೀತಿ ಮಳೆ ಜಾಸ್ತಿಯಾದರು ಮಳೆಗೆ ತರಕಾರಿ ಕೊಳೆತು ದರ ಏರುತ್ತದೆ(Price hike). ಇನ್ನೇನು ಮುಂಗಾರು(Mansoon rain) ಆರಂಭವಾಗಿದೆ. ತರಕಾರಿ ಕೊಳೆಯುವಂತೆ ಇನ್ನು ಮಳೆ ಆರಂಭವಾಗಿಲ್ಲ. ಆದರೂ ತರಕಾರಿ ರೇಟು ಜಾಸ್ತಿಯಾಗಿದೆ. ಯಾವ ತರಕಾರಿ ಬೆಲೆ ಕೇಳಿದರು ತರಕಾರಿ ಕೊಂಡುಕೊಳ್ಳುವುದೇ ಬೇಡ ಅನ್ನಿಸುತ್ತದೆ. ಪ್ರತಿ ವರ್ಷದಂತೆ  ಮಳೆಗಾಲ ಆರಂಭವಾಗುತ್ತಿದ್ದಂತೆ  ತರಕಾರಿ ದರಗಳು ಗಗನಮುಖಿಯಾಗಿವೆ. ಈ ಪೈಕಿ ಬೀನ್ಸ್ ದರ ಡಬಲ್ ಸೆಂಚುರಿ ದಾಟಿದೆ. ದೂರದ ಹಿಮಾಚಲ ಪ್ರದೇಶದಿಂದ(Himachala Pradesh) ಬೀನ್ಸ್ (Beans Price Hike) ತರಲಾಗ್ತಿದ್ದು, ಸದ್ಯಕ್ಕೆ ಬೀನ್ಸ್ ಶ್ರೀಮಂತರ ತರಕಾರಿಯಾಗಿ ಮಾರ್ಪಟ್ಟಿದೆ.

ತರಕಾರಿ ದರ ಏರುತ್ತಲೇ ಇದ್ದು, ಗ್ರಾಹಕರಿಗೆ ಬಹುದೊಡ್ಡ ಹೊರೆಯಾಗಿ ಪರಿಣಮಿಸಿದೆ. ಮಳೆ ಹೆಚ್ಚಾಗುತ್ತಿದ್ದಂತೆಯೇ ತರಕಾರಿ ದರವೂ ಗಗನಕ್ಕೇರಿದೆ. ಅದ್ರಲ್ಲೂ ಬೀನ್ಸ್ ದರ ದಾಖಲೆ ಪ್ರಮಾಣದಲ್ಲಿ ಏರಿಕೆ ಕಂಡಿದೆ. ಹೋಲ್ ಸೇಲ್ ದರವೇ ಡಬಲ್ ಸೆಂಚುರಿ ದಾಟಿ, ಗ್ರಾಹಕರನ್ನು ಹುಬ್ಬೇರುವಂತೆ ಮಾಡಿದೆ. ರೀಟೇಲ್‌ನಲ್ಲಿ ಪ್ರತಿ ಕೆಜಿ ಗೆ 200 ಕ್ಕೂ ಹೆಚ್ಚು ದರ ನಿಗದಿಯಾಗುತ್ತಿದೆ.

ಬೀನ್ಸ್ ದರ ಏರಿಕೆಗೆ ಇದೇ ಕಾರಣ : ಕಳೆದ ವರ್ಷದ ಬರಗಾಲದಿಂದ ರಾಜ್ಯದಲ್ಲಿ ಎಲ್ಲಿಯೂ ನಿರೀಕ್ಷಿತ ಮಟ್ಟದಲ್ಲಿ ಬೀನ್ಸ್ ಬೆಳೆದಿಲ್ಲ. ಹೀಗಾಗಿ ದೂರದ ಹಿಮಾಚಲ ಪ್ರದೇಶದಿಂದ ಬೀನ್ಸ್ ಖರೀದಿ ಮಾಡುವ ಅನಿವಾರ್ಯತೆ ಸೃಷ್ಟಿಯಾಗಿದೆ. ಹುಬ್ಬಳ್ಳಿ ವರ್ತಕರು ದೆಹಲಿ ಮೂಲಕ ಬೀನ್ಸ್ ತರಿಸಿಕೊಳ್ಳುತ್ತಿದ್ದಾರೆ. ಹುಬ್ಬಳ್ಳಿಗೆ ನಿತ್ಯ ಒಂದು ಟ್ರಕ್ ಬೀನ್ಸ್ ತರಿಸಲಾಗುತ್ತಿದೆ. ಪ್ರತಿ ಟ್ರಕ್ ನಲ್ಲಿ 15 ಟನ್ ಬೀನ್ಸ್ ಸಾಗಾಟ ಮಾಡಲಾಗುತ್ತಿದೆ. ಹುಬ್ಬಳ್ಳಿ ಮತ್ತು ಸುತ್ತಮುತ್ತಲಿನ ಜಿಲ್ಲೆಗಳಿಗೆ ಇಲ್ಲಿಂದಲೇ ಪೂರೈಕೆ ಮಾಡಲಾಗುತ್ತದೆ. ದೂರದ ಊರಿನಿಂದ ತರಿಸುತ್ತಿರುವುದರಿಂದ ದರ ಏರಿಕೆಯಾಗಿದೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆಯಿಂದ ಹಲಸಿನತ್ತ “ಸಂತೋಷ” ಪಯಣ – ನೀರಿನ ಕೊರತೆಯ ಸವಾಲನ್ನು ಅವಕಾಶವಾಗಿಸಿದ ಕೃಷಿಕ

ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…

2 hours ago

ಬಾಳ ಮಧ್ಯಾಹ್ನದ ಲಹರಿ

"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…

4 hours ago

ಹವಾಮಾನ ವರದಿ | 05-07-2026 | ರಾಜ್ಯದಲ್ಲಿ ಮಳೆ ಇಳಿಮುಖದತ್ತ? ಜುಲೈ 8–10 ರಿಂದ ಹವಾಮಾನದಲ್ಲಿ ಬದಲಾವಣೆ ಸಾಧ್ಯತೆ

ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…

5 hours ago

ಮುಂಗಾರು ಮತ್ತಷ್ಟು ಚುರುಕು- ವಾಯುಭಾರ ಕುಸಿತದ ಲಕ್ಷಣ | ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ IMD ಎಚ್ಚರಿಕೆ ನೀಡಿ

ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…

8 hours ago

ಅಡಿಕೆ ಕಳ್ಳಸಾಗಣೆ ಪ್ರಕರಣ – ಸಿಲ್ಚಾರ್ ಉದ್ಯಮಿಯ ಮನೆ ಮೇಲೆ ಇ.ಡಿ. ದಾಳಿ, ಹಣ ಅಕ್ರಮ ವರ್ಗಾವಣೆ ತನಿಖೆ ತೀವ್ರ

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…

9 hours ago

ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ

ಈ ವಾರದ ಚಿಂತನೆ - "ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ"

12 hours ago