ಪುತ್ತೂರು ನಗರಸಭಾ ವ್ಯಾಪ್ತಿಯ ಸಿಂಹವನ- ಆನಂದಾಶ್ರಮ ರಸ್ತೆಯಲ್ಲಿ ಹುಲ್ಲು ಮತ್ತು ಪೊದೆಗಳು ತುಂಬಿ ನಡೆದಾಡಲೂ ಸಾಧ್ಯವಾಗುತ್ತಿಲ್ಲ ಎಂದು ಸ್ಥಳೀಯ ಮಹಿಳೆಯೋರ್ವರು ಶಾಸಕರಿಗೆ ಮೊಬೈಲ್ ಕರೆ ಮಾಡಿ ಮಾಹಿತಿ ನೀಡಿದ್ದು, ಶಾಸಕರು ತಕ್ಷಣವೇ ನಗರಸಭಾ ಆಧಿಕಾರಿಗೆ ಪೊದೆ ತೆರವು ಮಾಡುವಂತೆ ಸೂಚನೆಯನ್ನು ನೀಡಿದ್ದು ಅದರಂತೆ ಪೊದೆ ತೆರವು ಕಾರ್ಯ ನಡೆದಿದೆ.
ಈ ರಸ್ತೆಯಲ್ಲಿ ಕಳೆದ ನಾಲ್ಕು ತಿಂಗಳಿಂದ ಪೊದೆಗಳು ತುಂಬಿಕೊಂಡಿದ್ದವು. ವಾಹನದಲ್ಲಿ ತೆರಳುವಾಗ ಮತ್ತು ಪಾದಚಾರಿಗಳಿಗೂ ಈ ರಸ್ತೆಯಲ್ಲಿ ನಡೆದಾಡಲು ಕಷ್ಟವಾಗಿತ್ತು. ಈ ಬಗ್ಗೆ ಸ್ಥಳೀಯರು ಅನೇಕ ಬಾರಿ ಸಂಬಂಧಿಸಿದಂದವರಿಗೆ ಮಾಹಿತಿ ನೀಡಿದ್ದರೂ ತೆರವು ಕಾರ್ಯ ನಡೆದಿರಲಿಲ್ಲ. ಇದರಿಂದ ನೊಂದ ಮಹಿಳೆ ಶಾಸಕರಿಗೆ ಮೊಬೈಲ್ ಕರೆ ಮಾಡಿ ತಮ್ಮ ಸಂಕಷ್ಟವನ್ನು ಹೇಳಿಕೊಂಡಿದ್ದರು.
ತಕ್ಷಣ ನಗರಸಭೆಗೆ ಶಾಸಕರಾದ ಅಶೋಕ್ ರೈಯವರು ಸೂಚನೆ ನೀಡಿ ಸಿಂಹವನ ಸೇರಿದಂತೆ ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು ಸಂಚರಿಸುವ ರಸ್ತೆಯಲ್ಲಿ ಪೊದೆ, ಹುಲ್ಲುಗಳು ತುಂಬಿದ್ದರೆ ಪರಿಶೀಲನೆ ಮಾಡಿ ಅದನ್ನು ತಕ್ಷಣ ತೆರವು ಮಾಡಬೇಕು. ರಸ್ತೆಯಲ್ಲಿ ತೆರಳುವ ಸಾರ್ವಜನಿಕರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗಬಾರದು, ಶಾಲಾ ಮಕ್ಕಳು ನಡೆದುಕೊಂಡು ಹೋಗುವ ವೇಳೆ ಪೊದೆಗಳಿಂದ ಹಾವುಗಳು ಬರುವ ಸಾಧ್ಯತೆ ಇದ್ದು ತಕ್ಷಣ ಕಾರ್ಯಪ್ರವೃತ್ತರಾಗಬೇಕೆಂದು ಸೂಚನೆಯನ್ನು ನೀಡಿದ್ದರು.
ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…