ಭಾರೀ ಮಳೆಗೆ ಅಸ್ಸಾಂ ತತ್ತರಿಸಿದೆ. ಇದುವರೆಗೆ 7 ಮಂದಿ ಪ್ರಾಣ ಕಳೆದುಕೊಂಡಿದ್ದು, 24 ಜಿಲ್ಲೆಗಳಲ್ಲಿ 2,00,000 ಕ್ಕೂ ಹೆಚ್ಚು ಜನರು ಮಳೆಯಿಂದ ಸಂಕಷ್ಟಕ್ಕೆ ಒಳಗಾಗಿದ್ದಾರೆ.ಪ್ರವಾಹ ಪರಿಸ್ಥಿತಿ ಭೀಕರವಾಗಿದ್ದು ಭೂಕುಸಿತದ ಕಾರಣದಿಂದ ರಸ್ತೆ, ರೈಲು ಸಂಪರ್ಕ ಹಲವು ಕಡೆ ಸ್ಥಗಿತಗೊಳಿಸುತ್ತದೆ.
ಭಾರೀ ಮಳೆಯ ಹೊಡೆತಕ್ಕೆ ಅಸ್ಸಾಂ ತತ್ತರಿಸಿದೆ. ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿವೆ. ಕಳೆದ 24 ಗಂಟೆಯಲ್ಲಿ ಕ್ಯಾಚಾರ್ ಜಿಲ್ಲೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ದಿಮಾ ಹಸಾವೋ ಜಿಲ್ಲೆಯಲ್ಲಿ 4, ಲಖಿಂಪುರ ಜಿಲ್ಲೆಯಲ್ಲಿಒಬ್ಬರು ಸೇರಿ ಒಟ್ಟು 7 ಮಂದಿ ಸಾವನ್ನಪ್ಪಿದ್ದಾರೆ.ಪ್ರವಾಹ, ಭೂಕುಸಿತದಿಂದ ಕ್ಯಾಚಾರ್ ಜಿಲ್ಲೆಯಲ್ಲಿ 6 ಜನ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ತ್ರಿಪುರಾ, ಮಿಜೋರಾಂ, ಮಣಿಪುರ ಮತ್ತು ಅಸ್ಸಾಂನ ದಕ್ಷಿಣ ಭಾಗವನ್ನು ದೇಶದ ಇತರ ಭಾಗಗಳ ಜೊತೆ ಸಂಪರ್ಕಿಸಲು ಅಸ್ಸಾಂನ ಲುಮ್ಡಿಂಗ್-ಬದರ್ಪುರ್ ಮಾರ್ಗ ಪ್ರಮುಖವಾಗಿದ್ದು, ನಾಲ್ಕು ದಿನಗಳಿಂದ ರೈಲು ಸಂಪರ್ಕ ಕಡಿತಗೊಂಡಿದೆ.
ದಿಮಾ ಹಸಾವೊ ಜಿಲ್ಲೆಯ ಹಾಫ್ಲಾಂಗ್ ನಿಲ್ದಾಣ ಮಳೆ ಮತ್ತು ಭೂಕುಸಿತದ ಪರಿಣಾಣ ಸಂಪೂರ್ಣವಾಗಿ ಜಲಾವೃತಗೊಂಡಿದೆ. ರೈಲಿನಲ್ಲಿದ್ದ ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತ ಜಾಗಗಳಿಗೆ ಸ್ಥಳಾಂತರಿಸಲಾಗಿದೆ.
ಮುಂದಿನ 24 ಗಂಟೆಗಳಲ್ಲಿ ಮೇಘಾಲಯದ ಮೇಲೆ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಉಪ-ಹಿಮಾಲಯ ಪಶ್ಚಿಮ ಬಂಗಾಳ, ಸಿಕ್ಕಿಂನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…