Advertisement
MIRROR FOCUS

ಅಡಿಕೆ ಕಳ್ಳಸಾಗಾಣಿಕೆ ತಡೆಗೆ ಅಸ್ಸಾಂ ಸಂಸದ ಒತ್ತಾಯ | ಪ್ರಧಾನಿಗಳ ಮಧ್ಯಪ್ರವೇಶಕ್ಕೆ ಮನವಿ

Share

ಮ್ಯಾನ್ಮಾರ್‌ನಿಂದ ಈಶಾನ್ಯ ರಾಜ್ಯದ ವಿವಿಧ ಕಡೆಗಳಿಗೆ ಬರ್ಮಾ ಅಡಿಕೆ  ಕಳ್ಳಸಾಗಣೆ ಮಾಡುವ ಸಮಸ್ಯೆಯನ್ನು ಪರಿಹರಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಪ್ರವೇಶ ಮಾಡಬೇಕು ಎಂದು ಅಸ್ಸಾಂನ ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮನವಿ ಮಾಡಿದ್ದಾರೆ.

ಮಂಗಳವಾರ ಪ್ರಧಾನಮಂತ್ರಿ ಅವರಿಗೆ ಬರೆದ ಪತ್ರದಲ್ಲಿ, ಮಿಜೋರಾಂ ಮತ್ತು ಮಣಿಪುರದಲ್ಲಿ ಭಾರತ-ಮ್ಯಾನ್ಮಾರ್ ಗಡಿಯ  ಮೂಲಕ ಅತಿಯಾದ ಕಳ್ಳಸಾಗಾಣಿಕೆ ನಡೆಯುತ್ತಿದೆ. ನಿರಂತರ ಕಳ್ಳಸಾಗಾಣಿಕೆ ತಡೆಯಾಗದ ಬಗ್ಗೆ ಗೌರವ್ ಗೊಗೊಯ್ ಕಳವಳ ವ್ಯಕ್ತಪಡಿಸಿದ್ದಾರೆ. ಕಳ್ಳಸಾಗಾಣಿಕೆ ಮೂಲಕ ಬಂದ ಅಡಿಕೆಯು ನಾಗಾಲ್ಯಾಂಡ್‌ ಮೊದಲಾದ ದಾರಿಗಳ ಮೂಲಕ ಕಾನ್ಪುರ, ಲಕ್ನೋದಲ್ಲಿನ ಗುಟ್ಕಾ ಉದ್ಯಮಗಳಿಗೆ ವಿತರಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ಅಸ್ಸಾಂನ ಮೆರಪಾನಿ ಗಡಿಯಲ್ಲಿ ಅಡಿಕೆ ತುಂಬಿದ ಲಾರಿಗಳು ಪ್ರವೇಶ ಮಾಡುತ್ತಿದೆ. ಅಡಿಕೆ ಮಾತ್ರವಲ್ಲದೆ  ಹೆರಾಯಿನ್, ಅಫೀಮು ಸೇರಿದಂತೆ ಇತರ ಮಾದಕ ವಸ್ತುಗಳನ್ನೂ ಅಕ್ರಮವಾಗಿ ಮ್ಯಾನ್ಮಾರ್‌ನಿಂದ ಕಳ್ಳಸಾಗಣೆ ಮಾಡಲಾಗುತ್ತಿದೆ ಎಂದು ಸಂಸದರು ತಿಳಿಸಿದ್ದಾರೆ.

ಈ ಸಮಸ್ಯೆಯನ್ನು ಪರಿಹರಿಸಲು ತಕ್ಷಣದ ಕ್ರಮಗಳನ್ನು ತೆಗೆದುಕೊಳ್ಳಬೇಕಾದ ಅನಿವಾರ್ಯತೆ ಇದೆ ಎಂದು ಸಂಸದ ಗೌರವ್ ಗೊಗೊಯ್  ಹೇಳಿದರು. ಗಡಿ ಭದ್ರತೆಯನ್ನು ಬಲಪಡಿಸುವುದು, ಕಣ್ಗಾವಲು ಕ್ರಮಗಳನ್ನು ಹೆಚ್ಚಿಸುವುದು ಮತ್ತು ಕಳ್ಳಸಾಗಾಣಿಕೆ ಜಾಲಗಳಿಗೆ ಕಡಿವಾಣ ಹಾಕುವ ಅಗತ್ಯ ಇದೆ, ಇದಕ್ಕಾಗಿ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಂಸದರು ಪ್ರಧಾನಿಗಳನ್ನು ಒತ್ತಾಯಿಸಿದರು.

Congress Lok Sabha MP from Assam Gaurav Gogoi, has called for Prime Minister Narendra Modi’s intervention to address the issue of smuggling Burma arecanut and other Drugs.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

1 day ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

2 days ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

2 days ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

2 days ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

2 days ago