ಕೋಲಾರದಲ್ಲಿ ಹಲಸಿನ ತೋಟ | 1600 ಕ್ಕೂ ಹೆಚ್ಚು ಹಲಸಿನ ಗಿಡ | ಪರ್ಯಾಯ ಕೃಷಿಯತ್ತ ಚಿತ್ತ |

June 8, 2023
1:15 PM

ಕರ್ನಾಟಕದ ಆಯಾ ಜಿಲ್ಲೆಯ ಕೃಷಿಕರು ಹವಾಮಾನಕ್ಕೆ ಅನುಗುಣವಾಗಿ ವಿವಿಧ ಬೆಳೆಗಳನ್ನು ಬೆಳೆಯುತ್ತಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗ ಅಡಿಕೆ ಮುಖ್ಯ ಬೆಳೆಯಾದರೆ, ಕೋಲಾರದಲ್ಲಿ ಟೊಮೆಟೋ ಹಾಗೂ ಮಾವು ಕೃಷಿ. ಏಷ್ಯಾದಲ್ಲೆ ಅತಿದೊಡ್ಡ ಟೊಮೆಟೊ ಮಾರುಕಟ್ಟೆ ಹೊಂದಿರುವ ಕೋಲಾರ ಇದೀಗ  ಅತೀ ದೊಡ್ಡ ಹಲಸಿನ ತೋಟವನ್ನೂ ಹೊಂದಿದೆ. ಪರ್ಯಾಯ ಕೃಷಿಯೂ ಈಗ ಗಮನ ಸೆಳೆಯುತ್ತಿದೆ.

Advertisement
Advertisement

1974 ರಲ್ಲಿ ಎಂ.ಹೆಚ್ ಮರೀಗೌಡ ಎಂಬುವರು ಕೋಲಾರ ನಗರದ ಟಮಕ ಬಳಿ ಹಲಸಿನ ಗಿಡಗಳನ್ನು ನೆಟ್ಟಿದ್ದರು. ಅದರಲ್ಲೂ ರಾಜ್ಯದ ವಿವಿಧ ಭಾಗದಿಂದ ತಳಿಗಳನ್ನು ತಂದು ಸುಮಾರು 1600 ಕ್ಕೂ ಹೆಚ್ಚು ಹಲಸಿನ ಗಿಡಗಳನ್ನು ಬೆಳೆಸಿದ್ದಾರೆ. ನಂತರ ಈ ತೋಟದಲ್ಲಿ 2009 ರಲ್ಲಿ ತೋಟಗಾರಿಕಾ ಮಹಾ ವಿಶ್ವವಿದ್ಯಾಲಯವನ್ನು ಸ್ಥಾಪನೆ ಮಾಡಲಾಗಿದೆ. ಸುಮಾರು 40 ಎಕರೆ ಪ್ರದೇಶದಲ್ಲಿ  ಹಲಸಿನ ತೋಟವಿದೆ, 1600ಕ್ಕೂ ಹೆಚ್ಚು ಹಲಸು ಮರಗಳು ಇಲ್ಲಿವೆ.

Advertisement

ಹಲಸಿನ ಜಾಮ್, ಪಲ್ಪಿ ಜ್ಯೂಸ್, ಹಲಸಿನ ಹಲ್ವಾ, ಬಿರಿಯಾನಿ, ಕಬಾಬ್ ಸೇರಿದಂತೆ ತರಕಾರಿ ಮಾಂಸವಾಗಿ ಹಲವು ಖಾದ್ಯಗಳನ್ನು ತಯಾರು ಮಾಡುವ ಮೂಲಕ ಹಲಸಿನ ಮಹತ್ವವನ್ನು ಹೆಚ್ಚಿಸಲಾಗಿದೆ. ಹಲಸಿನ ಸಂಸ್ಕರಣ ಘಟಕ ಸ್ಥಾಪನೆ ಮಾಡಿ, ಹಲಸಿನ ವಿವಿಧ ಖಾದ್ಯಗಳನ್ನು, ವಿವಿಧ ಉತ್ಪನ್ನಗಳನ್ನು ಇಲ್ಲೇ ತಯಾರು ಮಾಡಿ ಮಾರುಕಟ್ಟೆಯಲ್ಲಿ ಮಾರಾಟ ಮಾಡಲಾಗುತ್ತಿದೆ.

ಕೃಷಿಕರು ಇದೇ ಮಾದರಿಯಲ್ಲಿ ಪ್ರಮುಖ ಕೃಷಿಯ ಜೊತೆಗೆ ಪರ್ಯಾಯ ಕೃಷಿಯತ್ತಲೂ ಅದರಲ್ಲೂ ಆಹಾರ ಬೆಳೆಯತ್ತಲೂ ಚಿಂತನೆ ನಡೆಸಲು ಈಗ ಸಕಾಲವಾಗಿದೆ.

Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

Karnataka Weather | 27-04-2024 | ಮೋಡ- ಬಿಸಿಗಾಳಿ | ಮಳೆ ಸಾಧ್ಯತೆ ಕಡಿಮೆ |
April 27, 2024
3:21 PM
by: ಸಾಯಿಶೇಖರ್ ಕರಿಕಳ
ಕೋವಿ ಠೇವಣಾತಿ ಪ್ರಕರಣ | ಬೆಳ್ಳಾರೆ ಜಯಪ್ರಸಾದ್ ಜೋಶಿ ಹಾಗೂ ಇತರ 4 ರಿಟ್ ಅರ್ಜಿದಾರರ ಪರ ಹೈಕೋರ್ಟ್ ಆದೇಶ‌ |
April 27, 2024
2:15 PM
by: ದ ರೂರಲ್ ಮಿರರ್.ಕಾಂ
ಮಲೆನಾಡಗಿಡ್ಡ ಉಳಿಸುವ ಆಂದೋಲನಕ್ಕೆ ತೊಡಗುವ ಅನಿವಾರ್ಯತೆ ಇದೆ | ಯಾಕೆ ಗೊತ್ತಾ…?
April 25, 2024
11:48 PM
by: The Rural Mirror ಸುದ್ದಿಜಾಲ
ಏರಿದ ತಾಪಮಾನ | ರಾಜ್ಯದಲ್ಲಿ ಮುಂದಿನ 5 ದಿನ ಬೀಸಲಿದೆ ಬಿಸಿಗಾಳಿ ಎಚ್ಚರಿಕೆ..!
April 25, 2024
11:01 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror