ಪುತ್ತೂರು ನಗರಸಭಾ ವ್ಯಾಪ್ತಿಯ ಸಿಂಹವನ- ಆನಂದಾಶ್ರಮ ರಸ್ತೆಯಲ್ಲಿ ಹುಲ್ಲು ಮತ್ತು ಪೊದೆಗಳು ತುಂಬಿ ನಡೆದಾಡಲೂ ಸಾಧ್ಯವಾಗುತ್ತಿಲ್ಲ ಎಂದು ಸ್ಥಳೀಯ ಮಹಿಳೆಯೋರ್ವರು ಶಾಸಕರಿಗೆ ಮೊಬೈಲ್ ಕರೆ ಮಾಡಿ ಮಾಹಿತಿ ನೀಡಿದ್ದು, ಶಾಸಕರು ತಕ್ಷಣವೇ ನಗರಸಭಾ ಆಧಿಕಾರಿಗೆ ಪೊದೆ ತೆರವು ಮಾಡುವಂತೆ ಸೂಚನೆಯನ್ನು ನೀಡಿದ್ದು ಅದರಂತೆ ಪೊದೆ ತೆರವು ಕಾರ್ಯ ನಡೆದಿದೆ.
ಈ ರಸ್ತೆಯಲ್ಲಿ ಕಳೆದ ನಾಲ್ಕು ತಿಂಗಳಿಂದ ಪೊದೆಗಳು ತುಂಬಿಕೊಂಡಿದ್ದವು. ವಾಹನದಲ್ಲಿ ತೆರಳುವಾಗ ಮತ್ತು ಪಾದಚಾರಿಗಳಿಗೂ ಈ ರಸ್ತೆಯಲ್ಲಿ ನಡೆದಾಡಲು ಕಷ್ಟವಾಗಿತ್ತು. ಈ ಬಗ್ಗೆ ಸ್ಥಳೀಯರು ಅನೇಕ ಬಾರಿ ಸಂಬಂಧಿಸಿದಂದವರಿಗೆ ಮಾಹಿತಿ ನೀಡಿದ್ದರೂ ತೆರವು ಕಾರ್ಯ ನಡೆದಿರಲಿಲ್ಲ. ಇದರಿಂದ ನೊಂದ ಮಹಿಳೆ ಶಾಸಕರಿಗೆ ಮೊಬೈಲ್ ಕರೆ ಮಾಡಿ ತಮ್ಮ ಸಂಕಷ್ಟವನ್ನು ಹೇಳಿಕೊಂಡಿದ್ದರು.
ತಕ್ಷಣ ನಗರಸಭೆಗೆ ಶಾಸಕರಾದ ಅಶೋಕ್ ರೈಯವರು ಸೂಚನೆ ನೀಡಿ ಸಿಂಹವನ ಸೇರಿದಂತೆ ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು ಸಂಚರಿಸುವ ರಸ್ತೆಯಲ್ಲಿ ಪೊದೆ, ಹುಲ್ಲುಗಳು ತುಂಬಿದ್ದರೆ ಪರಿಶೀಲನೆ ಮಾಡಿ ಅದನ್ನು ತಕ್ಷಣ ತೆರವು ಮಾಡಬೇಕು. ರಸ್ತೆಯಲ್ಲಿ ತೆರಳುವ ಸಾರ್ವಜನಿಕರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗಬಾರದು, ಶಾಲಾ ಮಕ್ಕಳು ನಡೆದುಕೊಂಡು ಹೋಗುವ ವೇಳೆ ಪೊದೆಗಳಿಂದ ಹಾವುಗಳು ಬರುವ ಸಾಧ್ಯತೆ ಇದ್ದು ತಕ್ಷಣ ಕಾರ್ಯಪ್ರವೃತ್ತರಾಗಬೇಕೆಂದು ಸೂಚನೆಯನ್ನು ನೀಡಿದ್ದರು.
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…
ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…