Advertisement
ಸುದ್ದಿಗಳು

ಕೋಲಾರದಲ್ಲಿ ಹಲಸಿನ ತೋಟ | 1600 ಕ್ಕೂ ಹೆಚ್ಚು ಹಲಸಿನ ಗಿಡ | ಪರ್ಯಾಯ ಕೃಷಿಯತ್ತ ಚಿತ್ತ |

Share

ಕರ್ನಾಟಕದ ಆಯಾ ಜಿಲ್ಲೆಯ ಕೃಷಿಕರು ಹವಾಮಾನಕ್ಕೆ ಅನುಗುಣವಾಗಿ ವಿವಿಧ ಬೆಳೆಗಳನ್ನು ಬೆಳೆಯುತ್ತಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗ ಅಡಿಕೆ ಮುಖ್ಯ ಬೆಳೆಯಾದರೆ, ಕೋಲಾರದಲ್ಲಿ ಟೊಮೆಟೋ ಹಾಗೂ ಮಾವು ಕೃಷಿ. ಏಷ್ಯಾದಲ್ಲೆ ಅತಿದೊಡ್ಡ ಟೊಮೆಟೊ ಮಾರುಕಟ್ಟೆ ಹೊಂದಿರುವ ಕೋಲಾರ ಇದೀಗ  ಅತೀ ದೊಡ್ಡ ಹಲಸಿನ ತೋಟವನ್ನೂ ಹೊಂದಿದೆ. ಪರ್ಯಾಯ ಕೃಷಿಯೂ ಈಗ ಗಮನ ಸೆಳೆಯುತ್ತಿದೆ.

1974 ರಲ್ಲಿ ಎಂ.ಹೆಚ್ ಮರೀಗೌಡ ಎಂಬುವರು ಕೋಲಾರ ನಗರದ ಟಮಕ ಬಳಿ ಹಲಸಿನ ಗಿಡಗಳನ್ನು ನೆಟ್ಟಿದ್ದರು. ಅದರಲ್ಲೂ ರಾಜ್ಯದ ವಿವಿಧ ಭಾಗದಿಂದ ತಳಿಗಳನ್ನು ತಂದು ಸುಮಾರು 1600 ಕ್ಕೂ ಹೆಚ್ಚು ಹಲಸಿನ ಗಿಡಗಳನ್ನು ಬೆಳೆಸಿದ್ದಾರೆ. ನಂತರ ಈ ತೋಟದಲ್ಲಿ 2009 ರಲ್ಲಿ ತೋಟಗಾರಿಕಾ ಮಹಾ ವಿಶ್ವವಿದ್ಯಾಲಯವನ್ನು ಸ್ಥಾಪನೆ ಮಾಡಲಾಗಿದೆ. ಸುಮಾರು 40 ಎಕರೆ ಪ್ರದೇಶದಲ್ಲಿ  ಹಲಸಿನ ತೋಟವಿದೆ, 1600ಕ್ಕೂ ಹೆಚ್ಚು ಹಲಸು ಮರಗಳು ಇಲ್ಲಿವೆ.

ಹಲಸಿನ ಜಾಮ್, ಪಲ್ಪಿ ಜ್ಯೂಸ್, ಹಲಸಿನ ಹಲ್ವಾ, ಬಿರಿಯಾನಿ, ಕಬಾಬ್ ಸೇರಿದಂತೆ ತರಕಾರಿ ಮಾಂಸವಾಗಿ ಹಲವು ಖಾದ್ಯಗಳನ್ನು ತಯಾರು ಮಾಡುವ ಮೂಲಕ ಹಲಸಿನ ಮಹತ್ವವನ್ನು ಹೆಚ್ಚಿಸಲಾಗಿದೆ. ಹಲಸಿನ ಸಂಸ್ಕರಣ ಘಟಕ ಸ್ಥಾಪನೆ ಮಾಡಿ, ಹಲಸಿನ ವಿವಿಧ ಖಾದ್ಯಗಳನ್ನು, ವಿವಿಧ ಉತ್ಪನ್ನಗಳನ್ನು ಇಲ್ಲೇ ತಯಾರು ಮಾಡಿ ಮಾರುಕಟ್ಟೆಯಲ್ಲಿ ಮಾರಾಟ ಮಾಡಲಾಗುತ್ತಿದೆ.

ಕೃಷಿಕರು ಇದೇ ಮಾದರಿಯಲ್ಲಿ ಪ್ರಮುಖ ಕೃಷಿಯ ಜೊತೆಗೆ ಪರ್ಯಾಯ ಕೃಷಿಯತ್ತಲೂ ಅದರಲ್ಲೂ ಆಹಾರ ಬೆಳೆಯತ್ತಲೂ ಚಿಂತನೆ ನಡೆಸಲು ಈಗ ಸಕಾಲವಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂದಿನ 5 ದಿನ ತಾಪಮಾನ ಏರಿಕೆ ಎಚ್ಚರಿಕೆ ! ಉತ್ತರ-ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ತೀವ್ರ

ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…

8 hours ago

ಹವಾಮಾನ ವರದಿ | 14-04-2026 | ಕರ್ನಾಟಕದಲ್ಲಿ ಉರಿಬಿಸಿಲು…! ಆದರೆ ಮಳೆಯೂ ಬರುತ್ತಿದೆ ! ಯಾವಾಗ ಗೊತ್ತಾ? – ಸದ್ಯ ರೈತರಿಗೆ ಸಲಹೆ ಏನು..?

ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…

12 hours ago

ಇರಾನ್-ಇಸ್ರೇಲ್ ಯುದ್ಧದ ಪರಿಣಾಮ – ಮಾವಿನ ರಫ್ತು ಕುಸಿತ, ರೈತರಿಗೆ ಹೊಡೆತ | ಅಲ್ಫೋನ್ಸೊ ಬೆಲೆ ಅರ್ಧಕ್ಕೆ ಇಳಿಕೆ

ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…

19 hours ago

ಬೇಸಿಗೆಯ ತಾಪಕ್ಕೆ ತುತ್ತಾದ ವನ್ಯಜೀವಿಗಳಿಗೆ ನೀರಿನ ಜೀವಧಾರೆ | ಕೋಲಾರ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿ ಕಾರ್ಯ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ವ್ಯವಸ್ಥೆ ಮಾಡಿ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿಯಾಗಿದೆ. ಟ್ಯಾಂಕರ್,…

19 hours ago

ಉತ್ತರ ಕರ್ನಾಟಕದಲ್ಲಿ ಬಿಸಿಗಾಳಿ ಅಲರ್ಟ್ | ಎಪ್ರಿಲ್ 15 -17 ರವರೆಗೆ ಆರೆಂಜ್ ಅಲರ್ಟ್ ಘೋಷಣೆ

ಉತ್ತರ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಏಪ್ರಿಲ್ 15ರಿಂದ 17ರವರೆಗೆ ಬಿಸಿಗಾಳಿ ತೀವ್ರವಾಗುವ ಸಾಧ್ಯತೆ…

1 day ago

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ವಯಂಚಾಲಿತ ಹವಾಮಾನ ಕೇಂದ್ರ ಆರಂಭ

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ವಯಂಚಾಲಿತ ಹವಾಮಾನ ಕೇಂದ್ರ ಆರಂಭವಾಗಿದೆ. ಇದು ರೈತರಿಗೆ ನಿಖರ…

1 day ago