Opinion

ಬಿಸಿಲ ಬೇಗೆ ಏರುತ್ತಿದ್ದಂತೆ ಸಾಮಾನ್ಯವಾಗಿ ಕಾಡುವ ಸಮಸ್ಯೆ | ಉರಿಮೂತ್ರ ಏಕಾಗುತ್ತದೆ? ಮನೆಮದ್ದುಗಳನ್ನು ನೋಡಿ!!

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಬಿಸಿಲು ಬೇಗೆ(Summer) ಏರಿದಂತೆ, ತಾಪ(Temparature) ಹೆಚ್ಚಾದಾಗ ಅನೇಕರಿಗೆ ಹೊಸ ಸಂಕಟ ಶುರುವಾಗುತ್ತದೆ. ಅದೆಂದರೆ ಉರಿಮೂತ್ರ. ಮೂತ್ರ ವಿಸರ್ಜಿಸುವಾಗ ವಿಪರೀತ ಉರಿ, ಮೂತ್ರನಾಳದ ಉರಿಯೂತ ಮತ್ತು ಕೆಲವೊಮ್ಮೆ ರಕ್ತಸ್ರಾವವಾಗುತ್ತದೆ. ಈ ಸಮಸ್ಯೆ ಮುಖ್ಯವಾಗಿ ಬೇಸಿಗೆಯಲ್ಲಿ ಕಂಡುಬರುತ್ತದೆ. ಅಂತಹ ಸಂದರ್ಭಗಳಲ್ಲಿ ಮೂತ್ರದಲ್ಲಿ ರಕ್ತ ಅಥವಾ ಮೋಡದ ಇಲ್ಲವೆ ಕೆಂಪು ಕಂದು ಬಣ್ಣಕ್ಕೆ ತಿರುಗುತ್ತದೆ. ಬೇಸಿಗೆಯ ಈ ಸಮಸ್ಯೆಯನ್ನು ಹೇಗೆ ಎದುರಿಸುವುದು ಮತ್ತು ಅದರ ಮನೆಮದ್ದುಗಳನ್ನು ನಾವು ನೋಡಲಿದ್ದೇವೆ!!

Advertisement
Advertisement

ಉರಿಮೂತ್ರಕ್ಕೆ ಕಾರಣಗಳು..! : ಬೇಸಿಗೆಯಲ್ಲಿ ಬೆವರಿನಿಂದ ದೇಹದಲ್ಲಿ ನೀರಿನ ಪ್ರಮಾಣ ಕಡಿಮೆಯಾಗುತ್ತದೆ. ನೀರಿನ ನಷ್ಟವು ಮೂತ್ರದಲ್ಲಿ ಉಪ್ಪಿನ ಪ್ರಮಾಣವನ್ನು ಹೆಚ್ಚಿಸುತ್ತದೆ. ಮೂತ್ರದಲ್ಲಿ ಈ ಅಧಿಕ ಸಾಂದ್ರತೆಯ ಉಪ್ಪಿನಂಶ ಮೂತ್ರ ವಿಸರ್ಜನೆಯ ಸಮಯದಲ್ಲಿ ಉರಿತವನ್ನು ಉಂಟುಮಾಡುತ್ತದೆ’. ಈ ಸಮಸ್ಯೆ ಪುರುಷರು ಹಾಗೂ ಮಹಿಳೆಯರಲ್ಲಿ ಸ್ವಲ್ಪ ಭಿನ್ನವಾಗಿ ಕಂಡುಬರುತ್ತದೆ. ಪುರುಷರಲ್ಲಿ, ಮೂತ್ರ ಮತ್ತು ಮೂತ್ರನಾಳದ ಉರಿ ಮತ್ತು ಸುಡುವಿಕೆಯಂತಹ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ, ಆದರೆ, ಮಹಿಳೆಯರಲ್ಲಿ, ಅದೇ ರೋಗಲಕ್ಷಣಗಳು ಸ್ವಲ್ಪ ಹೆಚ್ಚು ತೀವ್ರವಾಗಿರುತ್ತವೆ. ಮಹಿಳೆಯರು ಸುಡುವ ಸಂವೇದನೆ ಮತ್ತು ಮೂತ್ರದಲ್ಲಿ ರಕ್ತಸ್ರಾವದಿಂದ ಬಳಲುತ್ತಾರೆ. ಇದರಿಂದ, ಚಿಕ್ಕ ಮಕ್ಕಳೂ ಕೂಡ ಹೊರತಾಗಿಲ್ಲ. , ಈ ಸಮಸ್ಯೆಗೆ ಕೆಲವು ಮನೆಮದ್ದುಗಳಿವೆ. ಬನ್ನಿನೋಡೋಣ!! . . .

ಪರಿಹಾರ
1. ಮೊದಲ ಮತ್ತು ಅಗ್ರಗಣ್ಯ ಪರಿಹಾರವೆಂದರೆ ‘ಸಾಕಷ್ಟು ನೀರು ಕುಡಿಯುವುದು.’
2. ಅಡುಗೆ ಸೋಡಾ ಮತ್ತು ನಿಂಬೆಯನ್ನು ನೀರಿನಲ್ಲಿ ಬೆರೆಸಿ ಕುಡಿಯುವುದರಿಂದ ಸಮಸ್ಯೆ ಕಡಿಮೆಯಾಗುತ್ತದೆ.
3. ಎಳನೀರನ್ನು ಕುಡಿಯಿರಿ.
4. ಕೊತ್ತಂಬರಿ ಬೀಜ, ಜೀರಿಗೆ, ಸೋಂಪನ್ನು ನೆನೆಸಿ, ಅದರಲ್ಲಿ ಕಲ್ಲು ಸಕ್ಕರೆ ಬೆರೆಸಿ ಕುಡಿಯಿರಿ.
5. ಅಧಿಕ ನೀರಿನಂಶ ಇರುವ ಹಂಗಾಮಿ ಹೆಣ್ಣುಗಳ ರಸವನ್ನು ಕುಡಿಯಿರಿ. ಉದಾ. ಕಲ್ಲಂಗಡಿ, ಪುಟ್ಟಿ ಹಣ್ಣು, ಕಿತ್ತಳೆ, ಮೋಸಂಬಿ, ಇತ್ಯಾದಿ. ಹಣ್ಣುಗಳನ್ನು ತಿನ್ನುವುದು ಇನ್ನೂ ಉತ್ತಮ.
6. ಕೊತ್ತಂಬರಿ ಸೊಪ್ಪು ಮತ್ತು ಬೆಲ್ಲದೊಂದಿಗೆ ಎಳೆನೀರನ್ನು ಕುಡಿಯಿರಿ.
7. ನೀರಾ ಕುಡಿಯುವುದು ಕೂಡ ಪ್ರಯೋಜನಕಾರಿ.

8. ಆಮ್ಸೋಲ್ (ಕೋಕಂ) ನೀರು, ಅಥವಾ ಅದರ ಪಾನಕ/ಶರಬತ್ತು ಮಾಡಿ ಕುಡಿಯಬಹುದು.
9. ಕಚ್ಚಾ ಮಾವಿನ ಪಾನಕದಲ್ಲಿ ಏಲಕ್ಕಿ ಬೆರೆಸಿ ಸೇವಿಸಬಹುದು.
10. ಪುದೀನಾ ನೀರು ಕುಡಿಯಿರಿ!!
11. ಪ್ರತಿದಿನ ಒಂದೆರಡು ಏಲಕ್ಕಿಯನ್ನು ತಿನ್ನಬೇಕು.
12. ನೆನೆಸಿದ ಸುಣ್ಣವನ್ನು ಮಕ್ಕಳ ಈ ಲೇಪಿಸಿಕೊಳ್ಳಿ. ಇದರಿಂದ ತಕ್ಷಣದ ಪರಿಹಾರ ದೊರೆಯುತ್ತದೆ.
13 ಒಂದು ಬಕೆಟ್‌ಗೆ ತಣ್ಣೀರು ತುಂಬಿಸಿ ಅದರಲ್ಲಿ ನಿಮ್ಮ ಕಾಲುಗಳನ್ನು ಇಟ್ಟು ಕೆಲ ನಿಮಿಷ ಕುಳಿತುಕೊಳ್ಳಿ…

ಕನ್ನಡಕ್ಕೆ: ಡಾ. ಪ್ರ. ಅ. ಕುಲಕರ್ಣಿ

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡುಗೆಯ ಕಚ್ಚಾ ಎಣ್ಣೆಯ ಮೇಲಿನ ಆಮದು ಸುಂಕ ಕಡಿತ | ತೆಂಗಿಗಿಲ್ಲ ಆತಂಕ.. | ಧಾರಣೆ ಇಳಿಕೆಯ ಆತಂಕವಿಲ್ಲ |

ಆಮದಾಗುವ ಕಚ್ಚಾ ಉತ್ಪನ್ನದ ಪ್ರಭಾವ ತೆಂಗು ಮತ್ತು ಅದರ ಉತ್ಪನ್ನಗಳ ಮೇಲೆ ಇಲ್ಲದೇ…

11 hours ago

ಅರಣ್ಯದ ಬಗ್ಗೆ ಹೊಸ ಪ್ರಜ್ಞೆಯನ್ನು ಜನರು ಜಾಗೃತಗೊಳಿಸಬೇಕು

"ಜನರು ಪ್ರಕೃತಿಯ ಬಗ್ಗೆ ಪ್ರೀತಿ ಮತ್ತು ಗೌರವ, ಸರಳ ಜೀವನಶೈಲಿ ಮತ್ತು ಅರಣ್ಯದ…

14 hours ago

ಒಂದು ಕ್ರೀಡಾ ಗೆಲುವಿಗೆ ಅಷ್ಟು ಅತಿರೇಕದ ಪ್ರತಿಕ್ರಿಯೆ ಒಳ್ಳೆಯ ಲಕ್ಷಣವಲ್ಲ……

ಕ್ರೀಡೆಯನ್ನು ಅಸಹಜ ಶಕ್ತಿಯ ರೂಪದಲ್ಲಿ ನೋಡಿದರೆ ಅದು ತನ್ನ ಮೂಲ‌ ಆಶಯವನ್ನೇ ಕಳೆದುಕೊಳ್ಳುತ್ತದೆ.…

15 hours ago

ಸೂರ್ಯ-ಶನಿಯಿಂದ ಶಕ್ತಿಶಾಲಿ ಪಂಚಮಿ ಯೋಗ.. | ಏನಿದು ಯೋಗ..? ಯಾವ ರಾಶಿಗೆ ವಿಶೇಷವಾದ ಅನುಕೂಲ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

15 hours ago

ಐಪಿಎಲ್‌ ಫೈನಲ್‌ ಕದನ | ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಭರ್ಜರಿ ಗೆಲವು

ಐಪಿಎಲ್  ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು…

20 hours ago

ಈಶಾನ್ಯ ರಾಜ್ಯಗಳಲ್ಲಿ ಭಾರಿ ಮಳೆಯಿಂದ ಪ್ರವಾಹ | ನೂರಾರು ಗ್ರಾಮಗಳು ಜಲಾವೃತ, ಬೆಳೆ ನಷ್ಟ | 5 ಲಕ್ಷಕ್ಕೂ ಅಧಿಕ ಜನರು ಸಂತ್ರಸ್ತರು |

ಈಶಾನ್ಯ ರಾಜ್ಯಗಳ ಬಹುತೇಕ ಭಾಗಗಳಲ್ಲಿ ಮುಂದುವರಿದ ಭಾರಿ ಮಳೆಯಿಂದ ಪ್ರವಾಹ ಉಂಟಾಗಿದೆ. ಮಣಿಪುರ,…

23 hours ago