MIRROR FOCUS

ಅಡಿಕೆ ಕಳ್ಳಸಾಗಾಣಿಕೆ ತಡೆಗೆ ಅಸ್ಸಾಂ ಸಂಸದ ಒತ್ತಾಯ | ಪ್ರಧಾನಿಗಳ ಮಧ್ಯಪ್ರವೇಶಕ್ಕೆ ಮನವಿ

Share

ಮ್ಯಾನ್ಮಾರ್‌ನಿಂದ ಈಶಾನ್ಯ ರಾಜ್ಯದ ವಿವಿಧ ಕಡೆಗಳಿಗೆ ಬರ್ಮಾ ಅಡಿಕೆ  ಕಳ್ಳಸಾಗಣೆ ಮಾಡುವ ಸಮಸ್ಯೆಯನ್ನು ಪರಿಹರಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಪ್ರವೇಶ ಮಾಡಬೇಕು ಎಂದು ಅಸ್ಸಾಂನ ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮನವಿ ಮಾಡಿದ್ದಾರೆ.

ಮಂಗಳವಾರ ಪ್ರಧಾನಮಂತ್ರಿ ಅವರಿಗೆ ಬರೆದ ಪತ್ರದಲ್ಲಿ, ಮಿಜೋರಾಂ ಮತ್ತು ಮಣಿಪುರದಲ್ಲಿ ಭಾರತ-ಮ್ಯಾನ್ಮಾರ್ ಗಡಿಯ  ಮೂಲಕ ಅತಿಯಾದ ಕಳ್ಳಸಾಗಾಣಿಕೆ ನಡೆಯುತ್ತಿದೆ. ನಿರಂತರ ಕಳ್ಳಸಾಗಾಣಿಕೆ ತಡೆಯಾಗದ ಬಗ್ಗೆ ಗೌರವ್ ಗೊಗೊಯ್ ಕಳವಳ ವ್ಯಕ್ತಪಡಿಸಿದ್ದಾರೆ. ಕಳ್ಳಸಾಗಾಣಿಕೆ ಮೂಲಕ ಬಂದ ಅಡಿಕೆಯು ನಾಗಾಲ್ಯಾಂಡ್‌ ಮೊದಲಾದ ದಾರಿಗಳ ಮೂಲಕ ಕಾನ್ಪುರ, ಲಕ್ನೋದಲ್ಲಿನ ಗುಟ್ಕಾ ಉದ್ಯಮಗಳಿಗೆ ವಿತರಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ಅಸ್ಸಾಂನ ಮೆರಪಾನಿ ಗಡಿಯಲ್ಲಿ ಅಡಿಕೆ ತುಂಬಿದ ಲಾರಿಗಳು ಪ್ರವೇಶ ಮಾಡುತ್ತಿದೆ. ಅಡಿಕೆ ಮಾತ್ರವಲ್ಲದೆ  ಹೆರಾಯಿನ್, ಅಫೀಮು ಸೇರಿದಂತೆ ಇತರ ಮಾದಕ ವಸ್ತುಗಳನ್ನೂ ಅಕ್ರಮವಾಗಿ ಮ್ಯಾನ್ಮಾರ್‌ನಿಂದ ಕಳ್ಳಸಾಗಣೆ ಮಾಡಲಾಗುತ್ತಿದೆ ಎಂದು ಸಂಸದರು ತಿಳಿಸಿದ್ದಾರೆ.

ಈ ಸಮಸ್ಯೆಯನ್ನು ಪರಿಹರಿಸಲು ತಕ್ಷಣದ ಕ್ರಮಗಳನ್ನು ತೆಗೆದುಕೊಳ್ಳಬೇಕಾದ ಅನಿವಾರ್ಯತೆ ಇದೆ ಎಂದು ಸಂಸದ ಗೌರವ್ ಗೊಗೊಯ್  ಹೇಳಿದರು. ಗಡಿ ಭದ್ರತೆಯನ್ನು ಬಲಪಡಿಸುವುದು, ಕಣ್ಗಾವಲು ಕ್ರಮಗಳನ್ನು ಹೆಚ್ಚಿಸುವುದು ಮತ್ತು ಕಳ್ಳಸಾಗಾಣಿಕೆ ಜಾಲಗಳಿಗೆ ಕಡಿವಾಣ ಹಾಕುವ ಅಗತ್ಯ ಇದೆ, ಇದಕ್ಕಾಗಿ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಂಸದರು ಪ್ರಧಾನಿಗಳನ್ನು ಒತ್ತಾಯಿಸಿದರು.

Congress Lok Sabha MP from Assam Gaurav Gogoi, has called for Prime Minister Narendra Modi’s intervention to address the issue of smuggling Burma arecanut and other Drugs.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೊಡಗು ಜಿಲ್ಲೆಯ ಕೆಲವೆಡೆ ಲಘು ಭೂಕಂಪನ | ಆತಂಕಪಡುವ ಅಗತ್ಯವಿಲ್ಲ | ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ ಸ್ಪಷ್ಟನೆ

ಕೊಡಗು ಜಿಲ್ಲೆಯ ಕೆಲವೆಡೆ ಲಘು ಭೂಕಂಪನವಾಗಿದ್ದು ರಿಕ್ಟರ್ ಮಾಪಕದಲ್ಲಿ ಇದರ ತೀವ್ರತೆ 1.6…

2 hours ago

ದಕ್ಷಿಣ ಕನ್ನಡ ಜಿಲ್ಲೆಯ ವಿವಿದೆಡೆ ಗುಡುಗು ಸಹಿತ ಗಾಳಿ-ಮಳೆ | ಎರಡನೇ ಬಾರಿ ಸುರಿದ ಧಾರಾಕಾರ ಮಳೆ |

ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ತಾಲೂಕುಗಳ ಹಲವು ಕಡೆ ಸಂಜೆ ಉತ್ತಮ ಮಳೆಯಾಗಿದೆ.…

3 hours ago

ಸರ್ಕಾರಿ ವೈದ್ಯರು ಆಸ್ಪತ್ರೆಗಳಲ್ಲಿ ಬೆಳಗ್ಗೆ 9 ಗಂಟೆಯಿಂದ 4 ಗಂಟೆಯವರೆಗೆ ಇರಬೇಕು- ಸಚಿವ ಶರಣಪ್ರಕಾಶ್ ಪಾಟೀಲ್

ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ನು ಮುಂದೆ ಕರ್ತವ್ಯ ನಿರ್ವಹಿಸುವ ವೈದ್ಯರು ಬೆಳಗ್ಗೆ 9 ಗಂಟೆಯಿಂದ…

17 hours ago

ಕೃಷಿ ಉತ್ಪನ್ನಗಳ ದೇಸಿ ತಳಿಗಳು ಪೋಷಕಾಂಶಗಳಲ್ಲಿ ಸಮೃದ್ಧ

ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಲಾದ ಕೃಷಿ ಉತ್ಪನ್ನಗಳ ದೇಸಿ ತಳಿಗಳು ಪೋಷಕಾಂಶಗಳಲ್ಲಿ ಸಮೃದ್ಧವಾಗಿವೆ ಎಂದು ಗದಗ…

17 hours ago

ಕೆಂಪು ಮೆಣಸಿನಕಾಯಿ ಬೆಳೆಗಾರರಿಗೆ ಸಂಕಷ್ಟ | ಬೆಂಬಲ ಬೆಲೆ ಯೋಜನೆ ರಾಜ್ಯಕ್ಕೂ ವಿಸ್ತರಿಸುವಂತೆ ಮುಖ್ಯಮಂತ್ರಿ ಪತ್ರ | ಕೇಂದ್ರದ ಗಮನ ಸೆಳೆದ ಸಚಿವರು |

ಕೆಂಪು ಮೆಣಸಿನಕಾಯಿಗೆ ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆ-ಎಂಐಎಸ್ ಅಡಿಯಲ್ಲಿ ಬೆಲೆ ಕೊರತೆ ಪಾವತಿ-ಪಿಡಿಪಿ ಯೋಜನೆಯನ್ನು…

17 hours ago

ಅಕ್ರಮ ಮರಳು ಗಣಿಗಾರಿಕೆ | 5 ವರ್ಷಗಳಲ್ಲಿ 47 ಕೋಟಿ ರೂಪಾಯಿ ದಂಡ ಸಂಗ್ರಹ

ಅನಧಿಕೃತ ಮರಳು ಸಾಗಾಟ ತಡೆಯಲು ಜಿಲ್ಲಾ ಮಟ್ಟದಲ್ಲಿ ರಚಿಸಲಾಗಿರುವ ಕಾರ್ಯಪಡೆ ಮರಳು ಸಮಿತಿಗೆ…

18 hours ago