ಪುತ್ತೂರು ನಗರಸಭಾ ವ್ಯಾಪ್ತಿಯ ಸಿಂಹವನ- ಆನಂದಾಶ್ರಮ ರಸ್ತೆಯಲ್ಲಿ ಹುಲ್ಲು ಮತ್ತು ಪೊದೆಗಳು ತುಂಬಿ ನಡೆದಾಡಲೂ ಸಾಧ್ಯವಾಗುತ್ತಿಲ್ಲ ಎಂದು ಸ್ಥಳೀಯ ಮಹಿಳೆಯೋರ್ವರು ಶಾಸಕರಿಗೆ ಮೊಬೈಲ್ ಕರೆ ಮಾಡಿ ಮಾಹಿತಿ ನೀಡಿದ್ದು, ಶಾಸಕರು ತಕ್ಷಣವೇ ನಗರಸಭಾ ಆಧಿಕಾರಿಗೆ ಪೊದೆ ತೆರವು ಮಾಡುವಂತೆ ಸೂಚನೆಯನ್ನು ನೀಡಿದ್ದು ಅದರಂತೆ ಪೊದೆ ತೆರವು ಕಾರ್ಯ ನಡೆದಿದೆ.
ಈ ರಸ್ತೆಯಲ್ಲಿ ಕಳೆದ ನಾಲ್ಕು ತಿಂಗಳಿಂದ ಪೊದೆಗಳು ತುಂಬಿಕೊಂಡಿದ್ದವು. ವಾಹನದಲ್ಲಿ ತೆರಳುವಾಗ ಮತ್ತು ಪಾದಚಾರಿಗಳಿಗೂ ಈ ರಸ್ತೆಯಲ್ಲಿ ನಡೆದಾಡಲು ಕಷ್ಟವಾಗಿತ್ತು. ಈ ಬಗ್ಗೆ ಸ್ಥಳೀಯರು ಅನೇಕ ಬಾರಿ ಸಂಬಂಧಿಸಿದಂದವರಿಗೆ ಮಾಹಿತಿ ನೀಡಿದ್ದರೂ ತೆರವು ಕಾರ್ಯ ನಡೆದಿರಲಿಲ್ಲ. ಇದರಿಂದ ನೊಂದ ಮಹಿಳೆ ಶಾಸಕರಿಗೆ ಮೊಬೈಲ್ ಕರೆ ಮಾಡಿ ತಮ್ಮ ಸಂಕಷ್ಟವನ್ನು ಹೇಳಿಕೊಂಡಿದ್ದರು.
ತಕ್ಷಣ ನಗರಸಭೆಗೆ ಶಾಸಕರಾದ ಅಶೋಕ್ ರೈಯವರು ಸೂಚನೆ ನೀಡಿ ಸಿಂಹವನ ಸೇರಿದಂತೆ ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು ಸಂಚರಿಸುವ ರಸ್ತೆಯಲ್ಲಿ ಪೊದೆ, ಹುಲ್ಲುಗಳು ತುಂಬಿದ್ದರೆ ಪರಿಶೀಲನೆ ಮಾಡಿ ಅದನ್ನು ತಕ್ಷಣ ತೆರವು ಮಾಡಬೇಕು. ರಸ್ತೆಯಲ್ಲಿ ತೆರಳುವ ಸಾರ್ವಜನಿಕರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗಬಾರದು, ಶಾಲಾ ಮಕ್ಕಳು ನಡೆದುಕೊಂಡು ಹೋಗುವ ವೇಳೆ ಪೊದೆಗಳಿಂದ ಹಾವುಗಳು ಬರುವ ಸಾಧ್ಯತೆ ಇದ್ದು ತಕ್ಷಣ ಕಾರ್ಯಪ್ರವೃತ್ತರಾಗಬೇಕೆಂದು ಸೂಚನೆಯನ್ನು ನೀಡಿದ್ದರು.
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…