ಸ್ವಚ್ಛತಾ ಅಭಿಯಾನಕ್ಕೆ 10 ವರ್ಷಗಳು ಸಲ್ಲುತ್ತಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ ಸ್ವಚ್ಛತೆಯೇ ಸೇವೆ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.ಅಭಿಯಾನ ಇದೇ 17ರಿಂದ ಅಕ್ಟೋಬರ್ 2 ರವರೆಗೆ 15 ದಿನಗಳ ಕಾಲ ನಡೆಯಲಿದೆ.
ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಖಾತೆ ರಾಜ್ಯ ಸಚಿವ ಮನೋಹರ್ ಲಾಲ್ ಮಾತನಾಡಿ, ಈ ಬಾರಿ ಸ್ವಭಾವ ಸ್ವಚ್ಛತೆ- ಸಂಸ್ಕಾರ ಸ್ವಚ್ಛತೆ ಎನ್ನುವ ಘೋಷವಾಕ್ಯದ ಅಡಿಯಲ್ಲಿ ಅಭಿಯಾನ ನಡೆಯಲಿದೆ. ಈ ಸಮಯದಲ್ಲಿ ಸ್ವಚ್ಛತಾ ಕಾರ್ಮಿಕರಿಗೆ ವಿಶೇಷ ತರಬೇತಿ ಶಿಬಿರಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು. ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್, ಸ್ವಚ್ಛತಾ ಕಾರ್ಯಕ್ರಮಗಳಿಗೆ ಕೇಂದ್ರ ಸರ್ಕಾರ ಈವರೆಗೆ 2 ಲಕ್ಷದ 4 ಕೋಟಿ ರೂಪಾಯಿಗಳ ಅನುದಾನ ನೀಡಿದೆ. ದೇಶದಲ್ಲಿ 11 ಕೋಟಿ ಶೌಚಾಲಯಗಳನ್ನು ನಿರ್ಮಿಸಲಾಗಿದೆ. ಇದರಿಂದ ಕೋಟ್ಯಂತರ ಜನರ ಜೀವನ ಮಟ್ಟದಲ್ಲಿ ಸುಧಾರಣೆಯಾಗಿದೆ, ಆರೋಗ್ಯದ ಮೇಲೆ ಸಕಾರಾತ್ಮಕ ಪರಿಣಾಮ ಉಂಟಾಗಿದೆ. ವಿಶ್ವ ಆರೋಗ್ಯ ಸಂಸ್ಥೆಯ ವರದಿ ಪ್ರಕಾರ, 3 ಲಕ್ಷಕ್ಕೂ ಅಧಿಕ ಮಕ್ಕಳ ಜೀವ ರಕ್ಷಣೆಯಾಗಿದೆ ಎಂದು ತಿಳಿಸಿದರು.
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…