Advertisement
ಸುದ್ದಿಗಳು

ಪೊದೆಯಿಂದ ತುಂಬಿದ ರಸ್ತೆ | ಮಹಿಳೆಯಿಂದ ಪುತ್ತೂರು ಶಾಸಕರಿಗೆ ದೂರು | ನಗರಸಭೆಗೆ ಸೂಚನೆ | ಪೊದೆ ತೆರವು

Share

ಪುತ್ತೂರು ನಗರಸಭಾ ವ್ಯಾಪ್ತಿಯ ಸಿಂಹವನ- ಆನಂದಾಶ್ರಮ ರಸ್ತೆಯಲ್ಲಿ ಹುಲ್ಲು ಮತ್ತು ಪೊದೆಗಳು ತುಂಬಿ ನಡೆದಾಡಲೂ ಸಾಧ್ಯವಾಗುತ್ತಿಲ್ಲ ಎಂದು ಸ್ಥಳೀಯ ಮಹಿಳೆಯೋರ್ವರು ಶಾಸಕರಿಗೆ ಮೊಬೈಲ್ ಕರೆ ಮಾಡಿ ಮಾಹಿತಿ ನೀಡಿದ್ದು, ಶಾಸಕರು ತಕ್ಷಣವೇ ನಗರಸಭಾ ಆಧಿಕಾರಿಗೆ ಪೊದೆ ತೆರವು ಮಾಡುವಂತೆ ಸೂಚನೆಯನ್ನು ನೀಡಿದ್ದು ಅದರಂತೆ ಪೊದೆ ತೆರವು ಕಾರ್ಯ ನಡೆದಿದೆ.

ಈ ರಸ್ತೆಯಲ್ಲಿ ಕಳೆದ ನಾಲ್ಕು ತಿಂಗಳಿಂದ ಪೊದೆಗಳು ತುಂಬಿಕೊಂಡಿದ್ದವು. ವಾಹನದಲ್ಲಿ ತೆರಳುವಾಗ ಮತ್ತು ಪಾದಚಾರಿಗಳಿಗೂ ಈ ರಸ್ತೆಯಲ್ಲಿ ನಡೆದಾಡಲು ಕಷ್ಟವಾಗಿತ್ತು. ಈ ಬಗ್ಗೆ ಸ್ಥಳೀಯರು ಅನೇಕ ಬಾರಿ ಸಂಬಂಧಿಸಿದಂದವರಿಗೆ ಮಾಹಿತಿ ನೀಡಿದ್ದರೂ ತೆರವು ಕಾರ್ಯ ನಡೆದಿರಲಿಲ್ಲ. ಇದರಿಂದ ನೊಂದ ಮಹಿಳೆ ಶಾಸಕರಿಗೆ ಮೊಬೈಲ್ ಕರೆ ಮಾಡಿ ತಮ್ಮ ಸಂಕಷ್ಟವನ್ನು ಹೇಳಿಕೊಂಡಿದ್ದರು.

ತಕ್ಷಣ ನಗರಸಭೆಗೆ ಶಾಸಕರಾದ ಅಶೋಕ್ ರೈಯವರು ಸೂಚನೆ ನೀಡಿ ಸಿಂಹವನ ಸೇರಿದಂತೆ ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು ಸಂಚರಿಸುವ ರಸ್ತೆಯಲ್ಲಿ ಪೊದೆ, ಹುಲ್ಲುಗಳು ತುಂಬಿದ್ದರೆ ಪರಿಶೀಲನೆ ಮಾಡಿ ಅದನ್ನು ತಕ್ಷಣ ತೆರವು ಮಾಡಬೇಕು. ರಸ್ತೆಯಲ್ಲಿ ತೆರಳುವ ಸಾರ್ವಜನಿಕರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗಬಾರದು, ಶಾಲಾ ಮಕ್ಕಳು ನಡೆದುಕೊಂಡು ಹೋಗುವ ವೇಳೆ ಪೊದೆಗಳಿಂದ ಹಾವುಗಳು ಬರುವ ಸಾಧ್ಯತೆ ಇದ್ದು ತಕ್ಷಣ ಕಾರ್ಯಪ್ರವೃತ್ತರಾಗಬೇಕೆಂದು ಸೂಚನೆಯನ್ನು ನೀಡಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

2 days ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

2 days ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

2 days ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

3 days ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

3 days ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

3 days ago