ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

August 25, 2026
8:54 PM
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20 ಲಕ್ಷ ನಗದು ಬಹುಮಾನ ಪಡೆದಿದ್ದಾರೆ. ಬಂಟ್ವಾಳ ತಾಲೂಕಿನ ಪುಣಚ ಮೂಲದ ಅಶ್ಮಿತ್, ಬಾಲ್ಯದಿಂದಲೇ ಕರ್ನಾಟಕ ಶಾಸ್ತ್ರೀಯ ಸಂಗೀತ ಅಭ್ಯಾಸ ಮಾಡುತ್ತಿದ್ದು ವಯಲಿನ್ ಹಾಗೂ ಮೃದಂಗ ವಾದನವನ್ನೂ ಕಲಿಯುತ್ತಿದ್ದಾರೆ.

ಕರ್ನಾಟಕದ ಅತಿ ದೊಡ್ಡ ರಿಯಾಲಿಟಿ ಶೋಗಳಲ್ಲಿ ಒಂದಾದ ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ಮಂಗಳೂರಿನ ಅಶ್ಮಿತ್ ಎ.ಜೆ. ಹೊರಹೊಮ್ಮಿದ್ದಾರೆ. ಅಂತಿಮ ಸುತ್ತಿನಲ್ಲಿ ಅದ್ಭುತ ಪ್ರದರ್ಶನ ನೀಡಿದ ಅಶ್ಮಿತ್, ₹20 ಲಕ್ಷ ನಗದು ಬಹುಮಾನವನ್ನು ತಮ್ಮದಾಗಿಸಿಕೊಂಡಿದ್ದಾರೆ.

ಕಾರ್ಯಕ್ರಮದ ಪ್ರತಿ ಸರಣಿಯಲ್ಲೂ ತಮ್ಮ ಗಾಯನದ ಮೂಲಕ ತೀರ್ಪುಗಾರರ ಮೆಚ್ಚುಗೆಗೆ ಪಾತ್ರರಾಗಿದ್ದ ಅಶ್ಮಿತ್, ಹಲವು ಬಾರಿ ಗೋಲ್ಡನ್ ಬಜರ್ ಪುರಸ್ಕಾರಕ್ಕೂ ಭಾಜನರಾಗಿದ್ದರು. ಇದೀಗ ಅಂತಿಮ ಸುತ್ತಿನಲ್ಲಿ ಗಮನಾರ್ಹ ಪ್ರದರ್ಶನ ನೀಡಿ ‘ಸರಿಗಮಪ 2026’ರ ವಿಜೇತರಾಗಿ ಹೊರಹೊಮ್ಮಿದ್ದಾರೆ.

ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ಜಯರಾಮ ಹಾಗೂ ರೇವತಿ ದಂಪತಿಯ ಪುತ್ರರಾಗಿರುವ ಅಶ್ಮಿತ್, ಪ್ರಸ್ತುತ ಮಂಗಳೂರಿನಲ್ಲಿ ನೆಲೆಸಿದ್ದಾರೆ. ಶಾಲಾ ಶಿಕ್ಷಣದ ಜೊತೆಗೆ ಕರ್ನಾಟಕ ಶಾಸ್ತ್ರೀಯ ಸಂಗೀತ ಗಾಯನ, ವಯಲಿನ್ ಹಾಗೂ ಮೃದಂಗ ವಾದನವನ್ನೂ ಅಭ್ಯಾಸ ಮಾಡುತ್ತಿದ್ದಾರೆ.

ಎಲ್‌ಕೆಜಿ ಹಂತದಿಂದಲೇ ಮಂಗಳೂರಿನ “ಶ್ರೀ ಸಂಗೀತ ಪಾಠಶಾಲೆ”ಯಲ್ಲಿ ಸಂಧ್ಯಾ ಸತ್ಯನಾರಾಯಣ ಅವರ ಮಾರ್ಗದರ್ಶನದಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತವನ್ನು ಅಭ್ಯಾಸ ಮಾಡುತ್ತಿರುವ ಅಶ್ಮಿತ್, ತಮ್ಮ ಸಂಗೀತ ಪ್ರತಿಭೆಯ ಮೂಲಕ ಇದೀಗ ರಾಜ್ಯದ ಗಮನ ಸೆಳೆದಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಸಂಗೀತ ಕ್ಷೇತ್ರಕ್ಕೆ ಕೀರ್ತಿ ತಂದಿರುವ ಅಶ್ಮಿತ್ ಅವರ ಸಾಧನೆಗೆ “ಶ್ರೀ ಸಂಗೀತ ಪಾಠಶಾಲೆ”ಯ ವಿದ್ಯಾರ್ಥಿಗಳು, ಪೋಷಕರು ಹಾಗೂ ಗುರುಗಳು ಅಭಿನಂದನೆ ಸಲ್ಲಿಸಿದ್ದಾರೆ.

ಸಂಗೀತದ ಪಯಣಕ್ಕೆ ಹೊಸ ಮೈಲುಗಲ್ಲು : ಶಾಲಾ ಶಿಕ್ಷಣದ ಜತೆಗೆ ಶಾಸ್ತ್ರೀಯ ಸಂಗೀತ, ವಯಲಿನ್ ಮತ್ತು ಮೃದಂಗವನ್ನು ಕಲಿಯುತ್ತಾ ಬಂದಿರುವ ಅಶ್ಮಿತ್, ‘ಸರಿಗಮಪ’ ವೇದಿಕೆಯಲ್ಲಿ ತಮ್ಮ ಪ್ರತಿಭೆಯನ್ನು ಮತ್ತಷ್ಟು ವಿಸ್ತರಿಸಿಕೊಂಡಿದ್ದಾರೆ. ಮಂಗಳೂರಿನಿಂದ ರಾಜ್ಯಮಟ್ಟದ ಸಂಗೀತ ವೇದಿಕೆಗೆ ತೆರಳಿ ವಿಜೇತರಾಗಿ ಹೊರಹೊಮ್ಮಿರುವುದು ಕರಾವಳಿಯ ಸಂಗೀತಾಸಕ್ತರಲ್ಲೂ ಸಂಭ್ರಮ ಮೂಡಿಸಿದೆ.

ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

Mangaluru’s Ashmith A.J. has emerged as the winner of Zee Kannada’s ‘Sa Re Ga Ma Pa 2026’ and won a cash prize of ₹20 lakh. Originally from Punacha village in Bantwal taluk of Dakshina Kannada, Ashmith has been learning Carnatic music since his LKG days and also trains in violin and mridangam.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಲೆನಾಡು ತಪ್ಪಲಲ್ಲಿ ಧಾರಾಕಾರ ಮಳೆ – ಹಲವು ಕಡೆ ಕೆಲವೇ ಗಂಟೆಯಲ್ಲಿ 100 ಮಿಮೀ ದಾಟಿದ ಮಳೆ
August 25, 2026
1:40 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ |25-08-2026 | ಕರಾವಳಿ, ಮಲೆನಾಡಿನಲ್ಲೂ ಬಿಡುವಿನ ಅವಧಿ ಹೆಚ್ಚಳ -ಕೆಲವೆಡೆ ಉತ್ತಮ ಮಳೆ – ರಾಜ್ಯದಲ್ಲಿ ಮಳೆ ಪರಿಸ್ಥಿತಿ ಹೇಗೆ..?
August 25, 2026
1:04 PM
by: ಸಾಯಿಶೇಖರ್ ಕರಿಕಳ
ಕರಾವಳಿಗೆ ವಾಡಿಕೆ ಮಳೆ, ಮಲೆನಾಡು ದಾಟದ ಮುಂಗಾರು ಮೋಡ..!
August 25, 2026
12:13 PM
by: ದ ರೂರಲ್ ಮಿರರ್.ಕಾಂ
ಬೆಲೆ ಏರಿಕೆಯನ್ನಷ್ಟೇ ನೋಡುವುದಲ್ಲ ; ಮುಂದಿನ ಮಾರುಕಟ್ಟೆಯನ್ನು ನಿರ್ಮಿಸುವ ಕಾಲ
August 25, 2026
10:38 AM
by: ಅರುಣ್‌ ಕುಮಾರ್ ಕಾಂಚೋಡು

You cannot copy content of this page - Copyright -The Rural Mirror