ಕರ್ನಾಟಕದ ಅತಿ ದೊಡ್ಡ ರಿಯಾಲಿಟಿ ಶೋಗಳಲ್ಲಿ ಒಂದಾದ ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ಮಂಗಳೂರಿನ ಅಶ್ಮಿತ್ ಎ.ಜೆ. ಹೊರಹೊಮ್ಮಿದ್ದಾರೆ. ಅಂತಿಮ ಸುತ್ತಿನಲ್ಲಿ ಅದ್ಭುತ ಪ್ರದರ್ಶನ ನೀಡಿದ ಅಶ್ಮಿತ್, ₹20 ಲಕ್ಷ ನಗದು ಬಹುಮಾನವನ್ನು ತಮ್ಮದಾಗಿಸಿಕೊಂಡಿದ್ದಾರೆ.
ಕಾರ್ಯಕ್ರಮದ ಪ್ರತಿ ಸರಣಿಯಲ್ಲೂ ತಮ್ಮ ಗಾಯನದ ಮೂಲಕ ತೀರ್ಪುಗಾರರ ಮೆಚ್ಚುಗೆಗೆ ಪಾತ್ರರಾಗಿದ್ದ ಅಶ್ಮಿತ್, ಹಲವು ಬಾರಿ ಗೋಲ್ಡನ್ ಬಜರ್ ಪುರಸ್ಕಾರಕ್ಕೂ ಭಾಜನರಾಗಿದ್ದರು. ಇದೀಗ ಅಂತಿಮ ಸುತ್ತಿನಲ್ಲಿ ಗಮನಾರ್ಹ ಪ್ರದರ್ಶನ ನೀಡಿ ‘ಸರಿಗಮಪ 2026’ರ ವಿಜೇತರಾಗಿ ಹೊರಹೊಮ್ಮಿದ್ದಾರೆ.
ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ಜಯರಾಮ ಹಾಗೂ ರೇವತಿ ದಂಪತಿಯ ಪುತ್ರರಾಗಿರುವ ಅಶ್ಮಿತ್, ಪ್ರಸ್ತುತ ಮಂಗಳೂರಿನಲ್ಲಿ ನೆಲೆಸಿದ್ದಾರೆ. ಶಾಲಾ ಶಿಕ್ಷಣದ ಜೊತೆಗೆ ಕರ್ನಾಟಕ ಶಾಸ್ತ್ರೀಯ ಸಂಗೀತ ಗಾಯನ, ವಯಲಿನ್ ಹಾಗೂ ಮೃದಂಗ ವಾದನವನ್ನೂ ಅಭ್ಯಾಸ ಮಾಡುತ್ತಿದ್ದಾರೆ.
ಎಲ್ಕೆಜಿ ಹಂತದಿಂದಲೇ ಮಂಗಳೂರಿನ “ಶ್ರೀ ಸಂಗೀತ ಪಾಠಶಾಲೆ”ಯಲ್ಲಿ ಸಂಧ್ಯಾ ಸತ್ಯನಾರಾಯಣ ಅವರ ಮಾರ್ಗದರ್ಶನದಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತವನ್ನು ಅಭ್ಯಾಸ ಮಾಡುತ್ತಿರುವ ಅಶ್ಮಿತ್, ತಮ್ಮ ಸಂಗೀತ ಪ್ರತಿಭೆಯ ಮೂಲಕ ಇದೀಗ ರಾಜ್ಯದ ಗಮನ ಸೆಳೆದಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಸಂಗೀತ ಕ್ಷೇತ್ರಕ್ಕೆ ಕೀರ್ತಿ ತಂದಿರುವ ಅಶ್ಮಿತ್ ಅವರ ಸಾಧನೆಗೆ “ಶ್ರೀ ಸಂಗೀತ ಪಾಠಶಾಲೆ”ಯ ವಿದ್ಯಾರ್ಥಿಗಳು, ಪೋಷಕರು ಹಾಗೂ ಗುರುಗಳು ಅಭಿನಂದನೆ ಸಲ್ಲಿಸಿದ್ದಾರೆ.
ಸಂಗೀತದ ಪಯಣಕ್ಕೆ ಹೊಸ ಮೈಲುಗಲ್ಲು : ಶಾಲಾ ಶಿಕ್ಷಣದ ಜತೆಗೆ ಶಾಸ್ತ್ರೀಯ ಸಂಗೀತ, ವಯಲಿನ್ ಮತ್ತು ಮೃದಂಗವನ್ನು ಕಲಿಯುತ್ತಾ ಬಂದಿರುವ ಅಶ್ಮಿತ್, ‘ಸರಿಗಮಪ’ ವೇದಿಕೆಯಲ್ಲಿ ತಮ್ಮ ಪ್ರತಿಭೆಯನ್ನು ಮತ್ತಷ್ಟು ವಿಸ್ತರಿಸಿಕೊಂಡಿದ್ದಾರೆ. ಮಂಗಳೂರಿನಿಂದ ರಾಜ್ಯಮಟ್ಟದ ಸಂಗೀತ ವೇದಿಕೆಗೆ ತೆರಳಿ ವಿಜೇತರಾಗಿ ಹೊರಹೊಮ್ಮಿರುವುದು ಕರಾವಳಿಯ ಸಂಗೀತಾಸಕ್ತರಲ್ಲೂ ಸಂಭ್ರಮ ಮೂಡಿಸಿದೆ.
ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಫಾಲೋಮಾಡಲು ಇಲ್ಲಿ ಕ್ಲಿಕ್ ಮಾಡಿ
Mangaluru’s Ashmith A.J. has emerged as the winner of Zee Kannada’s ‘Sa Re Ga Ma Pa 2026’ and won a cash prize of ₹20 lakh. Originally from Punacha village in Bantwal taluk of Dakshina Kannada, Ashmith has been learning Carnatic music since his LKG days and also trains in violin and mridangam.
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…
ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…
ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್ನಲ್ಲಿ…
ಸುಮಾರು 35 ವರ್ಷಗಳ ಹಿಂದೆ ಡಾ. ವಿಘ್ನೇಶ್ವರ ವರ್ಮುಡಿಯವರು ಮುಂದಿಟ್ಟಿದ್ದ ಅಡಿಕೆ ಮಾರುಕಟ್ಟೆ…
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…