ಪುತ್ತೂರು ನಗರಸಭಾ ವ್ಯಾಪ್ತಿಯ ಸಿಂಹವನ- ಆನಂದಾಶ್ರಮ ರಸ್ತೆಯಲ್ಲಿ ಹುಲ್ಲು ಮತ್ತು ಪೊದೆಗಳು ತುಂಬಿ ನಡೆದಾಡಲೂ ಸಾಧ್ಯವಾಗುತ್ತಿಲ್ಲ ಎಂದು ಸ್ಥಳೀಯ ಮಹಿಳೆಯೋರ್ವರು ಶಾಸಕರಿಗೆ ಮೊಬೈಲ್ ಕರೆ ಮಾಡಿ ಮಾಹಿತಿ ನೀಡಿದ್ದು, ಶಾಸಕರು ತಕ್ಷಣವೇ ನಗರಸಭಾ ಆಧಿಕಾರಿಗೆ ಪೊದೆ ತೆರವು ಮಾಡುವಂತೆ ಸೂಚನೆಯನ್ನು ನೀಡಿದ್ದು ಅದರಂತೆ ಪೊದೆ ತೆರವು ಕಾರ್ಯ ನಡೆದಿದೆ.
ಈ ರಸ್ತೆಯಲ್ಲಿ ಕಳೆದ ನಾಲ್ಕು ತಿಂಗಳಿಂದ ಪೊದೆಗಳು ತುಂಬಿಕೊಂಡಿದ್ದವು. ವಾಹನದಲ್ಲಿ ತೆರಳುವಾಗ ಮತ್ತು ಪಾದಚಾರಿಗಳಿಗೂ ಈ ರಸ್ತೆಯಲ್ಲಿ ನಡೆದಾಡಲು ಕಷ್ಟವಾಗಿತ್ತು. ಈ ಬಗ್ಗೆ ಸ್ಥಳೀಯರು ಅನೇಕ ಬಾರಿ ಸಂಬಂಧಿಸಿದಂದವರಿಗೆ ಮಾಹಿತಿ ನೀಡಿದ್ದರೂ ತೆರವು ಕಾರ್ಯ ನಡೆದಿರಲಿಲ್ಲ. ಇದರಿಂದ ನೊಂದ ಮಹಿಳೆ ಶಾಸಕರಿಗೆ ಮೊಬೈಲ್ ಕರೆ ಮಾಡಿ ತಮ್ಮ ಸಂಕಷ್ಟವನ್ನು ಹೇಳಿಕೊಂಡಿದ್ದರು.
ತಕ್ಷಣ ನಗರಸಭೆಗೆ ಶಾಸಕರಾದ ಅಶೋಕ್ ರೈಯವರು ಸೂಚನೆ ನೀಡಿ ಸಿಂಹವನ ಸೇರಿದಂತೆ ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು ಸಂಚರಿಸುವ ರಸ್ತೆಯಲ್ಲಿ ಪೊದೆ, ಹುಲ್ಲುಗಳು ತುಂಬಿದ್ದರೆ ಪರಿಶೀಲನೆ ಮಾಡಿ ಅದನ್ನು ತಕ್ಷಣ ತೆರವು ಮಾಡಬೇಕು. ರಸ್ತೆಯಲ್ಲಿ ತೆರಳುವ ಸಾರ್ವಜನಿಕರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗಬಾರದು, ಶಾಲಾ ಮಕ್ಕಳು ನಡೆದುಕೊಂಡು ಹೋಗುವ ವೇಳೆ ಪೊದೆಗಳಿಂದ ಹಾವುಗಳು ಬರುವ ಸಾಧ್ಯತೆ ಇದ್ದು ತಕ್ಷಣ ಕಾರ್ಯಪ್ರವೃತ್ತರಾಗಬೇಕೆಂದು ಸೂಚನೆಯನ್ನು ನೀಡಿದ್ದರು.
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…
ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…
ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…
ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…