ಸ್ವಚ್ಛತಾ ಅಭಿಯಾನಕ್ಕೆ 10 ವರ್ಷಗಳು ಸಲ್ಲುತ್ತಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ ಸ್ವಚ್ಛತೆಯೇ ಸೇವೆ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.ಅಭಿಯಾನ ಇದೇ 17ರಿಂದ ಅಕ್ಟೋಬರ್ 2 ರವರೆಗೆ 15 ದಿನಗಳ ಕಾಲ ನಡೆಯಲಿದೆ.
ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಖಾತೆ ರಾಜ್ಯ ಸಚಿವ ಮನೋಹರ್ ಲಾಲ್ ಮಾತನಾಡಿ, ಈ ಬಾರಿ ಸ್ವಭಾವ ಸ್ವಚ್ಛತೆ- ಸಂಸ್ಕಾರ ಸ್ವಚ್ಛತೆ ಎನ್ನುವ ಘೋಷವಾಕ್ಯದ ಅಡಿಯಲ್ಲಿ ಅಭಿಯಾನ ನಡೆಯಲಿದೆ. ಈ ಸಮಯದಲ್ಲಿ ಸ್ವಚ್ಛತಾ ಕಾರ್ಮಿಕರಿಗೆ ವಿಶೇಷ ತರಬೇತಿ ಶಿಬಿರಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು. ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್, ಸ್ವಚ್ಛತಾ ಕಾರ್ಯಕ್ರಮಗಳಿಗೆ ಕೇಂದ್ರ ಸರ್ಕಾರ ಈವರೆಗೆ 2 ಲಕ್ಷದ 4 ಕೋಟಿ ರೂಪಾಯಿಗಳ ಅನುದಾನ ನೀಡಿದೆ. ದೇಶದಲ್ಲಿ 11 ಕೋಟಿ ಶೌಚಾಲಯಗಳನ್ನು ನಿರ್ಮಿಸಲಾಗಿದೆ. ಇದರಿಂದ ಕೋಟ್ಯಂತರ ಜನರ ಜೀವನ ಮಟ್ಟದಲ್ಲಿ ಸುಧಾರಣೆಯಾಗಿದೆ, ಆರೋಗ್ಯದ ಮೇಲೆ ಸಕಾರಾತ್ಮಕ ಪರಿಣಾಮ ಉಂಟಾಗಿದೆ. ವಿಶ್ವ ಆರೋಗ್ಯ ಸಂಸ್ಥೆಯ ವರದಿ ಪ್ರಕಾರ, 3 ಲಕ್ಷಕ್ಕೂ ಅಧಿಕ ಮಕ್ಕಳ ಜೀವ ರಕ್ಷಣೆಯಾಗಿದೆ ಎಂದು ತಿಳಿಸಿದರು.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…