ಬರ್ಮಾ ಅಡಿಕೆ ಸಾಗಾಟದ ಕಿಂಗ್‌ಪಿನ್‌ ಬಂಧಿಸಿದ ಅಸ್ಸಾಂ ಪೊಲೀಸರು | ಬಹುರಾಜ್ಯಗಳ ಪ್ರಭಾವಿಗಳ ನಂಟು ಹೊಂದಿದ್ದ ಆರೋಪಿ |

October 16, 2022
6:05 PM

ಬರ್ಮಾದಿಂದ ಅಕ್ರಮವಾಗಿ ಅಡಿಕೆ ಸಾಗಾಟ ನಡೆಸುತ್ತಿದ್ದ ಪ್ರಕರಣದ ಪ್ರಮುಖ ಕಿಂಗ್‌ ಪಿಂಗ್‌ ಒಬ್ಬನನ್ನು ಅಸ್ಸಾಂ ರಾಜ್ಯದ ಕ್ಯಾಚರ್‌ ಜಿಲ್ಲೆಯ ಪೊಲೀಸರು ಬಂದಿಸಿದ್ದಾರೆ. ಈಗ ಬಹುರಾಜ್ಯದ ಸಂಪರ್ಕ ಹೊಂದಿದ್ದು, ಅಲ್ಲಿನ ಪ್ರಭಾವಿಗಳ ಸಂಪರ್ಕವನ್ನೂ ಹೊಂದಿದ್ದ ಎಂಬುದು ತನಿಖೆಯ ವೇಳೆ ಬಹಿರಂಗವಾಗಿದೆ.

Advertisement

ಕಳೆದ ಅನೇಕ ಸಮಯಗಳಿಂದ ಬರ್ಮಾ ಅಡಿಕೆಯನ್ನು ಅಸ್ಸಾಂ ಮೂಲಕ ಭಾರತದೊಳಕ್ಕೆ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪ್ರಕರಣ ಆಗಾಗ ಬೆಳಕಿಗೆ ಬರುತ್ತಿತ್ತು. ರೈಲು, ಲಾರಿ, ತಲೆಹೊರೆ ಮೂಲಕವೂ ಭಾರತದೊಳಕ್ಕೆ ಪ್ರವೇಶವಾಗುತ್ತಿತ್ತು. ಈಚೆಗೆ ಟ್ಯಾಂಕರ್‌ ಮೂಲಕ ಅಡಿಕೆ ಕಳ್ಳಸಾಗಾಣಿಕೆ ಪ್ರಕರಣ ಬೆಳಕಿಗೆ ಬಂದ ಬಳಿಕ ಅಸ್ಸಾಂ ಮುಖ್ಯಮಂತ್ರಿ ಡಾ. ಹಿಮಂತ ಬಿಸ್ವಾ ಶರ್ಮಾ ಅವರು ಕಾನೂನುಬಾಹಿರ ಕಾರ್ಯಾಚರಣೆಗಳನ್ನು ನಡೆಸುತ್ತಿರುವ ಇಂತಹ ಸಂಬಂಧಗಳನ್ನು ಬೇರುಸಹಿತ ಕಿತ್ತುಹಾಕಬೇಕು ಎಂದು ಪೊಲೀಸರಿಗೆ ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಸಮಗ್ರವಾಗಿ ತನಿಖೆ ನಡೆಯುತ್ತಿತ್ತು. ಈ ಸಂದರ್ಭ ಅಕ್ರಮ ಅಡಿಕೆ ಸಾಗಾಟದ ಕಿಂಗ್‌ ಪಿಂಗ್‌ ಮೂಸಾ ಅಹ್ಮದ್ ಸಿದ್ದಿಕಿ ಬಂಧಿಸಲಾಗಿದೆ. ಮಿಜೋರಾಂನಲ್ಲಿ ಈತ ಕಾರ್ಯನಿರ್ವಹಿಸುತ್ತಿದ್ದ. ಟ್ಯಾಂಕರ್‌ ಮೂಲಕ ಅಡಿಕೆ ಸಾಗಾಟ ಪ್ರಕರಣ ಬೆಳಕಿಗೆ ಬಂದ ಬಳಿಕ ತನಿಖೆ ಬಿಗಿಯಾಗುತ್ತಿದ್ದತೆಯೇ ವಿದೇಶಕ್ಕೆ ಪರಾರಿಯಾಗಲು ಯತ್ನಿಸುತ್ತಿದ್ದ ಅಹ್ಮದ್‌ನನ್ನು ಸಿಲ್ಚಾರ್ ವಿಮಾನ ನಿಲ್ದಾಣದಲ್ಲಿ ಪೊಲೀಸರು ಬಂಧಿಸಿದರು.

ಕ್ಯಾಚಾರ್ ಜಿಲ್ಲೆಯ ಎಸ್ಪಿ, ನುಮಲ್ ಮಹತ್ತಾ ಅವರ ಪ್ರಕಾರ, ಮೂಸಾ ಅಹ್ಮದ್ ಬಹುರಾಜ್ಯಗಳ ನಂಟು ಹೊಂದಿದ್ದು ಅಡಿಕೆ ಅಕ್ರಮ ಸಾಗಾಟದ ಕಿಂಗ್‌ಪಿನ್ ಆಗಿದ್ದ. ಬರ್ಮಾ ಅಡಿಕೆಯನ್ನು ದೇಶದ ವಿವಿಧ ಭಾಗಗಳಿಗೆ ಕಳ್ಳಸಾಗಣೆ ಮಾಡುತ್ತಿದ್ದ. ಅಲ್ಲಿನ ಪ್ರಭಾವಿಗಳ ಸಂಪರ್ಕ ಹೊಂದಿದ್ದ. ಇದೀಗ ಅಂತಹವರನ್ನೂ ಗಮನಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ. ಕಳೆದ ಒಂದು ವರ್ಷಗಳಿಂದ ಅಡಿಕೆ ಅಕ್ರಮ ಸಾಗಾಟದ ಬಗ್ಗೆ ನಿಗಾ ಇರಿಸಿದ್ದೆವು, ಇದೀಗ ಕಿಂಗ್‌ ಪಿನ್‌ ಸೆರೆಯಾಗಿದ್ದಾನೆ ಎಂದು ತಿಳಿಸಿದ್ದಾರೆ. ಹಲವು ಸಮಯಗಳಿಂದ ಈ ಅಕ್ರಮ ತಡೆ ಹಾಗೂ ಆರೋಪಿ ಪತ್ತೆಗೆ ಕೆಲಸ ಮಾಡುತ್ತಿದ್ದರೂ ಈಶಾನ್ಯ ರಾಜ್ಯದಾದ್ಯಂತ ವಿವಿಧ ರಾಜ್ಯಗಳಲ್ಲಿ ಪ್ರಭಾವಿ ವ್ಯಕ್ತಿಗಳೊಂದಿಗೆ ಕೆಲಸ ಮಾಡುತ್ತಿದ್ದರಿಂದ ಅವರಿಗೆ ರಕ್ಷಣೆ ಸಿಕ್ಕಿತು ಎಂದು ಎಸ್ಪಿ, ನುಮಲ್ ಮಹತ್ತಾ ಮಾಹಿತಿ ನೀಡಿದ್ದರು.

ಜನವರಿ ನಂತರ  ಮ್ಯಾನ್ಮಾರ್‌ನಿಂದ ಮಿಜೋರಾಂ ಮತ್ತು ಮಣಿಪುರಕ್ಕೆ ಅಡಿಕೆ ಕಳ್ಳಸಾಗಣೆ  ಹೆಚ್ಚಳವಾಗಿತ್ತು. ಭಾರತ-ಮ್ಯಾನ್ಮಾರ್ ಗಡಿಯಲ್ಲಿರುವ ಮೂರು ಜಿಲ್ಲೆಗಳನ್ನು ಅಡಿಕೆ  ಕಳ್ಳಸಾಗಣೆ ಹಾಟ್‌ಸ್ಪಾಟ್ ಎಂದು ಪರಿಗಣಿಸಲಾಗಿತ್ತು.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

ಇದನ್ನೂ ಓದಿ

ಹೊಸರುಚಿ | ಗುಜ್ಜೆ ಮಂಚೂರಿ – ಕರಾವಳಿಯ ಸಾಂಪ್ರದಾಯಿಕ ರುಚಿಗೆ ಚೈನೀಸ್ ಟ್ವಿಸ್ಟ್
April 20, 2026
9:40 PM
by: ದ ರೂರಲ್ ಮಿರರ್.ಕಾಂ
ಕಾವೇರಿ ತೀರ ಅಪಾಯ ಎಚ್ಚರಿಕೆ: ಬಲಮುರಿ-ಎಡಮುರಿ ಪ್ರವಾಸಕ್ಕೆ ತಾತ್ಕಾಲಿಕ ನಿಷೇಧ
April 20, 2026
8:08 AM
by: ಮಿರರ್‌ ಡೆಸ್ಕ್
ರಾಜ್ಯದ ಒಂದೆರಡು ಸ್ಥಳಗಳಲ್ಲಿ ಮಳೆ – ಐದು ದಿನ ಬಿಸಿ ಹವೆಯ ಮುನ್ಸೂಚನೆ -ದೇಶದಾದ್ಯಂತ ತಾಪಮಾನ ಏರಿಕೆ
April 20, 2026
7:51 AM
by: ಮಿರರ್‌ ಡೆಸ್ಕ್
ರಾಜ್ಯದಲ್ಲಿ ಸಿಡಿಲು ಮಿಂಚಿನ ಆರ್ಭಟ – 14 ವರ್ಷಗಳಲ್ಲಿ 1,026 ಸಾವು | ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ ತೆಗೆದುಕೊಳ್ಳಿ
April 19, 2026
11:26 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror