ಬರ್ಮಾ ಅಡಿಕೆ ಸಾಗಾಟದ ಕಿಂಗ್‌ಪಿನ್‌ ಬಂಧಿಸಿದ ಅಸ್ಸಾಂ ಪೊಲೀಸರು | ಬಹುರಾಜ್ಯಗಳ ಪ್ರಭಾವಿಗಳ ನಂಟು ಹೊಂದಿದ್ದ ಆರೋಪಿ |

October 16, 2022
6:05 PM

ಬರ್ಮಾದಿಂದ ಅಕ್ರಮವಾಗಿ ಅಡಿಕೆ ಸಾಗಾಟ ನಡೆಸುತ್ತಿದ್ದ ಪ್ರಕರಣದ ಪ್ರಮುಖ ಕಿಂಗ್‌ ಪಿಂಗ್‌ ಒಬ್ಬನನ್ನು ಅಸ್ಸಾಂ ರಾಜ್ಯದ ಕ್ಯಾಚರ್‌ ಜಿಲ್ಲೆಯ ಪೊಲೀಸರು ಬಂದಿಸಿದ್ದಾರೆ. ಈಗ ಬಹುರಾಜ್ಯದ ಸಂಪರ್ಕ ಹೊಂದಿದ್ದು, ಅಲ್ಲಿನ ಪ್ರಭಾವಿಗಳ ಸಂಪರ್ಕವನ್ನೂ ಹೊಂದಿದ್ದ ಎಂಬುದು ತನಿಖೆಯ ವೇಳೆ ಬಹಿರಂಗವಾಗಿದೆ.

ಕಳೆದ ಅನೇಕ ಸಮಯಗಳಿಂದ ಬರ್ಮಾ ಅಡಿಕೆಯನ್ನು ಅಸ್ಸಾಂ ಮೂಲಕ ಭಾರತದೊಳಕ್ಕೆ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪ್ರಕರಣ ಆಗಾಗ ಬೆಳಕಿಗೆ ಬರುತ್ತಿತ್ತು. ರೈಲು, ಲಾರಿ, ತಲೆಹೊರೆ ಮೂಲಕವೂ ಭಾರತದೊಳಕ್ಕೆ ಪ್ರವೇಶವಾಗುತ್ತಿತ್ತು. ಈಚೆಗೆ ಟ್ಯಾಂಕರ್‌ ಮೂಲಕ ಅಡಿಕೆ ಕಳ್ಳಸಾಗಾಣಿಕೆ ಪ್ರಕರಣ ಬೆಳಕಿಗೆ ಬಂದ ಬಳಿಕ ಅಸ್ಸಾಂ ಮುಖ್ಯಮಂತ್ರಿ ಡಾ. ಹಿಮಂತ ಬಿಸ್ವಾ ಶರ್ಮಾ ಅವರು ಕಾನೂನುಬಾಹಿರ ಕಾರ್ಯಾಚರಣೆಗಳನ್ನು ನಡೆಸುತ್ತಿರುವ ಇಂತಹ ಸಂಬಂಧಗಳನ್ನು ಬೇರುಸಹಿತ ಕಿತ್ತುಹಾಕಬೇಕು ಎಂದು ಪೊಲೀಸರಿಗೆ ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಸಮಗ್ರವಾಗಿ ತನಿಖೆ ನಡೆಯುತ್ತಿತ್ತು. ಈ ಸಂದರ್ಭ ಅಕ್ರಮ ಅಡಿಕೆ ಸಾಗಾಟದ ಕಿಂಗ್‌ ಪಿಂಗ್‌ ಮೂಸಾ ಅಹ್ಮದ್ ಸಿದ್ದಿಕಿ ಬಂಧಿಸಲಾಗಿದೆ. ಮಿಜೋರಾಂನಲ್ಲಿ ಈತ ಕಾರ್ಯನಿರ್ವಹಿಸುತ್ತಿದ್ದ. ಟ್ಯಾಂಕರ್‌ ಮೂಲಕ ಅಡಿಕೆ ಸಾಗಾಟ ಪ್ರಕರಣ ಬೆಳಕಿಗೆ ಬಂದ ಬಳಿಕ ತನಿಖೆ ಬಿಗಿಯಾಗುತ್ತಿದ್ದತೆಯೇ ವಿದೇಶಕ್ಕೆ ಪರಾರಿಯಾಗಲು ಯತ್ನಿಸುತ್ತಿದ್ದ ಅಹ್ಮದ್‌ನನ್ನು ಸಿಲ್ಚಾರ್ ವಿಮಾನ ನಿಲ್ದಾಣದಲ್ಲಿ ಪೊಲೀಸರು ಬಂಧಿಸಿದರು.

ಕ್ಯಾಚಾರ್ ಜಿಲ್ಲೆಯ ಎಸ್ಪಿ, ನುಮಲ್ ಮಹತ್ತಾ ಅವರ ಪ್ರಕಾರ, ಮೂಸಾ ಅಹ್ಮದ್ ಬಹುರಾಜ್ಯಗಳ ನಂಟು ಹೊಂದಿದ್ದು ಅಡಿಕೆ ಅಕ್ರಮ ಸಾಗಾಟದ ಕಿಂಗ್‌ಪಿನ್ ಆಗಿದ್ದ. ಬರ್ಮಾ ಅಡಿಕೆಯನ್ನು ದೇಶದ ವಿವಿಧ ಭಾಗಗಳಿಗೆ ಕಳ್ಳಸಾಗಣೆ ಮಾಡುತ್ತಿದ್ದ. ಅಲ್ಲಿನ ಪ್ರಭಾವಿಗಳ ಸಂಪರ್ಕ ಹೊಂದಿದ್ದ. ಇದೀಗ ಅಂತಹವರನ್ನೂ ಗಮನಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ. ಕಳೆದ ಒಂದು ವರ್ಷಗಳಿಂದ ಅಡಿಕೆ ಅಕ್ರಮ ಸಾಗಾಟದ ಬಗ್ಗೆ ನಿಗಾ ಇರಿಸಿದ್ದೆವು, ಇದೀಗ ಕಿಂಗ್‌ ಪಿನ್‌ ಸೆರೆಯಾಗಿದ್ದಾನೆ ಎಂದು ತಿಳಿಸಿದ್ದಾರೆ. ಹಲವು ಸಮಯಗಳಿಂದ ಈ ಅಕ್ರಮ ತಡೆ ಹಾಗೂ ಆರೋಪಿ ಪತ್ತೆಗೆ ಕೆಲಸ ಮಾಡುತ್ತಿದ್ದರೂ ಈಶಾನ್ಯ ರಾಜ್ಯದಾದ್ಯಂತ ವಿವಿಧ ರಾಜ್ಯಗಳಲ್ಲಿ ಪ್ರಭಾವಿ ವ್ಯಕ್ತಿಗಳೊಂದಿಗೆ ಕೆಲಸ ಮಾಡುತ್ತಿದ್ದರಿಂದ ಅವರಿಗೆ ರಕ್ಷಣೆ ಸಿಕ್ಕಿತು ಎಂದು ಎಸ್ಪಿ, ನುಮಲ್ ಮಹತ್ತಾ ಮಾಹಿತಿ ನೀಡಿದ್ದರು.

ಜನವರಿ ನಂತರ  ಮ್ಯಾನ್ಮಾರ್‌ನಿಂದ ಮಿಜೋರಾಂ ಮತ್ತು ಮಣಿಪುರಕ್ಕೆ ಅಡಿಕೆ ಕಳ್ಳಸಾಗಣೆ  ಹೆಚ್ಚಳವಾಗಿತ್ತು. ಭಾರತ-ಮ್ಯಾನ್ಮಾರ್ ಗಡಿಯಲ್ಲಿರುವ ಮೂರು ಜಿಲ್ಲೆಗಳನ್ನು ಅಡಿಕೆ  ಕಳ್ಳಸಾಗಣೆ ಹಾಟ್‌ಸ್ಪಾಟ್ ಎಂದು ಪರಿಗಣಿಸಲಾಗಿತ್ತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

ಇದನ್ನೂ ಓದಿ

ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿ ಪ್ರಶ್ನಿಸಿದ ಬಾಂಬೆ ಹೈಕೋರ್ಟ್ – ರಾಜ್ಯ ಸರ್ಕಾರದಿಂದ ಸ್ಪಷ್ಟನೆ ಕೋರಿದ ಕೋರ್ಟ್
July 9, 2026
9:28 PM
by: ದ ರೂರಲ್ ಮಿರರ್.ಕಾಂ
ಗುಟ್ಕಾ ಜಾಲಕ್ಕೆ ಮಹಾರಾಷ್ಟ್ರದ ಭಾರೀ ಹೊಡೆತ..! 700ಕ್ಕೂ ಹೆಚ್ಚು ಎಫ್‌ಐಆರ್‌ ದಾಖಲು – ಕಳಪೆ ಅಡಿಕೆ ಸಾಗಾಟವೂ ಈ ವ್ಯಾಪ್ತಿಯಲ್ಲಿ..!
July 9, 2026
9:12 PM
by: ಮಿರರ್‌ ಡೆಸ್ಕ್‌
ಮಂಗಳೂರಿನಲ್ಲಿ ಉದ್ಯೋಗ ಮೇಳ – ಜುಲೈ 14ರಂದು ನೇರ ಸಂದರ್ಶನ – ಬ್ಯಾಂಕ್‌ನಿಂದ ಟೆಕ್ನಿಕಲ್‌ ಹುದ್ದೆಗಳವರೆಗೆ ಅವಕಾಶ
July 9, 2026
8:51 PM
by: ದ ರೂರಲ್ ಮಿರರ್.ಕಾಂ
ಆಘಾತಕಾರಿ ವರದಿ- ಮೇ-ಜೂನ್‌ನಲ್ಲಿ ಭಾರತದ 10 ಮಕ್ಕಳಲ್ಲಿ 7 ಮಂದಿ ಶಾಲೆ ತಪ್ಪಿಸಿದರು..!
July 9, 2026
2:37 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror