ಪುತ್ತೂರು ನಗರಸಭಾ ವ್ಯಾಪ್ತಿಯ ಸಿಂಹವನ- ಆನಂದಾಶ್ರಮ ರಸ್ತೆಯಲ್ಲಿ ಹುಲ್ಲು ಮತ್ತು ಪೊದೆಗಳು ತುಂಬಿ ನಡೆದಾಡಲೂ ಸಾಧ್ಯವಾಗುತ್ತಿಲ್ಲ ಎಂದು ಸ್ಥಳೀಯ ಮಹಿಳೆಯೋರ್ವರು ಶಾಸಕರಿಗೆ ಮೊಬೈಲ್ ಕರೆ ಮಾಡಿ ಮಾಹಿತಿ ನೀಡಿದ್ದು, ಶಾಸಕರು ತಕ್ಷಣವೇ ನಗರಸಭಾ ಆಧಿಕಾರಿಗೆ ಪೊದೆ ತೆರವು ಮಾಡುವಂತೆ ಸೂಚನೆಯನ್ನು ನೀಡಿದ್ದು ಅದರಂತೆ ಪೊದೆ ತೆರವು ಕಾರ್ಯ ನಡೆದಿದೆ.
ಈ ರಸ್ತೆಯಲ್ಲಿ ಕಳೆದ ನಾಲ್ಕು ತಿಂಗಳಿಂದ ಪೊದೆಗಳು ತುಂಬಿಕೊಂಡಿದ್ದವು. ವಾಹನದಲ್ಲಿ ತೆರಳುವಾಗ ಮತ್ತು ಪಾದಚಾರಿಗಳಿಗೂ ಈ ರಸ್ತೆಯಲ್ಲಿ ನಡೆದಾಡಲು ಕಷ್ಟವಾಗಿತ್ತು. ಈ ಬಗ್ಗೆ ಸ್ಥಳೀಯರು ಅನೇಕ ಬಾರಿ ಸಂಬಂಧಿಸಿದಂದವರಿಗೆ ಮಾಹಿತಿ ನೀಡಿದ್ದರೂ ತೆರವು ಕಾರ್ಯ ನಡೆದಿರಲಿಲ್ಲ. ಇದರಿಂದ ನೊಂದ ಮಹಿಳೆ ಶಾಸಕರಿಗೆ ಮೊಬೈಲ್ ಕರೆ ಮಾಡಿ ತಮ್ಮ ಸಂಕಷ್ಟವನ್ನು ಹೇಳಿಕೊಂಡಿದ್ದರು.
ತಕ್ಷಣ ನಗರಸಭೆಗೆ ಶಾಸಕರಾದ ಅಶೋಕ್ ರೈಯವರು ಸೂಚನೆ ನೀಡಿ ಸಿಂಹವನ ಸೇರಿದಂತೆ ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು ಸಂಚರಿಸುವ ರಸ್ತೆಯಲ್ಲಿ ಪೊದೆ, ಹುಲ್ಲುಗಳು ತುಂಬಿದ್ದರೆ ಪರಿಶೀಲನೆ ಮಾಡಿ ಅದನ್ನು ತಕ್ಷಣ ತೆರವು ಮಾಡಬೇಕು. ರಸ್ತೆಯಲ್ಲಿ ತೆರಳುವ ಸಾರ್ವಜನಿಕರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗಬಾರದು, ಶಾಲಾ ಮಕ್ಕಳು ನಡೆದುಕೊಂಡು ಹೋಗುವ ವೇಳೆ ಪೊದೆಗಳಿಂದ ಹಾವುಗಳು ಬರುವ ಸಾಧ್ಯತೆ ಇದ್ದು ತಕ್ಷಣ ಕಾರ್ಯಪ್ರವೃತ್ತರಾಗಬೇಕೆಂದು ಸೂಚನೆಯನ್ನು ನೀಡಿದ್ದರು.
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…