Advertisement
The Rural Mirror ಫಾಲೋಅಪ್

ಬರ್ಮಾ ಅಡಿಕೆ ಸಾಗಾಟದ ಕಿಂಗ್‌ಪಿನ್‌ ಬಂಧಿಸಿದ ಅಸ್ಸಾಂ ಪೊಲೀಸರು | ಬಹುರಾಜ್ಯಗಳ ಪ್ರಭಾವಿಗಳ ನಂಟು ಹೊಂದಿದ್ದ ಆರೋಪಿ |

Share

ಬರ್ಮಾದಿಂದ ಅಕ್ರಮವಾಗಿ ಅಡಿಕೆ ಸಾಗಾಟ ನಡೆಸುತ್ತಿದ್ದ ಪ್ರಕರಣದ ಪ್ರಮುಖ ಕಿಂಗ್‌ ಪಿಂಗ್‌ ಒಬ್ಬನನ್ನು ಅಸ್ಸಾಂ ರಾಜ್ಯದ ಕ್ಯಾಚರ್‌ ಜಿಲ್ಲೆಯ ಪೊಲೀಸರು ಬಂದಿಸಿದ್ದಾರೆ. ಈಗ ಬಹುರಾಜ್ಯದ ಸಂಪರ್ಕ ಹೊಂದಿದ್ದು, ಅಲ್ಲಿನ ಪ್ರಭಾವಿಗಳ ಸಂಪರ್ಕವನ್ನೂ ಹೊಂದಿದ್ದ ಎಂಬುದು ತನಿಖೆಯ ವೇಳೆ ಬಹಿರಂಗವಾಗಿದೆ.

ಕಳೆದ ಅನೇಕ ಸಮಯಗಳಿಂದ ಬರ್ಮಾ ಅಡಿಕೆಯನ್ನು ಅಸ್ಸಾಂ ಮೂಲಕ ಭಾರತದೊಳಕ್ಕೆ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪ್ರಕರಣ ಆಗಾಗ ಬೆಳಕಿಗೆ ಬರುತ್ತಿತ್ತು. ರೈಲು, ಲಾರಿ, ತಲೆಹೊರೆ ಮೂಲಕವೂ ಭಾರತದೊಳಕ್ಕೆ ಪ್ರವೇಶವಾಗುತ್ತಿತ್ತು. ಈಚೆಗೆ ಟ್ಯಾಂಕರ್‌ ಮೂಲಕ ಅಡಿಕೆ ಕಳ್ಳಸಾಗಾಣಿಕೆ ಪ್ರಕರಣ ಬೆಳಕಿಗೆ ಬಂದ ಬಳಿಕ ಅಸ್ಸಾಂ ಮುಖ್ಯಮಂತ್ರಿ ಡಾ. ಹಿಮಂತ ಬಿಸ್ವಾ ಶರ್ಮಾ ಅವರು ಕಾನೂನುಬಾಹಿರ ಕಾರ್ಯಾಚರಣೆಗಳನ್ನು ನಡೆಸುತ್ತಿರುವ ಇಂತಹ ಸಂಬಂಧಗಳನ್ನು ಬೇರುಸಹಿತ ಕಿತ್ತುಹಾಕಬೇಕು ಎಂದು ಪೊಲೀಸರಿಗೆ ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಸಮಗ್ರವಾಗಿ ತನಿಖೆ ನಡೆಯುತ್ತಿತ್ತು. ಈ ಸಂದರ್ಭ ಅಕ್ರಮ ಅಡಿಕೆ ಸಾಗಾಟದ ಕಿಂಗ್‌ ಪಿಂಗ್‌ ಮೂಸಾ ಅಹ್ಮದ್ ಸಿದ್ದಿಕಿ ಬಂಧಿಸಲಾಗಿದೆ. ಮಿಜೋರಾಂನಲ್ಲಿ ಈತ ಕಾರ್ಯನಿರ್ವಹಿಸುತ್ತಿದ್ದ. ಟ್ಯಾಂಕರ್‌ ಮೂಲಕ ಅಡಿಕೆ ಸಾಗಾಟ ಪ್ರಕರಣ ಬೆಳಕಿಗೆ ಬಂದ ಬಳಿಕ ತನಿಖೆ ಬಿಗಿಯಾಗುತ್ತಿದ್ದತೆಯೇ ವಿದೇಶಕ್ಕೆ ಪರಾರಿಯಾಗಲು ಯತ್ನಿಸುತ್ತಿದ್ದ ಅಹ್ಮದ್‌ನನ್ನು ಸಿಲ್ಚಾರ್ ವಿಮಾನ ನಿಲ್ದಾಣದಲ್ಲಿ ಪೊಲೀಸರು ಬಂಧಿಸಿದರು.

ಕ್ಯಾಚಾರ್ ಜಿಲ್ಲೆಯ ಎಸ್ಪಿ, ನುಮಲ್ ಮಹತ್ತಾ ಅವರ ಪ್ರಕಾರ, ಮೂಸಾ ಅಹ್ಮದ್ ಬಹುರಾಜ್ಯಗಳ ನಂಟು ಹೊಂದಿದ್ದು ಅಡಿಕೆ ಅಕ್ರಮ ಸಾಗಾಟದ ಕಿಂಗ್‌ಪಿನ್ ಆಗಿದ್ದ. ಬರ್ಮಾ ಅಡಿಕೆಯನ್ನು ದೇಶದ ವಿವಿಧ ಭಾಗಗಳಿಗೆ ಕಳ್ಳಸಾಗಣೆ ಮಾಡುತ್ತಿದ್ದ. ಅಲ್ಲಿನ ಪ್ರಭಾವಿಗಳ ಸಂಪರ್ಕ ಹೊಂದಿದ್ದ. ಇದೀಗ ಅಂತಹವರನ್ನೂ ಗಮನಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ. ಕಳೆದ ಒಂದು ವರ್ಷಗಳಿಂದ ಅಡಿಕೆ ಅಕ್ರಮ ಸಾಗಾಟದ ಬಗ್ಗೆ ನಿಗಾ ಇರಿಸಿದ್ದೆವು, ಇದೀಗ ಕಿಂಗ್‌ ಪಿನ್‌ ಸೆರೆಯಾಗಿದ್ದಾನೆ ಎಂದು ತಿಳಿಸಿದ್ದಾರೆ. ಹಲವು ಸಮಯಗಳಿಂದ ಈ ಅಕ್ರಮ ತಡೆ ಹಾಗೂ ಆರೋಪಿ ಪತ್ತೆಗೆ ಕೆಲಸ ಮಾಡುತ್ತಿದ್ದರೂ ಈಶಾನ್ಯ ರಾಜ್ಯದಾದ್ಯಂತ ವಿವಿಧ ರಾಜ್ಯಗಳಲ್ಲಿ ಪ್ರಭಾವಿ ವ್ಯಕ್ತಿಗಳೊಂದಿಗೆ ಕೆಲಸ ಮಾಡುತ್ತಿದ್ದರಿಂದ ಅವರಿಗೆ ರಕ್ಷಣೆ ಸಿಕ್ಕಿತು ಎಂದು ಎಸ್ಪಿ, ನುಮಲ್ ಮಹತ್ತಾ ಮಾಹಿತಿ ನೀಡಿದ್ದರು.

ಜನವರಿ ನಂತರ  ಮ್ಯಾನ್ಮಾರ್‌ನಿಂದ ಮಿಜೋರಾಂ ಮತ್ತು ಮಣಿಪುರಕ್ಕೆ ಅಡಿಕೆ ಕಳ್ಳಸಾಗಣೆ  ಹೆಚ್ಚಳವಾಗಿತ್ತು. ಭಾರತ-ಮ್ಯಾನ್ಮಾರ್ ಗಡಿಯಲ್ಲಿರುವ ಮೂರು ಜಿಲ್ಲೆಗಳನ್ನು ಅಡಿಕೆ  ಕಳ್ಳಸಾಗಣೆ ಹಾಟ್‌ಸ್ಪಾಟ್ ಎಂದು ಪರಿಗಣಿಸಲಾಗಿತ್ತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಸೆಪ್ಟೆಂಬರ್‌ನಲ್ಲಿ ಪಿಎಂ ಕಿಸಾನ್ ಹಣ ಬರಬೇಕೇ? ರೈತರು ಈಗಲೇ e-KYC ಪೂರ್ಣಗೊಳಿಸಿ

PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…

4 hours ago

ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ

ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…

15 hours ago

ಹವಾಮಾನ ವರದಿ | 21-08-2026 | ಕರಾವಳಿಯಲ್ಲಿ ಆ.23–25 ರಂದು ಮಳೆ ಹೆಚ್ಚಳ ಸಾಧ್ಯತೆ – ಆ.26ರವರೆಗೆ ಮೋಡ–ಮಳೆ

ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…

19 hours ago

ನಿಮ್ಮ ಹೆಸರಲ್ಲಿ 9 ಸಿಮ್‌ಗಳಿವೆಯೇ? ಆಗಸ್ಟ್ 24ರಿಂದ ಹೊಸ ನಿಯಮ – ಹೆಚ್ಚುವರಿ ನಂಬರ್‌ಗೆ ಬ್ರೇಕ್

ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…

1 day ago

ತೆಂಗಿನ ಮರದಿಂದ 3 ಕೋಟಿ ಜನರಿಗೆ ಬದುಕು…!, ಈಗ ₹7,038 ಕೋಟಿ ರಫ್ತು!

ಭಾರತದ ತೆಂಗು ವಲಯ ಈಗ ಕಾಯಿ ಮಾರಾಟದಿಂದ ಮೌಲ್ಯವರ್ಧಿತ ಉತ್ಪನ್ನಗಳ ಜಾಗತಿಕ ಮಾರುಕಟ್ಟೆಯತ್ತ…

1 day ago

ಮಳೆ ಬಂದರೂ ಬಿಸಿ ಕಾಡಲಿದೆ…! ರೈತರ ಕೆಲಸದ ಸಮಯವನ್ನೇ ಬದಲಿಸಬಹುದಾದ ಹೊಸ ಹವಾಮಾನ ಅಪಾಯ

ಜಾಗತಿಕ ತಾಪಮಾನ ಏರಿಕೆಯಿಂದ ಭಾರತದ ಮಳೆಗಾಲದಲ್ಲೂ ಹೆಚ್ಚಿನ ತೇವಾಂಶದೊಂದಿಗೆ ಅಪಾಯಕಾರಿ ಬಿಸಿ ಒತ್ತಡ…

1 day ago