ಸ್ವಚ್ಛತಾ ಅಭಿಯಾನಕ್ಕೆ 10 ವರ್ಷಗಳು ಸಲ್ಲುತ್ತಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ ಸ್ವಚ್ಛತೆಯೇ ಸೇವೆ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.ಅಭಿಯಾನ ಇದೇ 17ರಿಂದ ಅಕ್ಟೋಬರ್ 2 ರವರೆಗೆ 15 ದಿನಗಳ ಕಾಲ ನಡೆಯಲಿದೆ.
ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಖಾತೆ ರಾಜ್ಯ ಸಚಿವ ಮನೋಹರ್ ಲಾಲ್ ಮಾತನಾಡಿ, ಈ ಬಾರಿ ಸ್ವಭಾವ ಸ್ವಚ್ಛತೆ- ಸಂಸ್ಕಾರ ಸ್ವಚ್ಛತೆ ಎನ್ನುವ ಘೋಷವಾಕ್ಯದ ಅಡಿಯಲ್ಲಿ ಅಭಿಯಾನ ನಡೆಯಲಿದೆ. ಈ ಸಮಯದಲ್ಲಿ ಸ್ವಚ್ಛತಾ ಕಾರ್ಮಿಕರಿಗೆ ವಿಶೇಷ ತರಬೇತಿ ಶಿಬಿರಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು. ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್, ಸ್ವಚ್ಛತಾ ಕಾರ್ಯಕ್ರಮಗಳಿಗೆ ಕೇಂದ್ರ ಸರ್ಕಾರ ಈವರೆಗೆ 2 ಲಕ್ಷದ 4 ಕೋಟಿ ರೂಪಾಯಿಗಳ ಅನುದಾನ ನೀಡಿದೆ. ದೇಶದಲ್ಲಿ 11 ಕೋಟಿ ಶೌಚಾಲಯಗಳನ್ನು ನಿರ್ಮಿಸಲಾಗಿದೆ. ಇದರಿಂದ ಕೋಟ್ಯಂತರ ಜನರ ಜೀವನ ಮಟ್ಟದಲ್ಲಿ ಸುಧಾರಣೆಯಾಗಿದೆ, ಆರೋಗ್ಯದ ಮೇಲೆ ಸಕಾರಾತ್ಮಕ ಪರಿಣಾಮ ಉಂಟಾಗಿದೆ. ವಿಶ್ವ ಆರೋಗ್ಯ ಸಂಸ್ಥೆಯ ವರದಿ ಪ್ರಕಾರ, 3 ಲಕ್ಷಕ್ಕೂ ಅಧಿಕ ಮಕ್ಕಳ ಜೀವ ರಕ್ಷಣೆಯಾಗಿದೆ ಎಂದು ತಿಳಿಸಿದರು.
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…