ಧಾರ್ಮಿಕ

#Pandarapura | ಆಷಾಡ ಏಕಾದಶಿಗೆ ಪಂಢರಪುರಕ್ಕೆ ಹರಿದು ಬಂದ ಭಕ್ತ ಸಾಗರ |ವಿಠ್ಠಲ ನಾಮವೊಂದೇ ಉಸಿರಲಿ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ದೇವರ ನಾಮ ಸ್ಮರಣೆಯಿಂದ ಅನೇಕ ರೋಗಗಳಿಂದ ಮುಕ್ತಿ ಹೊಂದಬಹುದೆಂಬ ನಂಬಿಕೆ ಅನಾದಿ ಕಾಲದಿಂದಲೂ ಇದೆ.. ಆದರೇ ಇದೀಗ ವೈಜ್ಞಾನಿಕವಾಗಿ ಸಾಬೀತಾಗಿದೆ ನೋಡಿ..

Advertisement
Advertisement

‘ವಿಠ್ಠಲ ವಿಠ್ಠಲ’ ಎಂದು ನಾಮ ಸ್ಮರಣೆ ಮಾಡಿದರೆ ರಕ್ತದೊತ್ತಡ ಕಡಿಮೆಯಾಗಿ, ಹೃದ್ರೋಗಿಗಳ ಆರೋಗ್ಯ ನಿಯಂತ್ರಣಕ್ಕೆ ಬರುತ್ತದೆ.. ಪುಣೆಯ ವೇದ ವಿಜ್ಞಾನ ಕೇಂದ್ರ ನೂರಾರು ಹೃದ್ರೋಗಿಗಳ ಮೇಲೆ ಪ್ರಯೋಗ ಮಾಡಿ ಈ ವಿಷಯವನ್ನು ಸಾಭೀತು ಪಡಿಸಿದೆ. ಎರಡು ಮಹಾಪ್ರಾಣ ಹಾಗೂ ಎರಡು ಅಲ್ಪಪ್ರಾಣ ಹೊಂದಿರುವ ಶಬ್ದವಾದ್ದರಿಂದ ಹೃದಯದ ಮೇಲೆ ಪರಿಣಾಮ ಉಂಟಾಗುತ್ತದೆ ಎಂದು ವೇದ ವಿಜ್ಞಾನ ಕೇಂದ್ರ ಹೇಳಿದೆ. ಈ ಕುರಿತು ಏಷಿಯನ್ ಜನರಲ್ ಆಫ್ ಕಾಂಪ್ಲಿಮೆಂಟರಿ ಅಂಡ್‌ ಆಲ್ಟರ್ನೇಟಿವ್ ಮೀಡಿಯಾ ಎಂಬ ಅಂತರಾಷ್ಟ್ರೀಯ ನಿಯತಕಾಲಿಕೆ ಪ್ರಬಂಧ ಪ್ರಕಟಿಸಿದೆ..

ವಿಠ್ಠಲ ಎಂಬ ನಾಮದಲ್ಲಿ ಅಪರೂಪದ ಶಕ್ತಿಯಿದೆ.. ವಿಠ್ಠಲ ನಾಮದ ಸ್ಪಂದನೆ ಅರ್ಥಾತ್ ಸ್ವರ ಶಾಸ್ತ್ರದ ಬಗ್ಗೆಯೂ ಕೆಲ ಸಂಶೋಧನೆಗಳನ್ನು ನಡೆಸಲಾಗಿದ್ದೂ. ಈ ಶಬ್ದ ಉಚ್ಛರಿಸುವಾಗ “ಠ್ಠ” ಎಂಬ ಅಕ್ಷರದಿಂದ ಹೊರಡುವ ಶಕ್ತಿ ನೇರವಾಗಿ ಹೃದಯದ ಮೇಲೆ ಅದ್ಭುತ ಪರಿಣಾಮ ಬೀರುತ್ತದೆ.. ಎಂಬುದು ಅಧ್ಯಯನದಿಂದ ಕಂಡುಬಂದಿದೆ. ಹೃದಯಸಂಬಂಧಿ ರೋಗವಿರುವ ಭಕ್ತರು ವಿಠ್ಠಲ ನಾಮಸ್ಮರಣೆ ಮಾಡುತ್ತ 250 ಕಿ.ಮೀ. ದೂರ ಕಾಲ್ನಡಿಗೆಯಲ್ಲಿ ಪಂಢರಪುರಕ್ಕೆ ಆಗಮಿಸಿ ಜಾತ್ರೆ ಪೂರ್ಣಗೊಳಿಸಿ ಮರಳುತ್ತಾರೆ.

 

‘ನಾಮ’ ಎಂದರೇನು? ದೇವರ ಅಸಂಖ್ಯ ಹೆಸರುಗಳಲ್ಲೊಂದು. ‘ಸ್ಮರಣೆ’ ಎಂದರೆ ‘ಧ್ಯಾನ’ ಅಥವಾ ನೆನಪು. ‘ಜಪ’ ಎಂದರೆ ಯಾವುದೇ ಒಂದು ಅಕ್ಷರ, ಶಬ್ದ, ಮಂತ್ರ ಅಥವಾ ವಾಕ್ಯವನ್ನು ಮತ್ತೆ ಮತ್ತೆ ಹೇಳುತ್ತಾ ಇರುವುದು. ‘ಜಕಾರೋ ಜನ್ಮ ವಿಚ್ಛೇದಕ: ಪಕಾರೋ ಪಾಪನಾಶಕ: ಎಂದರೆ ಯಾವುದು ಜನ್ಮ ಜನ್ಮಾಂತರಗಳ ಪಾಪವನ್ನು ನಾಶ ಮಾಡಿ ಜನನ ಮರಣಗಳ ಚಕ್ರದಿಂದ ನಮ್ಮನ್ನು ಬಿಡಿಸುತ್ತದೆಯೋ ಅದುವೇ ‘ಜಪ’. ಒಟ್ಟಿನಲ್ಲಿ ‘ನಾಮ ಜಪ’ವೆಂದರೆ ದೇವರ ನಾಮವನ್ನು ಈಶ್ವರ ಪ್ರಾಪ್ತಿಯ ಸಾಧನೆಯೆಂದು ಪುನಃ ಪುನಃ ಹೇಳುತ್ತಿರುವುದು.

Advertisement

ನಾಮಜಪ / ನಾಮಸ್ಮರಣೆಯ ವೈಶಿಷ್ಟ್ಯಗಳು : ವೇದಗಳಿಗಿಂತ ನಾಮವು ಶ್ರೇಷ್ಠವಾಗಿದೆ. ಏಕೆಂದರೆ ಓಂಕಾರವೆಂಬ ನಾಮದಿಂದಲೇ ವೇದಗಳ ಉತ್ಪತ್ತಿಯಾಗಿದೆ. ವೇದಗಳು, ಉಪನಿಷತ್ತುಗಳು, ಗೀತೆ ಇತ್ಯಾದಿಗಳ ಅಭ್ಯಾಸವು ಎಲ್ಲರಿಂದಲೂ ಸಾಧ್ಯವಾಗದು. ಆದರೆ ನಾಮದ ಅಭ್ಯಾಸವನ್ನು ಯಾರೂ ಮಾಡಬಲ್ಲರು. ಅದರಿಂದ ಸತತವಾಗಿ ದೇವರೊಂದಿಗೆ ಅನುಸಂಧಾನ ಹೊಂದಬಲ್ಲರು. ಪರಮೇಶ್ವರನ ರೂಪವು ತೇಜ ತತ್ವಕ್ಕೆ ಸಂಬಂಧಿಸಿದ್ದರೆ, ಆತನ ನಾಮವು ತೇಜ ತತ್ವಕ್ಕಿಂತಲೂ ಶ್ರೇಷ್ಠವಾದ ಆಕಾಶ ತತ್ವಕ್ಕೆ ಸಂಬಂಧಿಸಿದೆ.

ಅನಾದಿಕಾಲದಿಂದಲೂ ನಾವು ಆಚರಿಸುತ್ತಿರುವ, ಪಾಲಿಸುತ್ತಿರುವ ಸನಾತನ ಧರ್ಮದಲ್ಲಿ ಪ್ರತಿಯೊಂದಕ್ಕೂ ಅದರದೇ ಆದ ಕಾರಣಗಳು ಹಾಗು ಅರ್ಥಗಳು ಒಳಗೊಂಡಿರುತ್ತವೆ. ಪರಮಾತ್ಮನ ಶಕ್ತಿಯ ಮುಂದೆ ಆಗದು ಎಂಬುದು ಏನೂ ಇಲ್ಲ..

(ಸಂಗ್ರಹ )

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಸೆ.30 ವರೆಗೆ ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿರ್ಬಂಧ

ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು…

2 hours ago

ಕೃಷಿ ಸಂಸ್ಕರಣಾ ಘಟಕ | 15 ಲಕ್ಷ ರೂಪಾಯಿ ಸಹಾಯಧನ ನೀಡಲು ಸರ್ಕಾರ  ನಿರ್ಧಾರ

ಕೃಷಿ ಸಂಸ್ಕರಣಾ ಘಟಕ ಸ್ಥಾಪಿಸುವ ರೈತರಿಗೆ ಈ ವರ್ಷದಿಂದ ರಾಜ್ಯ ಸರ್ಕಾರ 9…

2 hours ago

ಚಿಕ್ಕಮಗಳೂರು ಜಿಲ್ಲೆಯಲ್ಲಿ  ಧಾರಾಕಾರ ಮಳೆ | ಧಾರವಾಡ ಜಿಲ್ಲೆಯಲ್ಲಿ 130 ಮನೆಗಳಿಗೆ ಭಾಗಶಃ ಹಾನಿ

ಚಿಕ್ಕಮಗಳೂರು  ಜಿಲ್ಲೆಯಲ್ಲಿ ಸಾಧಾರಣದಿಂದ ಹೆಚ್ಚು ಮಳೆಯಾಗುತ್ತಿದೆ. ಹೆಚ್ಚು ಮಳೆಯಿಂದಾಗಿ  ಜಿಲ್ಲೆಯ ಮುಳ್ಳಯ್ಯನಗಿರಿ ರಸ್ತೆಯೆ…

2 hours ago

ಜೂ. 16-18 ದಾವಣಗೆರೆಯಲ್ಲಿ ಮಾವು ಮೇಳ

ದಾವಣಗೆರೆ ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಸಹಯೋಗದೊಂದಿಗೆ ಜೂನ್.16 ರಿಂದ 18  ವರೆಗೆ…

2 hours ago

ಕ್ಯಾನ್ಸರ್ ಪೀಡಿತ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಶಾಲೆ – ಸಚಿವ ಮಧುಬಂಗಾರಪ್ಪ

ರಾಜ್ಯದಲ್ಲಿ ಮಾರಣಾಂತಿಕ ಕ್ಯಾನ್ಸರ್‌ರೋಗದಿಂದ ಬಳಲುತ್ತಿರುವ ಹಾಗೂ ಒಂದರಿಂದ ಹತ್ತನೆ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ…

2 hours ago

ಇಂದು ವಿಶ್ವ ರಕ್ತದಾನಿಗಳ ದಿನ

ಇಂದು ವಿಶ್ವ ರಕ್ತದಾನಿಗಳ ದಿನ. ಪ್ರತಿವರ್ಷ ಜೂನ್ 14 ರಂದು ವಿಶ್ವ ರಕ್ತದಾನಿಗಳ…

2 hours ago