Advertisement
ಸುದ್ದಿಗಳು

ಕೋಲಾರದಲ್ಲಿ ಹಲಸಿನ ತೋಟ | 1600 ಕ್ಕೂ ಹೆಚ್ಚು ಹಲಸಿನ ಗಿಡ | ಪರ್ಯಾಯ ಕೃಷಿಯತ್ತ ಚಿತ್ತ |

Share

ಕರ್ನಾಟಕದ ಆಯಾ ಜಿಲ್ಲೆಯ ಕೃಷಿಕರು ಹವಾಮಾನಕ್ಕೆ ಅನುಗುಣವಾಗಿ ವಿವಿಧ ಬೆಳೆಗಳನ್ನು ಬೆಳೆಯುತ್ತಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗ ಅಡಿಕೆ ಮುಖ್ಯ ಬೆಳೆಯಾದರೆ, ಕೋಲಾರದಲ್ಲಿ ಟೊಮೆಟೋ ಹಾಗೂ ಮಾವು ಕೃಷಿ. ಏಷ್ಯಾದಲ್ಲೆ ಅತಿದೊಡ್ಡ ಟೊಮೆಟೊ ಮಾರುಕಟ್ಟೆ ಹೊಂದಿರುವ ಕೋಲಾರ ಇದೀಗ  ಅತೀ ದೊಡ್ಡ ಹಲಸಿನ ತೋಟವನ್ನೂ ಹೊಂದಿದೆ. ಪರ್ಯಾಯ ಕೃಷಿಯೂ ಈಗ ಗಮನ ಸೆಳೆಯುತ್ತಿದೆ.

1974 ರಲ್ಲಿ ಎಂ.ಹೆಚ್ ಮರೀಗೌಡ ಎಂಬುವರು ಕೋಲಾರ ನಗರದ ಟಮಕ ಬಳಿ ಹಲಸಿನ ಗಿಡಗಳನ್ನು ನೆಟ್ಟಿದ್ದರು. ಅದರಲ್ಲೂ ರಾಜ್ಯದ ವಿವಿಧ ಭಾಗದಿಂದ ತಳಿಗಳನ್ನು ತಂದು ಸುಮಾರು 1600 ಕ್ಕೂ ಹೆಚ್ಚು ಹಲಸಿನ ಗಿಡಗಳನ್ನು ಬೆಳೆಸಿದ್ದಾರೆ. ನಂತರ ಈ ತೋಟದಲ್ಲಿ 2009 ರಲ್ಲಿ ತೋಟಗಾರಿಕಾ ಮಹಾ ವಿಶ್ವವಿದ್ಯಾಲಯವನ್ನು ಸ್ಥಾಪನೆ ಮಾಡಲಾಗಿದೆ. ಸುಮಾರು 40 ಎಕರೆ ಪ್ರದೇಶದಲ್ಲಿ  ಹಲಸಿನ ತೋಟವಿದೆ, 1600ಕ್ಕೂ ಹೆಚ್ಚು ಹಲಸು ಮರಗಳು ಇಲ್ಲಿವೆ.

ಹಲಸಿನ ಜಾಮ್, ಪಲ್ಪಿ ಜ್ಯೂಸ್, ಹಲಸಿನ ಹಲ್ವಾ, ಬಿರಿಯಾನಿ, ಕಬಾಬ್ ಸೇರಿದಂತೆ ತರಕಾರಿ ಮಾಂಸವಾಗಿ ಹಲವು ಖಾದ್ಯಗಳನ್ನು ತಯಾರು ಮಾಡುವ ಮೂಲಕ ಹಲಸಿನ ಮಹತ್ವವನ್ನು ಹೆಚ್ಚಿಸಲಾಗಿದೆ. ಹಲಸಿನ ಸಂಸ್ಕರಣ ಘಟಕ ಸ್ಥಾಪನೆ ಮಾಡಿ, ಹಲಸಿನ ವಿವಿಧ ಖಾದ್ಯಗಳನ್ನು, ವಿವಿಧ ಉತ್ಪನ್ನಗಳನ್ನು ಇಲ್ಲೇ ತಯಾರು ಮಾಡಿ ಮಾರುಕಟ್ಟೆಯಲ್ಲಿ ಮಾರಾಟ ಮಾಡಲಾಗುತ್ತಿದೆ.

ಕೃಷಿಕರು ಇದೇ ಮಾದರಿಯಲ್ಲಿ ಪ್ರಮುಖ ಕೃಷಿಯ ಜೊತೆಗೆ ಪರ್ಯಾಯ ಕೃಷಿಯತ್ತಲೂ ಅದರಲ್ಲೂ ಆಹಾರ ಬೆಳೆಯತ್ತಲೂ ಚಿಂತನೆ ನಡೆಸಲು ಈಗ ಸಕಾಲವಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

23 hours ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

24 hours ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

24 hours ago

ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…

24 hours ago

ಬ್ರಿಟನ್‌ನಲ್ಲಿ ಉರಿ ಬಿಸಿಲು – ಎರಡು ತಿಂಗಳಲ್ಲಿ 2,700ಕ್ಕೂ ಹೆಚ್ಚು ಸಾವು..! ಹವಾಮಾನ ಬದಲಾವಣೆಯಿಂದ ಶೇ.40ಕ್ಕೂ ಹೆಚ್ಚು ಜೀವಹಾನಿ ಎಂದ ಅಧ್ಯಯನ

ಬ್ರಿಟನ್‌ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…

24 hours ago

ನೈಸರ್ಗಿಕ ಕೃಷಿಗೆ ರಾಜಸ್ಥಾನದ ದೊಡ್ಡ ಹೆಜ್ಜೆ : 32 ಸಂಸ್ಥೆಗಳೊಂದಿಗೆ ಒಪ್ಪಂದ, ರೈತರಿಗೆ ತಂತ್ರಜ್ಞಾನ – ಮಾರುಕಟ್ಟೆ ಬೆಂಬಲ

ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…

1 day ago