MIRROR FOCUS

ಅಡಿಕೆ ಕಳ್ಳಸಾಗಾಣಿಕೆ ತಡೆಗೆ ಅಸ್ಸಾಂ ಸಂಸದ ಒತ್ತಾಯ | ಪ್ರಧಾನಿಗಳ ಮಧ್ಯಪ್ರವೇಶಕ್ಕೆ ಮನವಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮ್ಯಾನ್ಮಾರ್‌ನಿಂದ ಈಶಾನ್ಯ ರಾಜ್ಯದ ವಿವಿಧ ಕಡೆಗಳಿಗೆ ಬರ್ಮಾ ಅಡಿಕೆ  ಕಳ್ಳಸಾಗಣೆ ಮಾಡುವ ಸಮಸ್ಯೆಯನ್ನು ಪರಿಹರಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಪ್ರವೇಶ ಮಾಡಬೇಕು ಎಂದು ಅಸ್ಸಾಂನ ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮನವಿ ಮಾಡಿದ್ದಾರೆ.

ಮಂಗಳವಾರ ಪ್ರಧಾನಮಂತ್ರಿ ಅವರಿಗೆ ಬರೆದ ಪತ್ರದಲ್ಲಿ, ಮಿಜೋರಾಂ ಮತ್ತು ಮಣಿಪುರದಲ್ಲಿ ಭಾರತ-ಮ್ಯಾನ್ಮಾರ್ ಗಡಿಯ  ಮೂಲಕ ಅತಿಯಾದ ಕಳ್ಳಸಾಗಾಣಿಕೆ ನಡೆಯುತ್ತಿದೆ. ನಿರಂತರ ಕಳ್ಳಸಾಗಾಣಿಕೆ ತಡೆಯಾಗದ ಬಗ್ಗೆ ಗೌರವ್ ಗೊಗೊಯ್ ಕಳವಳ ವ್ಯಕ್ತಪಡಿಸಿದ್ದಾರೆ. ಕಳ್ಳಸಾಗಾಣಿಕೆ ಮೂಲಕ ಬಂದ ಅಡಿಕೆಯು ನಾಗಾಲ್ಯಾಂಡ್‌ ಮೊದಲಾದ ದಾರಿಗಳ ಮೂಲಕ ಕಾನ್ಪುರ, ಲಕ್ನೋದಲ್ಲಿನ ಗುಟ್ಕಾ ಉದ್ಯಮಗಳಿಗೆ ವಿತರಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ಅಸ್ಸಾಂನ ಮೆರಪಾನಿ ಗಡಿಯಲ್ಲಿ ಅಡಿಕೆ ತುಂಬಿದ ಲಾರಿಗಳು ಪ್ರವೇಶ ಮಾಡುತ್ತಿದೆ. ಅಡಿಕೆ ಮಾತ್ರವಲ್ಲದೆ  ಹೆರಾಯಿನ್, ಅಫೀಮು ಸೇರಿದಂತೆ ಇತರ ಮಾದಕ ವಸ್ತುಗಳನ್ನೂ ಅಕ್ರಮವಾಗಿ ಮ್ಯಾನ್ಮಾರ್‌ನಿಂದ ಕಳ್ಳಸಾಗಣೆ ಮಾಡಲಾಗುತ್ತಿದೆ ಎಂದು ಸಂಸದರು ತಿಳಿಸಿದ್ದಾರೆ.

ಈ ಸಮಸ್ಯೆಯನ್ನು ಪರಿಹರಿಸಲು ತಕ್ಷಣದ ಕ್ರಮಗಳನ್ನು ತೆಗೆದುಕೊಳ್ಳಬೇಕಾದ ಅನಿವಾರ್ಯತೆ ಇದೆ ಎಂದು ಸಂಸದ ಗೌರವ್ ಗೊಗೊಯ್  ಹೇಳಿದರು. ಗಡಿ ಭದ್ರತೆಯನ್ನು ಬಲಪಡಿಸುವುದು, ಕಣ್ಗಾವಲು ಕ್ರಮಗಳನ್ನು ಹೆಚ್ಚಿಸುವುದು ಮತ್ತು ಕಳ್ಳಸಾಗಾಣಿಕೆ ಜಾಲಗಳಿಗೆ ಕಡಿವಾಣ ಹಾಕುವ ಅಗತ್ಯ ಇದೆ, ಇದಕ್ಕಾಗಿ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಂಸದರು ಪ್ರಧಾನಿಗಳನ್ನು ಒತ್ತಾಯಿಸಿದರು.

Congress Lok Sabha MP from Assam Gaurav Gogoi, has called for Prime Minister Narendra Modi’s intervention to address the issue of smuggling Burma arecanut and other Drugs.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಶರಾವತಿ ಯೋಜನೆ | ಜೀವವೈವಿಧ್ಯಕ್ಕೆ ಆಪತ್ತು- ಮನುಕುಲಕ್ಕೆ ವಿಪತ್ತು

ಶರಾವತಿ ಯೋಜನೆಯ ಬಗ್ಗೆ ರಾಮಚಂದ್ರಾಪುರ ಮಠದ ಶ್ರೀರಾಘವೇಶ್ವರಭಾರತೀಸ್ವಾಮೀಜಿಯವರಯ ಬರೆದ ಬರಹ...

1 hour ago

ಮೂಲ ಮರೆತವರು ಅಸ್ತಿತ್ವ ಕಳೆದಕೊಳ್ಳುತ್ತಾರೆ : ರಾಘವೇಶ್ವರ ಶ್ರೀ

ಇಂದು ಮನುಷ್ಯನ ಮನಸ್ಥಿತಿ ಹೇಗಿದೆಯೆಂದರೆ ಪುಣ್ಯದ ಫಲ ಬೇಕು, ಆದರೆ ಪುಣ್ಯದ ಕಾರ್ಯ…

2 hours ago

ಕಲಬುರ್ಗಿಯಲ್ಲಿ ಧಾರಾಕಾರ ಮಳೆ | ವಿವಿದೆಡೆ ಜನಜೀವನ ಅಸ್ತವ್ಯಸ್ಥ | ಮತ್ತೆ ಮಳೆಯಬ್ಬರ

ಕಲಬುರ್ಗಿಯಲ್ಲಿ  ನಿರಂತರವಾಗಿ ಧಾರಾಕಾರ ಮಳೆ ಸುರಿಯುತ್ತಿದೆ. ಮಳೆ ಹಾಗೂ ಪ್ರವಾಹ ಪೀಡಿತ ಗ್ರಾಮಗಳಲ್ಲಿ…

5 hours ago

ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳು | ಸೀಮಂತ್ ಕುಮಾರ್ ಸಿಂಗ್ ನೇತೃತ್ವದಲ್ಲಿ ನಗರ ಪರ್ಯಟನೆ

ಬೆಂಗಳೂರು ನಗರದಲ್ಲಿ  ಅಪರಾಧ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ  ಬೆಂಗಳೂರು ಪೊಲೀಸರು  ವಿಶೇಷ ಕಾರ್ಯಾಚರಣೆ …

5 hours ago

ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಉತ್ತರ ಒಳನಾಡಿನಲ್ಲಿ ನೈರುತ್ಯ ಮಾನ್ಸೂನ್ ಸಕ್ರಿಯವಾಗಿದ್ದು, ಕರಾವಳಿ ಕರ್ನಾಟಕ ಮತ್ತು ದಕ್ಷಿಣ…

17 hours ago

ನವರಾತ್ರಿ – ದಸರಾ | ಶಕ್ತಿ ತತ್ತ್ವದ ವಿಜ್ಞಾನ ಮತ್ತು ಸಂಸ್ಕೃತಿ

ಭಾರತೀಯ ಸಂಸ್ಕೃತಿಯಲ್ಲಿ ನವರಾತ್ರಿ ಮತ್ತು ದಸರಾ ಅತ್ಯಂತ ಪವಿತ್ರ ಹಬ್ಬಗಳಾಗಿವೆ. “ನವರಾತ್ರಿ” ಅಂದರೆ…

1 day ago