Advertisement
ಸುದ್ದಿಗಳು

ಕೋಲಾರದಲ್ಲಿ ಹಲಸಿನ ತೋಟ | 1600 ಕ್ಕೂ ಹೆಚ್ಚು ಹಲಸಿನ ಗಿಡ | ಪರ್ಯಾಯ ಕೃಷಿಯತ್ತ ಚಿತ್ತ |

Share

ಕರ್ನಾಟಕದ ಆಯಾ ಜಿಲ್ಲೆಯ ಕೃಷಿಕರು ಹವಾಮಾನಕ್ಕೆ ಅನುಗುಣವಾಗಿ ವಿವಿಧ ಬೆಳೆಗಳನ್ನು ಬೆಳೆಯುತ್ತಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗ ಅಡಿಕೆ ಮುಖ್ಯ ಬೆಳೆಯಾದರೆ, ಕೋಲಾರದಲ್ಲಿ ಟೊಮೆಟೋ ಹಾಗೂ ಮಾವು ಕೃಷಿ. ಏಷ್ಯಾದಲ್ಲೆ ಅತಿದೊಡ್ಡ ಟೊಮೆಟೊ ಮಾರುಕಟ್ಟೆ ಹೊಂದಿರುವ ಕೋಲಾರ ಇದೀಗ  ಅತೀ ದೊಡ್ಡ ಹಲಸಿನ ತೋಟವನ್ನೂ ಹೊಂದಿದೆ. ಪರ್ಯಾಯ ಕೃಷಿಯೂ ಈಗ ಗಮನ ಸೆಳೆಯುತ್ತಿದೆ.

Advertisement
Advertisement

1974 ರಲ್ಲಿ ಎಂ.ಹೆಚ್ ಮರೀಗೌಡ ಎಂಬುವರು ಕೋಲಾರ ನಗರದ ಟಮಕ ಬಳಿ ಹಲಸಿನ ಗಿಡಗಳನ್ನು ನೆಟ್ಟಿದ್ದರು. ಅದರಲ್ಲೂ ರಾಜ್ಯದ ವಿವಿಧ ಭಾಗದಿಂದ ತಳಿಗಳನ್ನು ತಂದು ಸುಮಾರು 1600 ಕ್ಕೂ ಹೆಚ್ಚು ಹಲಸಿನ ಗಿಡಗಳನ್ನು ಬೆಳೆಸಿದ್ದಾರೆ. ನಂತರ ಈ ತೋಟದಲ್ಲಿ 2009 ರಲ್ಲಿ ತೋಟಗಾರಿಕಾ ಮಹಾ ವಿಶ್ವವಿದ್ಯಾಲಯವನ್ನು ಸ್ಥಾಪನೆ ಮಾಡಲಾಗಿದೆ. ಸುಮಾರು 40 ಎಕರೆ ಪ್ರದೇಶದಲ್ಲಿ  ಹಲಸಿನ ತೋಟವಿದೆ, 1600ಕ್ಕೂ ಹೆಚ್ಚು ಹಲಸು ಮರಗಳು ಇಲ್ಲಿವೆ.

ಹಲಸಿನ ಜಾಮ್, ಪಲ್ಪಿ ಜ್ಯೂಸ್, ಹಲಸಿನ ಹಲ್ವಾ, ಬಿರಿಯಾನಿ, ಕಬಾಬ್ ಸೇರಿದಂತೆ ತರಕಾರಿ ಮಾಂಸವಾಗಿ ಹಲವು ಖಾದ್ಯಗಳನ್ನು ತಯಾರು ಮಾಡುವ ಮೂಲಕ ಹಲಸಿನ ಮಹತ್ವವನ್ನು ಹೆಚ್ಚಿಸಲಾಗಿದೆ. ಹಲಸಿನ ಸಂಸ್ಕರಣ ಘಟಕ ಸ್ಥಾಪನೆ ಮಾಡಿ, ಹಲಸಿನ ವಿವಿಧ ಖಾದ್ಯಗಳನ್ನು, ವಿವಿಧ ಉತ್ಪನ್ನಗಳನ್ನು ಇಲ್ಲೇ ತಯಾರು ಮಾಡಿ ಮಾರುಕಟ್ಟೆಯಲ್ಲಿ ಮಾರಾಟ ಮಾಡಲಾಗುತ್ತಿದೆ.

ಕೃಷಿಕರು ಇದೇ ಮಾದರಿಯಲ್ಲಿ ಪ್ರಮುಖ ಕೃಷಿಯ ಜೊತೆಗೆ ಪರ್ಯಾಯ ಕೃಷಿಯತ್ತಲೂ ಅದರಲ್ಲೂ ಆಹಾರ ಬೆಳೆಯತ್ತಲೂ ಚಿಂತನೆ ನಡೆಸಲು ಈಗ ಸಕಾಲವಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಣ್ಣಿಲ್ಲದೇ ಅವಕಾಡೊ ಬೆಳೆ..! ಜೇನು ಸೇರಿಸಿದ ಕೃಷಿ ಈಗ ಹೊಸ ಟ್ರೆಂಡ್

2026 ರಲ್ಲಿ ಹೈಡ್ರೋಪೋನಿಕ್ ಅವಕಾಡೊ ಕೃಷಿ ಮತ್ತು ಜೇನು ಪರಾಗಸ್ಪರ್ಶದ ಸಂಯೋಜನೆ ಹೊಸ…

8 hours ago

ರೇಷ್ಮೆ ಗೂಡಿಗೆ 800 ರೂ.ವರೆಗೆ ಬೆಲೆ | ಚಾಮರಾಜನಗರದಲ್ಲಿ ರೈತರಿಗೆ ಲಾಭದಾಯಕ ಹಾದಿ

ಚಾಮರಾಜನಗರ ಜಿಲ್ಲೆಯಲ್ಲಿ ರೇಷ್ಮೆ ಗೂಡಿಗೆ ಕೆಜಿಗೆ 750ರಿಂದ 800 ರೂಪಾಯಿವರೆಗೆ ಬೆಲೆ ಸಿಗುತ್ತಿದೆ.…

8 hours ago

ಸ್ಥಳೀಯ ಚುನಾವಣೆಗಳಲ್ಲಿ ಇವಿಎಂಗೆ ಬ್ರೇಕ್ | ಬ್ಯಾಲೆಟ್ ಪೇಪರ್ ಮೂಲಕ ಮತದಾನಕ್ಕೆ ಸಚಿವ ಸಂಪುಟ ಹಸಿರು ನಿಶಾನೆ

ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ಮತದಾನ…

8 hours ago

ಕೇಂದ್ರವು ಕೇರಳದ ರಬ್ಬರ್ ಕ್ಷೇತ್ರವನ್ನು ದುರ್ಬಲಗೊಳಿಸುತ್ತಿದೆ – ಆರೋಪ

ಕೇಂದ್ರ ಸರ್ಕಾರವು ರಾಜ್ಯದ ರಬ್ಬರ್ ಕೃಷಿಯನ್ನು ಈಶಾನ್ಯಕ್ಕೆ ಸ್ಥಳಾಂತರಿಸುವ ಮೂಲಕ ರಬ್ಬರ್ ಕ್ಷೇತ್ರವನ್ನು…

8 hours ago

ಅಡಿಕೆ ಮಾರುಕಟ್ಟೆ ಸಮೀಕರಣ : ಬೆಲೆ ನಿರ್ಧಾರದ ಹಿಂದಿನ ಅರ್ಥಶಾಸ್ತ್ರ ಮತ್ತು ಮನೋವಿಜ್ಞಾನ

ಅಡಿಕೆ ಮಾರುಕಟ್ಟೆ ಎಂದರೆ ಕೇವಲ ಕೃಷಿ ಉತ್ಪನ್ನಗಳ ವಿನಿಮಯ ಕೇಂದ್ರವಲ್ಲ; ಅದೊಂದು ಸಂಕೀರ್ಣವಾದ…

17 hours ago

ಅಡಿಕೆ ಕಳ್ಳಸಾಗಣೆ ಜಾಲಕ್ಕೆ ಮಿಝೋರಂ ಸರ್ಕಾರದ ಬಿಗಿ ಹಿಡಿತ – ಅಡಿಕೆ ಮಾರುಕಟ್ಟೆ ಚೇತರಿಕೆ ಸಾಧ್ಯತೆ

ಮಿಝೋರಂ ಸರ್ಕಾರವು ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದೆ. ಯಾವುದೇ…

18 hours ago