Advertisement
MIRROR FOCUS

ಅಡಿಕೆ ಕಳ್ಳಸಾಗಾಣಿಕೆ ತಡೆಗೆ ಅಸ್ಸಾಂ ಸಂಸದ ಒತ್ತಾಯ | ಪ್ರಧಾನಿಗಳ ಮಧ್ಯಪ್ರವೇಶಕ್ಕೆ ಮನವಿ

Share

ಮ್ಯಾನ್ಮಾರ್‌ನಿಂದ ಈಶಾನ್ಯ ರಾಜ್ಯದ ವಿವಿಧ ಕಡೆಗಳಿಗೆ ಬರ್ಮಾ ಅಡಿಕೆ  ಕಳ್ಳಸಾಗಣೆ ಮಾಡುವ ಸಮಸ್ಯೆಯನ್ನು ಪರಿಹರಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಪ್ರವೇಶ ಮಾಡಬೇಕು ಎಂದು ಅಸ್ಸಾಂನ ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮನವಿ ಮಾಡಿದ್ದಾರೆ.

ಮಂಗಳವಾರ ಪ್ರಧಾನಮಂತ್ರಿ ಅವರಿಗೆ ಬರೆದ ಪತ್ರದಲ್ಲಿ, ಮಿಜೋರಾಂ ಮತ್ತು ಮಣಿಪುರದಲ್ಲಿ ಭಾರತ-ಮ್ಯಾನ್ಮಾರ್ ಗಡಿಯ  ಮೂಲಕ ಅತಿಯಾದ ಕಳ್ಳಸಾಗಾಣಿಕೆ ನಡೆಯುತ್ತಿದೆ. ನಿರಂತರ ಕಳ್ಳಸಾಗಾಣಿಕೆ ತಡೆಯಾಗದ ಬಗ್ಗೆ ಗೌರವ್ ಗೊಗೊಯ್ ಕಳವಳ ವ್ಯಕ್ತಪಡಿಸಿದ್ದಾರೆ. ಕಳ್ಳಸಾಗಾಣಿಕೆ ಮೂಲಕ ಬಂದ ಅಡಿಕೆಯು ನಾಗಾಲ್ಯಾಂಡ್‌ ಮೊದಲಾದ ದಾರಿಗಳ ಮೂಲಕ ಕಾನ್ಪುರ, ಲಕ್ನೋದಲ್ಲಿನ ಗುಟ್ಕಾ ಉದ್ಯಮಗಳಿಗೆ ವಿತರಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ಅಸ್ಸಾಂನ ಮೆರಪಾನಿ ಗಡಿಯಲ್ಲಿ ಅಡಿಕೆ ತುಂಬಿದ ಲಾರಿಗಳು ಪ್ರವೇಶ ಮಾಡುತ್ತಿದೆ. ಅಡಿಕೆ ಮಾತ್ರವಲ್ಲದೆ  ಹೆರಾಯಿನ್, ಅಫೀಮು ಸೇರಿದಂತೆ ಇತರ ಮಾದಕ ವಸ್ತುಗಳನ್ನೂ ಅಕ್ರಮವಾಗಿ ಮ್ಯಾನ್ಮಾರ್‌ನಿಂದ ಕಳ್ಳಸಾಗಣೆ ಮಾಡಲಾಗುತ್ತಿದೆ ಎಂದು ಸಂಸದರು ತಿಳಿಸಿದ್ದಾರೆ.

ಈ ಸಮಸ್ಯೆಯನ್ನು ಪರಿಹರಿಸಲು ತಕ್ಷಣದ ಕ್ರಮಗಳನ್ನು ತೆಗೆದುಕೊಳ್ಳಬೇಕಾದ ಅನಿವಾರ್ಯತೆ ಇದೆ ಎಂದು ಸಂಸದ ಗೌರವ್ ಗೊಗೊಯ್  ಹೇಳಿದರು. ಗಡಿ ಭದ್ರತೆಯನ್ನು ಬಲಪಡಿಸುವುದು, ಕಣ್ಗಾವಲು ಕ್ರಮಗಳನ್ನು ಹೆಚ್ಚಿಸುವುದು ಮತ್ತು ಕಳ್ಳಸಾಗಾಣಿಕೆ ಜಾಲಗಳಿಗೆ ಕಡಿವಾಣ ಹಾಕುವ ಅಗತ್ಯ ಇದೆ, ಇದಕ್ಕಾಗಿ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಂಸದರು ಪ್ರಧಾನಿಗಳನ್ನು ಒತ್ತಾಯಿಸಿದರು.

Congress Lok Sabha MP from Assam Gaurav Gogoi, has called for Prime Minister Narendra Modi’s intervention to address the issue of smuggling Burma arecanut and other Drugs.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…

3 hours ago

ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು

ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…

3 hours ago

ಹೋಳಿ ಹಬ್ಬ: ಪ್ರಾಣಿ-ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಿ – ಮಂಡಳಿ ಮನವಿ

ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…

4 hours ago

ಅಡಿಕೆ ಮಾರುಕಟ್ಟೆ ಸುದ್ದಿ | ಅಡಿಕೆ ಧಾರಣೆ ಇಳಿಕೆಯಿಂದ ಸ್ಥಿರತೆಯತ್ತ ಮುಂದುವರಿಕೆ

ದಕ್ಷಿಣ ಕನ್ನಡ ಮತ್ತು ಮಲೆನಾಡು ಭಾಗದ ಕೃಷಿ ಮಾರುಕಟ್ಟೆಯಲ್ಲಿ ಸಹಜ ಸ್ಥಿತಿಯಲ್ಲಿ ಕಂಡುಬಂದಿದೆ.…

11 hours ago

2030ರೊಳಗೆ 5 ಟ್ರಿಲಿಯನ್ ಆರ್ಥಿಕತೆ ಮೀರಿದ ರಾಷ್ಟ್ರವಾಗಲಿದೆ ಭಾರತ

2030ರೊಳಗೆ ಭಾರತ 5 ಟ್ರಿಲಿಯನ್ ಆರ್ಥಿಕತೆಯನ್ನು ಮೀರುತ್ತದೆ ಎಂದು ಪ್ರಲ್ಹಾದ ಜೋಶಿ ವಿಶ್ವಾಸ…

15 hours ago

ರೈತರ ಹಿತಕ್ಕಾಗಿ ಎರಡು ಮಹತ್ವದ ಸುಧಾರಣೆಗಳು | ಹೊಸ ಬೀಜ ಕಾಯ್ದೆ, ಪರಿಷ್ಕೃತ ಕೀಟನಾಶಕ ಕಾಯ್ದೆ ಜಾರಿಗೆ ಕೇಂದ್ರ ಸಿದ್ಧತೆ

ರೈತರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ಹೊಸ ಬೀಜ ಕಾಯ್ದೆ ಮತ್ತು ಪರಿಷ್ಕೃತ ಕೀಟನಾಶಕ…

16 hours ago