ಪುತ್ತೂರು ನಗರಸಭಾ ವ್ಯಾಪ್ತಿಯ ಸಿಂಹವನ- ಆನಂದಾಶ್ರಮ ರಸ್ತೆಯಲ್ಲಿ ಹುಲ್ಲು ಮತ್ತು ಪೊದೆಗಳು ತುಂಬಿ ನಡೆದಾಡಲೂ ಸಾಧ್ಯವಾಗುತ್ತಿಲ್ಲ ಎಂದು ಸ್ಥಳೀಯ ಮಹಿಳೆಯೋರ್ವರು ಶಾಸಕರಿಗೆ ಮೊಬೈಲ್ ಕರೆ ಮಾಡಿ ಮಾಹಿತಿ ನೀಡಿದ್ದು, ಶಾಸಕರು ತಕ್ಷಣವೇ ನಗರಸಭಾ ಆಧಿಕಾರಿಗೆ ಪೊದೆ ತೆರವು ಮಾಡುವಂತೆ ಸೂಚನೆಯನ್ನು ನೀಡಿದ್ದು ಅದರಂತೆ ಪೊದೆ ತೆರವು ಕಾರ್ಯ ನಡೆದಿದೆ.
ಈ ರಸ್ತೆಯಲ್ಲಿ ಕಳೆದ ನಾಲ್ಕು ತಿಂಗಳಿಂದ ಪೊದೆಗಳು ತುಂಬಿಕೊಂಡಿದ್ದವು. ವಾಹನದಲ್ಲಿ ತೆರಳುವಾಗ ಮತ್ತು ಪಾದಚಾರಿಗಳಿಗೂ ಈ ರಸ್ತೆಯಲ್ಲಿ ನಡೆದಾಡಲು ಕಷ್ಟವಾಗಿತ್ತು. ಈ ಬಗ್ಗೆ ಸ್ಥಳೀಯರು ಅನೇಕ ಬಾರಿ ಸಂಬಂಧಿಸಿದಂದವರಿಗೆ ಮಾಹಿತಿ ನೀಡಿದ್ದರೂ ತೆರವು ಕಾರ್ಯ ನಡೆದಿರಲಿಲ್ಲ. ಇದರಿಂದ ನೊಂದ ಮಹಿಳೆ ಶಾಸಕರಿಗೆ ಮೊಬೈಲ್ ಕರೆ ಮಾಡಿ ತಮ್ಮ ಸಂಕಷ್ಟವನ್ನು ಹೇಳಿಕೊಂಡಿದ್ದರು.
ತಕ್ಷಣ ನಗರಸಭೆಗೆ ಶಾಸಕರಾದ ಅಶೋಕ್ ರೈಯವರು ಸೂಚನೆ ನೀಡಿ ಸಿಂಹವನ ಸೇರಿದಂತೆ ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು ಸಂಚರಿಸುವ ರಸ್ತೆಯಲ್ಲಿ ಪೊದೆ, ಹುಲ್ಲುಗಳು ತುಂಬಿದ್ದರೆ ಪರಿಶೀಲನೆ ಮಾಡಿ ಅದನ್ನು ತಕ್ಷಣ ತೆರವು ಮಾಡಬೇಕು. ರಸ್ತೆಯಲ್ಲಿ ತೆರಳುವ ಸಾರ್ವಜನಿಕರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗಬಾರದು, ಶಾಲಾ ಮಕ್ಕಳು ನಡೆದುಕೊಂಡು ಹೋಗುವ ವೇಳೆ ಪೊದೆಗಳಿಂದ ಹಾವುಗಳು ಬರುವ ಸಾಧ್ಯತೆ ಇದ್ದು ತಕ್ಷಣ ಕಾರ್ಯಪ್ರವೃತ್ತರಾಗಬೇಕೆಂದು ಸೂಚನೆಯನ್ನು ನೀಡಿದ್ದರು.
ಮಯೂರ.ಕೆ, 7ನೇ ತರಗತಿ, ಭಗವಾನ್ ಶ್ರೀ ಸತ್ಯಸಾಯಿ ವಿದ್ಯಾಕೇಂದ್ರ ಚೊಕ್ಕಾಡಿ | -…
ಜುಲೈ 9 ರಂದು ಭಾರತ್ ಬಂದ್ಗೆ ಕಾರ್ಮಿಕ ಸಂಘಟನೆಗಳು ಕರೆ ನೀಡಿವೆ. ದೇಶವ್ಯಾಪಿ…
ಮಗು ಗರ್ಭದಲ್ಲಿದ್ದಾಗಲೇ ಕೆಲವು ಘಟನೆಗಳಿಗೆ ಪ್ರತಿಕ್ರಿಯಿಸುವ ಬಗ್ಗೆ ಕೆಲವು ವೈಜ್ಞಾನಿಕ ಅಧ್ಯಯನಗಳು ಹೇಳಿವೆ.…
ಶಿಕ್ಷಣ ಸಂಸ್ಥೆಗಳಲ್ಲಿ ಹಾಸ್ಟೆಲ್ ವ್ಯವಸ್ಥೆ ಸರ್ವೇ ಸಾಮಾನ್ಯ. ಹೀಗೆ ಹಾಸ್ಟೆಲ್ ಇದೆ ಅಂದ…
ಕೃಷಿ ವಲಯದಲ್ಲಿ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಉದ್ದೇಶದಿಂದ…
ಹಕ್ಕಿಗಳಿಗೆ ಗೂಡುಕಟ್ಟುವ ಮೂಲಕ ಪರಿಸರ ಸಂರಕ್ಷಣೆಗೆ ಪಣತೊಟ್ಟಿರುವ ದಂಪತಿಗಳು ಬಂಟ್ವಾಳ ತಾಲೂಕಿನಲ್ಲಿದ್ದಾರೆ. ಇವರ…