ಸುದ್ದಿಗಳು

ಕೋಲಾರದಲ್ಲಿ ಹಲಸಿನ ತೋಟ | 1600 ಕ್ಕೂ ಹೆಚ್ಚು ಹಲಸಿನ ಗಿಡ | ಪರ್ಯಾಯ ಕೃಷಿಯತ್ತ ಚಿತ್ತ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕರ್ನಾಟಕದ ಆಯಾ ಜಿಲ್ಲೆಯ ಕೃಷಿಕರು ಹವಾಮಾನಕ್ಕೆ ಅನುಗುಣವಾಗಿ ವಿವಿಧ ಬೆಳೆಗಳನ್ನು ಬೆಳೆಯುತ್ತಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗ ಅಡಿಕೆ ಮುಖ್ಯ ಬೆಳೆಯಾದರೆ, ಕೋಲಾರದಲ್ಲಿ ಟೊಮೆಟೋ ಹಾಗೂ ಮಾವು ಕೃಷಿ. ಏಷ್ಯಾದಲ್ಲೆ ಅತಿದೊಡ್ಡ ಟೊಮೆಟೊ ಮಾರುಕಟ್ಟೆ ಹೊಂದಿರುವ ಕೋಲಾರ ಇದೀಗ  ಅತೀ ದೊಡ್ಡ ಹಲಸಿನ ತೋಟವನ್ನೂ ಹೊಂದಿದೆ. ಪರ್ಯಾಯ ಕೃಷಿಯೂ ಈಗ ಗಮನ ಸೆಳೆಯುತ್ತಿದೆ.

Advertisement
Advertisement

1974 ರಲ್ಲಿ ಎಂ.ಹೆಚ್ ಮರೀಗೌಡ ಎಂಬುವರು ಕೋಲಾರ ನಗರದ ಟಮಕ ಬಳಿ ಹಲಸಿನ ಗಿಡಗಳನ್ನು ನೆಟ್ಟಿದ್ದರು. ಅದರಲ್ಲೂ ರಾಜ್ಯದ ವಿವಿಧ ಭಾಗದಿಂದ ತಳಿಗಳನ್ನು ತಂದು ಸುಮಾರು 1600 ಕ್ಕೂ ಹೆಚ್ಚು ಹಲಸಿನ ಗಿಡಗಳನ್ನು ಬೆಳೆಸಿದ್ದಾರೆ. ನಂತರ ಈ ತೋಟದಲ್ಲಿ 2009 ರಲ್ಲಿ ತೋಟಗಾರಿಕಾ ಮಹಾ ವಿಶ್ವವಿದ್ಯಾಲಯವನ್ನು ಸ್ಥಾಪನೆ ಮಾಡಲಾಗಿದೆ. ಸುಮಾರು 40 ಎಕರೆ ಪ್ರದೇಶದಲ್ಲಿ  ಹಲಸಿನ ತೋಟವಿದೆ, 1600ಕ್ಕೂ ಹೆಚ್ಚು ಹಲಸು ಮರಗಳು ಇಲ್ಲಿವೆ.

ಹಲಸಿನ ಜಾಮ್, ಪಲ್ಪಿ ಜ್ಯೂಸ್, ಹಲಸಿನ ಹಲ್ವಾ, ಬಿರಿಯಾನಿ, ಕಬಾಬ್ ಸೇರಿದಂತೆ ತರಕಾರಿ ಮಾಂಸವಾಗಿ ಹಲವು ಖಾದ್ಯಗಳನ್ನು ತಯಾರು ಮಾಡುವ ಮೂಲಕ ಹಲಸಿನ ಮಹತ್ವವನ್ನು ಹೆಚ್ಚಿಸಲಾಗಿದೆ. ಹಲಸಿನ ಸಂಸ್ಕರಣ ಘಟಕ ಸ್ಥಾಪನೆ ಮಾಡಿ, ಹಲಸಿನ ವಿವಿಧ ಖಾದ್ಯಗಳನ್ನು, ವಿವಿಧ ಉತ್ಪನ್ನಗಳನ್ನು ಇಲ್ಲೇ ತಯಾರು ಮಾಡಿ ಮಾರುಕಟ್ಟೆಯಲ್ಲಿ ಮಾರಾಟ ಮಾಡಲಾಗುತ್ತಿದೆ.

ಕೃಷಿಕರು ಇದೇ ಮಾದರಿಯಲ್ಲಿ ಪ್ರಮುಖ ಕೃಷಿಯ ಜೊತೆಗೆ ಪರ್ಯಾಯ ಕೃಷಿಯತ್ತಲೂ ಅದರಲ್ಲೂ ಆಹಾರ ಬೆಳೆಯತ್ತಲೂ ಚಿಂತನೆ ನಡೆಸಲು ಈಗ ಸಕಾಲವಾಗಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಸಂಪಾಜೆ ಗ್ರಾಮದಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಹಾಗೂ…

8 hours ago

ಗೆದ್ದದ್ದು ಬೆಂಗಳೂರು ಅಲ್ಲ, ಇಂಗ್ಲೇಂಡಿನ ಡಿಯಾಜಿಯೋ ಕಂಪೆನಿ…!!! ಗೊತ್ತಾ..?

ಎಲ್ಲಿ  ಉಚಿತವೆಂಬ ಆಮಿಶ ಇದೆಯೋ  ಅಲ್ಲಿ ತಳ್ಳಾಟವೂ  ಇರುತ್ತದೆ. ಸರಕಾರಿ ಬಸ್ ಗಳಲ್ಲಿ…

9 hours ago

ಭಾರೀ ಮಳೆ ಸಾಧ್ಯತೆ | ಕೊಡಗು-ಉಡುಪಿ ಜಿಲ್ಲೆಯಲ್ಲಿ ಎಚ್ಚರಿಕೆ | ಕೊಡಗಿನಲ್ಲಿ ಅಂಗನವಾಡಿ ಕೇಂದ್ರಗಳಿಗೆ ರಜೆ | ಉಡುಪಿಯಲ್ಲಿ ಶಾಲೆಗಳಿಗೆ ರಜೆ |

ಕೊಡಗು ಜಿಲ್ಲೆಯಲ್ಲಿ ಮಳೆ ಹೆಚ್ಚಾಗುತ್ತಿದ್ದು, ಜಿಲ್ಲೆಯಲ್ಲಿ  ರೆಡ್ ಅಲರ್ಟ್ ಘೋಷಿಸಲಾಗಿದೆ. ಹೆಚ್ಚಿನ ಗಾಳಿ-ಮಳೆ…

9 hours ago

ನಿಮ್ಮಲ್ಲಿ ಎಳೆ ಅಡಿಕೆ ಬೀಳ್ತಾ ಇದೆಯಾ…? ಕೇಳಲು ಶುರು ಮಾಡಿದ್ದಾರೆ ಅಡಿಕೆ ಬೆಳೆಗಾರರು..!

ಈ ಬಾರಿ ಮೇ ತಿಂಗಳಿನಿಂದಲೇ ಮಳೆ ಆರಂಭವಾಗಿದೆ. ಜೂನ್.‌10 ಕಳೆಯುವ ಹೊತ್ತಿಗೆ ವಾತಾವರಣ…

15 hours ago

ಹವಾಮಾನ ವರದಿ | 11-06-2025 | ಮುಂದಿನ 2 ದಿವಸಗಳ ಕಾಲ ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆ | ಮುನ್ಸೂಚನೆಯಂತೆ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಇಲ್ಲ |

ಈಗಿನಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದ್ದರೂ ನಿರೀಕ್ಷಿತ ಪ್ರಮಾಣದಲ್ಲಿ…

16 hours ago

ಒಂದೇ ರಾಶಿಯಲ್ಲಿ 3 ಗ್ರಹ…..| ತ್ರಿಗ್ರಾಹಿ ಯೋಗವು 50 ವರ್ಷಗಳ ನಂತರ ಸಂಭವಿಸುತ್ತಿದೆ | 5 ರಾಶಿಯವರಿಗೆ ಬಂಪರ್‌ ಲಾಟರಿ..!

ಜೂನ್ 2025ರಲ್ಲಿ ಮಿಥುನ ರಾಶಿಯಲ್ಲಿ ಸೂರ್ಯ, ಬುಧ ಮತ್ತು ಗುರು ಗ್ರಹಗಳ ತ್ರಿಗ್ರಾಹಿ…

23 hours ago