ಪೊದೆಯಿಂದ ತುಂಬಿದ ರಸ್ತೆ | ಮಹಿಳೆಯಿಂದ ಪುತ್ತೂರು ಶಾಸಕರಿಗೆ ದೂರು | ನಗರಸಭೆಗೆ ಸೂಚನೆ | ಪೊದೆ ತೆರವು

December 15, 2023
10:11 PM

ಪುತ್ತೂರು ನಗರಸಭಾ ವ್ಯಾಪ್ತಿಯ ಸಿಂಹವನ- ಆನಂದಾಶ್ರಮ ರಸ್ತೆಯಲ್ಲಿ ಹುಲ್ಲು ಮತ್ತು ಪೊದೆಗಳು ತುಂಬಿ ನಡೆದಾಡಲೂ ಸಾಧ್ಯವಾಗುತ್ತಿಲ್ಲ ಎಂದು ಸ್ಥಳೀಯ ಮಹಿಳೆಯೋರ್ವರು ಶಾಸಕರಿಗೆ ಮೊಬೈಲ್ ಕರೆ ಮಾಡಿ ಮಾಹಿತಿ ನೀಡಿದ್ದು, ಶಾಸಕರು ತಕ್ಷಣವೇ ನಗರಸಭಾ ಆಧಿಕಾರಿಗೆ ಪೊದೆ ತೆರವು ಮಾಡುವಂತೆ ಸೂಚನೆಯನ್ನು ನೀಡಿದ್ದು ಅದರಂತೆ ಪೊದೆ ತೆರವು ಕಾರ್ಯ ನಡೆದಿದೆ.

Advertisement
Advertisement
Advertisement
Advertisement

ಈ ರಸ್ತೆಯಲ್ಲಿ ಕಳೆದ ನಾಲ್ಕು ತಿಂಗಳಿಂದ ಪೊದೆಗಳು ತುಂಬಿಕೊಂಡಿದ್ದವು. ವಾಹನದಲ್ಲಿ ತೆರಳುವಾಗ ಮತ್ತು ಪಾದಚಾರಿಗಳಿಗೂ ಈ ರಸ್ತೆಯಲ್ಲಿ ನಡೆದಾಡಲು ಕಷ್ಟವಾಗಿತ್ತು. ಈ ಬಗ್ಗೆ ಸ್ಥಳೀಯರು ಅನೇಕ ಬಾರಿ ಸಂಬಂಧಿಸಿದಂದವರಿಗೆ ಮಾಹಿತಿ ನೀಡಿದ್ದರೂ ತೆರವು ಕಾರ್ಯ ನಡೆದಿರಲಿಲ್ಲ. ಇದರಿಂದ ನೊಂದ ಮಹಿಳೆ ಶಾಸಕರಿಗೆ ಮೊಬೈಲ್ ಕರೆ ಮಾಡಿ ತಮ್ಮ ಸಂಕಷ್ಟವನ್ನು ಹೇಳಿಕೊಂಡಿದ್ದರು.

Advertisement

ತಕ್ಷಣ ನಗರಸಭೆಗೆ ಶಾಸಕರಾದ ಅಶೋಕ್ ರೈಯವರು ಸೂಚನೆ ನೀಡಿ ಸಿಂಹವನ ಸೇರಿದಂತೆ ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು ಸಂಚರಿಸುವ ರಸ್ತೆಯಲ್ಲಿ ಪೊದೆ, ಹುಲ್ಲುಗಳು ತುಂಬಿದ್ದರೆ ಪರಿಶೀಲನೆ ಮಾಡಿ ಅದನ್ನು ತಕ್ಷಣ ತೆರವು ಮಾಡಬೇಕು. ರಸ್ತೆಯಲ್ಲಿ ತೆರಳುವ ಸಾರ್ವಜನಿಕರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗಬಾರದು, ಶಾಲಾ ಮಕ್ಕಳು ನಡೆದುಕೊಂಡು ಹೋಗುವ ವೇಳೆ ಪೊದೆಗಳಿಂದ ಹಾವುಗಳು ಬರುವ ಸಾಧ್ಯತೆ ಇದ್ದು ತಕ್ಷಣ ಕಾರ್ಯಪ್ರವೃತ್ತರಾಗಬೇಕೆಂದು ಸೂಚನೆಯನ್ನು ನೀಡಿದ್ದರು.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಒಡಿಶಾ ಕರಾವಳಿಗೆ ಅಪ್ಪಳಿಸಲು ಸಿದ್ಧವಾದ “ಡಾನಾ ಚಂಡಮಾರುತ ” | ಒಡಿಶಾ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಹೈಎಲರ್ಟ್‌ |
October 23, 2024
9:58 PM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಇನ್ನು 6 ದಿನಗಳ ಕಾಲ ಧಾರಾಕಾರ ಮಳೆ | 16 ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ | ಹವಾಮಾನ ಇಲಾಖೆ ಮಾಹಿತಿ |
October 23, 2024
7:30 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 23-10-2024 | ಸಾಮಾನ್ಯ ಮಳೆ ಮುಂದುವರಿಕೆ | ಅ.28 ರಿಂದ ತಾಪಮಾನದ ಕಾರಣದಿಂದ ಮಳೆ ಸಾಧ್ಯತೆ |
October 23, 2024
12:05 PM
by: ಸಾಯಿಶೇಖರ್ ಕರಿಕಳ
ಸಿರಿಧಾನ್ಯ ಕೃಷಿಯಲ್ಲಿ ಯಶಸ್ಸು | ವಾಣಿಜ್ಯ ಬೆಳೆಯಿಂದ ಹೊರಬಂದ ರೈತರು | 5 ಹಳ್ಳಿಯಲ್ಲಿ ರೈತರಿಂದ ಪ್ರಯೋಗ |
October 23, 2024
10:50 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror