Advertisement
ಸುದ್ದಿಗಳು

ಕೋಲಾರದಲ್ಲಿ ಹಲಸಿನ ತೋಟ | 1600 ಕ್ಕೂ ಹೆಚ್ಚು ಹಲಸಿನ ಗಿಡ | ಪರ್ಯಾಯ ಕೃಷಿಯತ್ತ ಚಿತ್ತ |

Share

ಕರ್ನಾಟಕದ ಆಯಾ ಜಿಲ್ಲೆಯ ಕೃಷಿಕರು ಹವಾಮಾನಕ್ಕೆ ಅನುಗುಣವಾಗಿ ವಿವಿಧ ಬೆಳೆಗಳನ್ನು ಬೆಳೆಯುತ್ತಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗ ಅಡಿಕೆ ಮುಖ್ಯ ಬೆಳೆಯಾದರೆ, ಕೋಲಾರದಲ್ಲಿ ಟೊಮೆಟೋ ಹಾಗೂ ಮಾವು ಕೃಷಿ. ಏಷ್ಯಾದಲ್ಲೆ ಅತಿದೊಡ್ಡ ಟೊಮೆಟೊ ಮಾರುಕಟ್ಟೆ ಹೊಂದಿರುವ ಕೋಲಾರ ಇದೀಗ  ಅತೀ ದೊಡ್ಡ ಹಲಸಿನ ತೋಟವನ್ನೂ ಹೊಂದಿದೆ. ಪರ್ಯಾಯ ಕೃಷಿಯೂ ಈಗ ಗಮನ ಸೆಳೆಯುತ್ತಿದೆ.

1974 ರಲ್ಲಿ ಎಂ.ಹೆಚ್ ಮರೀಗೌಡ ಎಂಬುವರು ಕೋಲಾರ ನಗರದ ಟಮಕ ಬಳಿ ಹಲಸಿನ ಗಿಡಗಳನ್ನು ನೆಟ್ಟಿದ್ದರು. ಅದರಲ್ಲೂ ರಾಜ್ಯದ ವಿವಿಧ ಭಾಗದಿಂದ ತಳಿಗಳನ್ನು ತಂದು ಸುಮಾರು 1600 ಕ್ಕೂ ಹೆಚ್ಚು ಹಲಸಿನ ಗಿಡಗಳನ್ನು ಬೆಳೆಸಿದ್ದಾರೆ. ನಂತರ ಈ ತೋಟದಲ್ಲಿ 2009 ರಲ್ಲಿ ತೋಟಗಾರಿಕಾ ಮಹಾ ವಿಶ್ವವಿದ್ಯಾಲಯವನ್ನು ಸ್ಥಾಪನೆ ಮಾಡಲಾಗಿದೆ. ಸುಮಾರು 40 ಎಕರೆ ಪ್ರದೇಶದಲ್ಲಿ  ಹಲಸಿನ ತೋಟವಿದೆ, 1600ಕ್ಕೂ ಹೆಚ್ಚು ಹಲಸು ಮರಗಳು ಇಲ್ಲಿವೆ.

ಹಲಸಿನ ಜಾಮ್, ಪಲ್ಪಿ ಜ್ಯೂಸ್, ಹಲಸಿನ ಹಲ್ವಾ, ಬಿರಿಯಾನಿ, ಕಬಾಬ್ ಸೇರಿದಂತೆ ತರಕಾರಿ ಮಾಂಸವಾಗಿ ಹಲವು ಖಾದ್ಯಗಳನ್ನು ತಯಾರು ಮಾಡುವ ಮೂಲಕ ಹಲಸಿನ ಮಹತ್ವವನ್ನು ಹೆಚ್ಚಿಸಲಾಗಿದೆ. ಹಲಸಿನ ಸಂಸ್ಕರಣ ಘಟಕ ಸ್ಥಾಪನೆ ಮಾಡಿ, ಹಲಸಿನ ವಿವಿಧ ಖಾದ್ಯಗಳನ್ನು, ವಿವಿಧ ಉತ್ಪನ್ನಗಳನ್ನು ಇಲ್ಲೇ ತಯಾರು ಮಾಡಿ ಮಾರುಕಟ್ಟೆಯಲ್ಲಿ ಮಾರಾಟ ಮಾಡಲಾಗುತ್ತಿದೆ.

ಕೃಷಿಕರು ಇದೇ ಮಾದರಿಯಲ್ಲಿ ಪ್ರಮುಖ ಕೃಷಿಯ ಜೊತೆಗೆ ಪರ್ಯಾಯ ಕೃಷಿಯತ್ತಲೂ ಅದರಲ್ಲೂ ಆಹಾರ ಬೆಳೆಯತ್ತಲೂ ಚಿಂತನೆ ನಡೆಸಲು ಈಗ ಸಕಾಲವಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

35 minutes ago

ಮಲೆನಾಡು ತಪ್ಪಲಲ್ಲಿ ಧಾರಾಕಾರ ಮಳೆ – ಹಲವು ಕಡೆ ಕೆಲವೇ ಗಂಟೆಯಲ್ಲಿ 100 ಮಿಮೀ ದಾಟಿದ ಮಳೆ

ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…

8 hours ago

ಹವಾಮಾನ ವರದಿ |25-08-2026 | ಕರಾವಳಿ, ಮಲೆನಾಡಿನಲ್ಲೂ ಬಿಡುವಿನ ಅವಧಿ ಹೆಚ್ಚಳ -ಕೆಲವೆಡೆ ಉತ್ತಮ ಮಳೆ – ರಾಜ್ಯದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…

8 hours ago

ಕರಾವಳಿಗೆ ವಾಡಿಕೆ ಮಳೆ, ಮಲೆನಾಡು ದಾಟದ ಮುಂಗಾರು ಮೋಡ..!

ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್‌ನಲ್ಲಿ…

9 hours ago

ಬೆಲೆ ಏರಿಕೆಯನ್ನಷ್ಟೇ ನೋಡುವುದಲ್ಲ ; ಮುಂದಿನ ಮಾರುಕಟ್ಟೆಯನ್ನು ನಿರ್ಮಿಸುವ ಕಾಲ

ಸುಮಾರು 35 ವರ್ಷಗಳ ಹಿಂದೆ ಡಾ. ವಿಘ್ನೇಶ್ವರ ವರ್ಮುಡಿಯವರು ಮುಂದಿಟ್ಟಿದ್ದ ಅಡಿಕೆ ಮಾರುಕಟ್ಟೆ…

11 hours ago

ಎಲೆಯ ಫೋಟೋ ತೆಗೆದರೆ AI ಕೀಟ ಯಾವುದೆಂದು ಹೇಳುತ್ತದೆ…! – 73 ಬೆಳೆಗಳ ಮೇಲೆ ಭಾರತದ ಹೊಸ ಕೃಷಿ ಕಣ್ಗಾವಲು

ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…

23 hours ago