ಸುದ್ದಿಗಳು

ಕೋಲಾರದಲ್ಲಿ ಹಲಸಿನ ತೋಟ | 1600 ಕ್ಕೂ ಹೆಚ್ಚು ಹಲಸಿನ ಗಿಡ | ಪರ್ಯಾಯ ಕೃಷಿಯತ್ತ ಚಿತ್ತ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕರ್ನಾಟಕದ ಆಯಾ ಜಿಲ್ಲೆಯ ಕೃಷಿಕರು ಹವಾಮಾನಕ್ಕೆ ಅನುಗುಣವಾಗಿ ವಿವಿಧ ಬೆಳೆಗಳನ್ನು ಬೆಳೆಯುತ್ತಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗ ಅಡಿಕೆ ಮುಖ್ಯ ಬೆಳೆಯಾದರೆ, ಕೋಲಾರದಲ್ಲಿ ಟೊಮೆಟೋ ಹಾಗೂ ಮಾವು ಕೃಷಿ. ಏಷ್ಯಾದಲ್ಲೆ ಅತಿದೊಡ್ಡ ಟೊಮೆಟೊ ಮಾರುಕಟ್ಟೆ ಹೊಂದಿರುವ ಕೋಲಾರ ಇದೀಗ  ಅತೀ ದೊಡ್ಡ ಹಲಸಿನ ತೋಟವನ್ನೂ ಹೊಂದಿದೆ. ಪರ್ಯಾಯ ಕೃಷಿಯೂ ಈಗ ಗಮನ ಸೆಳೆಯುತ್ತಿದೆ.

Advertisement

1974 ರಲ್ಲಿ ಎಂ.ಹೆಚ್ ಮರೀಗೌಡ ಎಂಬುವರು ಕೋಲಾರ ನಗರದ ಟಮಕ ಬಳಿ ಹಲಸಿನ ಗಿಡಗಳನ್ನು ನೆಟ್ಟಿದ್ದರು. ಅದರಲ್ಲೂ ರಾಜ್ಯದ ವಿವಿಧ ಭಾಗದಿಂದ ತಳಿಗಳನ್ನು ತಂದು ಸುಮಾರು 1600 ಕ್ಕೂ ಹೆಚ್ಚು ಹಲಸಿನ ಗಿಡಗಳನ್ನು ಬೆಳೆಸಿದ್ದಾರೆ. ನಂತರ ಈ ತೋಟದಲ್ಲಿ 2009 ರಲ್ಲಿ ತೋಟಗಾರಿಕಾ ಮಹಾ ವಿಶ್ವವಿದ್ಯಾಲಯವನ್ನು ಸ್ಥಾಪನೆ ಮಾಡಲಾಗಿದೆ. ಸುಮಾರು 40 ಎಕರೆ ಪ್ರದೇಶದಲ್ಲಿ  ಹಲಸಿನ ತೋಟವಿದೆ, 1600ಕ್ಕೂ ಹೆಚ್ಚು ಹಲಸು ಮರಗಳು ಇಲ್ಲಿವೆ.

ಹಲಸಿನ ಜಾಮ್, ಪಲ್ಪಿ ಜ್ಯೂಸ್, ಹಲಸಿನ ಹಲ್ವಾ, ಬಿರಿಯಾನಿ, ಕಬಾಬ್ ಸೇರಿದಂತೆ ತರಕಾರಿ ಮಾಂಸವಾಗಿ ಹಲವು ಖಾದ್ಯಗಳನ್ನು ತಯಾರು ಮಾಡುವ ಮೂಲಕ ಹಲಸಿನ ಮಹತ್ವವನ್ನು ಹೆಚ್ಚಿಸಲಾಗಿದೆ. ಹಲಸಿನ ಸಂಸ್ಕರಣ ಘಟಕ ಸ್ಥಾಪನೆ ಮಾಡಿ, ಹಲಸಿನ ವಿವಿಧ ಖಾದ್ಯಗಳನ್ನು, ವಿವಿಧ ಉತ್ಪನ್ನಗಳನ್ನು ಇಲ್ಲೇ ತಯಾರು ಮಾಡಿ ಮಾರುಕಟ್ಟೆಯಲ್ಲಿ ಮಾರಾಟ ಮಾಡಲಾಗುತ್ತಿದೆ.

ಕೃಷಿಕರು ಇದೇ ಮಾದರಿಯಲ್ಲಿ ಪ್ರಮುಖ ಕೃಷಿಯ ಜೊತೆಗೆ ಪರ್ಯಾಯ ಕೃಷಿಯತ್ತಲೂ ಅದರಲ್ಲೂ ಆಹಾರ ಬೆಳೆಯತ್ತಲೂ ಚಿಂತನೆ ನಡೆಸಲು ಈಗ ಸಕಾಲವಾಗಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಸರ್ಪಸಂಸ್ಕಾರವು ಈ ಶಾಪದಿಂದ ಮುಕ್ತಿಯನ್ನು ಒದಗಿಸುವ ಮಾರ್ಗ

ವಿವಾಹದ ವಿಳಂಬ, ಸಂತಾನದ ಕೊರತೆ, ಮತ್ತು ಆರ್ಥಿಕ ಅಡೆತಡೆಗಳಿಗೆ ಕಾರಣವಾಗಬಹುದು. ಸರ್ಪಸಂಸ್ಕಾರವು ಈ…

2 hours ago

ಹವಾಮಾನ ವರದಿ | 31-07-2025 | ಇನ್ನೊಂದು ವಾಯುಭಾರ ಕುಸಿತದ ಲಕ್ಷಣ |

ಆಗಸ್ಟ್ 2ನೇ ವಾರದಲ್ಲಿ ತಮಿಳುನಾಡು ಕರಾವಳಿಯ ಸಮೀಪ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ…

21 hours ago

ಆಧುನಿಕ ಯುಗದಲ್ಲಿ ತಂತ್ರಜ್ಞ ದಲ್ಲಾಳಿಗಳು

ಅಮಾಯಕ ನಾಗರಿಕರನ್ನು ಬಲಿಗೆ ಹಾಕುವ ಕಾನೂನು ಡಿಜಿಟಲ್ ಸಿಗ್ನೇಜರಿದ್ದು ಮಾತ್ರವಲ್ಲ, ಇನ್ನು ಅನೇಕ…

1 day ago

ಹಾವೇರಿಯಲ್ಲಿ ಕಳಪೆ ಗೊಬ್ಬರ ಹಾಗೂ ಕಳಪೆ ಬೀಜಗಳ ಮಾರಾಟ ಜಾಲ ಸಕ್ರಿಯ | ರಾಜ್ಯದ 639 ರೈತರಿಗೆ ವಂಚನೆ |

ಯೂರಿಯಾ ಗೊಬ್ಬರ ಅಭಾವದ ನಡುವೆಯೇ ರಾಜ್ಯದಲ್ಲಿ ಕಳಪೆ ಗೊಬ್ಬರ ಹಾಗೂ ಕಳಪೆ ಬೀಜಗಳ…

2 days ago

ಕಾಡಾನೆಗಳ ನಿಯಂತ್ರಣಕ್ಕೆ ಕೇಂದ್ರ ಅರಣ್ಯ ಸಚಿವರಿಗೆ ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ಮನವಿ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು ಕಾಡಾನೆಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ…

2 days ago

ಕೊಡಗು ಜಿಲ್ಲೆಯಲ್ಲಿ ಭಾರಿ ಗಾಳಿ ಮಳೆ | 800 ಕ್ಕೂ ಅಧಿಕ ವಿದ್ಯುತ್‌ ಕಂಬಗಳಿಗೆ ಹಾನಿ – ವಿದ್ಯುತ್ ಸಂಪರ್ಕ ಅಸ್ತವ್ಯಸ್ತ

ಕೊಡಗು ಜಿಲ್ಲೆಯಲ್ಲಿ ಕಳೆದ ಐದಾರು ದಿನಗಳಿಂದ ಸುರಿದ ಭಾರಿ ಗಾಳಿ ಮಳೆಯಿಂದಾಗಿ ಸುಮಾರು…

2 days ago