Advertisement
The Rural Mirror ಫಾಲೋಅಪ್

ಬರ್ಮಾ ಅಡಿಕೆ ಸಾಗಾಟದ ಕಿಂಗ್‌ಪಿನ್‌ ಬಂಧಿಸಿದ ಅಸ್ಸಾಂ ಪೊಲೀಸರು | ಬಹುರಾಜ್ಯಗಳ ಪ್ರಭಾವಿಗಳ ನಂಟು ಹೊಂದಿದ್ದ ಆರೋಪಿ |

Share

ಬರ್ಮಾದಿಂದ ಅಕ್ರಮವಾಗಿ ಅಡಿಕೆ ಸಾಗಾಟ ನಡೆಸುತ್ತಿದ್ದ ಪ್ರಕರಣದ ಪ್ರಮುಖ ಕಿಂಗ್‌ ಪಿಂಗ್‌ ಒಬ್ಬನನ್ನು ಅಸ್ಸಾಂ ರಾಜ್ಯದ ಕ್ಯಾಚರ್‌ ಜಿಲ್ಲೆಯ ಪೊಲೀಸರು ಬಂದಿಸಿದ್ದಾರೆ. ಈಗ ಬಹುರಾಜ್ಯದ ಸಂಪರ್ಕ ಹೊಂದಿದ್ದು, ಅಲ್ಲಿನ ಪ್ರಭಾವಿಗಳ ಸಂಪರ್ಕವನ್ನೂ ಹೊಂದಿದ್ದ ಎಂಬುದು ತನಿಖೆಯ ವೇಳೆ ಬಹಿರಂಗವಾಗಿದೆ.

ಕಳೆದ ಅನೇಕ ಸಮಯಗಳಿಂದ ಬರ್ಮಾ ಅಡಿಕೆಯನ್ನು ಅಸ್ಸಾಂ ಮೂಲಕ ಭಾರತದೊಳಕ್ಕೆ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪ್ರಕರಣ ಆಗಾಗ ಬೆಳಕಿಗೆ ಬರುತ್ತಿತ್ತು. ರೈಲು, ಲಾರಿ, ತಲೆಹೊರೆ ಮೂಲಕವೂ ಭಾರತದೊಳಕ್ಕೆ ಪ್ರವೇಶವಾಗುತ್ತಿತ್ತು. ಈಚೆಗೆ ಟ್ಯಾಂಕರ್‌ ಮೂಲಕ ಅಡಿಕೆ ಕಳ್ಳಸಾಗಾಣಿಕೆ ಪ್ರಕರಣ ಬೆಳಕಿಗೆ ಬಂದ ಬಳಿಕ ಅಸ್ಸಾಂ ಮುಖ್ಯಮಂತ್ರಿ ಡಾ. ಹಿಮಂತ ಬಿಸ್ವಾ ಶರ್ಮಾ ಅವರು ಕಾನೂನುಬಾಹಿರ ಕಾರ್ಯಾಚರಣೆಗಳನ್ನು ನಡೆಸುತ್ತಿರುವ ಇಂತಹ ಸಂಬಂಧಗಳನ್ನು ಬೇರುಸಹಿತ ಕಿತ್ತುಹಾಕಬೇಕು ಎಂದು ಪೊಲೀಸರಿಗೆ ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಸಮಗ್ರವಾಗಿ ತನಿಖೆ ನಡೆಯುತ್ತಿತ್ತು. ಈ ಸಂದರ್ಭ ಅಕ್ರಮ ಅಡಿಕೆ ಸಾಗಾಟದ ಕಿಂಗ್‌ ಪಿಂಗ್‌ ಮೂಸಾ ಅಹ್ಮದ್ ಸಿದ್ದಿಕಿ ಬಂಧಿಸಲಾಗಿದೆ. ಮಿಜೋರಾಂನಲ್ಲಿ ಈತ ಕಾರ್ಯನಿರ್ವಹಿಸುತ್ತಿದ್ದ. ಟ್ಯಾಂಕರ್‌ ಮೂಲಕ ಅಡಿಕೆ ಸಾಗಾಟ ಪ್ರಕರಣ ಬೆಳಕಿಗೆ ಬಂದ ಬಳಿಕ ತನಿಖೆ ಬಿಗಿಯಾಗುತ್ತಿದ್ದತೆಯೇ ವಿದೇಶಕ್ಕೆ ಪರಾರಿಯಾಗಲು ಯತ್ನಿಸುತ್ತಿದ್ದ ಅಹ್ಮದ್‌ನನ್ನು ಸಿಲ್ಚಾರ್ ವಿಮಾನ ನಿಲ್ದಾಣದಲ್ಲಿ ಪೊಲೀಸರು ಬಂಧಿಸಿದರು.

ಕ್ಯಾಚಾರ್ ಜಿಲ್ಲೆಯ ಎಸ್ಪಿ, ನುಮಲ್ ಮಹತ್ತಾ ಅವರ ಪ್ರಕಾರ, ಮೂಸಾ ಅಹ್ಮದ್ ಬಹುರಾಜ್ಯಗಳ ನಂಟು ಹೊಂದಿದ್ದು ಅಡಿಕೆ ಅಕ್ರಮ ಸಾಗಾಟದ ಕಿಂಗ್‌ಪಿನ್ ಆಗಿದ್ದ. ಬರ್ಮಾ ಅಡಿಕೆಯನ್ನು ದೇಶದ ವಿವಿಧ ಭಾಗಗಳಿಗೆ ಕಳ್ಳಸಾಗಣೆ ಮಾಡುತ್ತಿದ್ದ. ಅಲ್ಲಿನ ಪ್ರಭಾವಿಗಳ ಸಂಪರ್ಕ ಹೊಂದಿದ್ದ. ಇದೀಗ ಅಂತಹವರನ್ನೂ ಗಮನಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ. ಕಳೆದ ಒಂದು ವರ್ಷಗಳಿಂದ ಅಡಿಕೆ ಅಕ್ರಮ ಸಾಗಾಟದ ಬಗ್ಗೆ ನಿಗಾ ಇರಿಸಿದ್ದೆವು, ಇದೀಗ ಕಿಂಗ್‌ ಪಿನ್‌ ಸೆರೆಯಾಗಿದ್ದಾನೆ ಎಂದು ತಿಳಿಸಿದ್ದಾರೆ. ಹಲವು ಸಮಯಗಳಿಂದ ಈ ಅಕ್ರಮ ತಡೆ ಹಾಗೂ ಆರೋಪಿ ಪತ್ತೆಗೆ ಕೆಲಸ ಮಾಡುತ್ತಿದ್ದರೂ ಈಶಾನ್ಯ ರಾಜ್ಯದಾದ್ಯಂತ ವಿವಿಧ ರಾಜ್ಯಗಳಲ್ಲಿ ಪ್ರಭಾವಿ ವ್ಯಕ್ತಿಗಳೊಂದಿಗೆ ಕೆಲಸ ಮಾಡುತ್ತಿದ್ದರಿಂದ ಅವರಿಗೆ ರಕ್ಷಣೆ ಸಿಕ್ಕಿತು ಎಂದು ಎಸ್ಪಿ, ನುಮಲ್ ಮಹತ್ತಾ ಮಾಹಿತಿ ನೀಡಿದ್ದರು.

ಜನವರಿ ನಂತರ  ಮ್ಯಾನ್ಮಾರ್‌ನಿಂದ ಮಿಜೋರಾಂ ಮತ್ತು ಮಣಿಪುರಕ್ಕೆ ಅಡಿಕೆ ಕಳ್ಳಸಾಗಣೆ  ಹೆಚ್ಚಳವಾಗಿತ್ತು. ಭಾರತ-ಮ್ಯಾನ್ಮಾರ್ ಗಡಿಯಲ್ಲಿರುವ ಮೂರು ಜಿಲ್ಲೆಗಳನ್ನು ಅಡಿಕೆ  ಕಳ್ಳಸಾಗಣೆ ಹಾಟ್‌ಸ್ಪಾಟ್ ಎಂದು ಪರಿಗಣಿಸಲಾಗಿತ್ತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಸಮಯ ತಪ್ಪಿ ತಿಂದ ಆಹಾರವೇ ವಿಷವಾಗಬಹುದು – ರಾಘವೇಶ್ವರ ಶ್ರೀ

ಹಿತವಾದ ಆಹಾರವನ್ನು ಮಿತ ಪ್ರಮಾಣದಲ್ಲಿ ಮತ್ತು ಸಕಾಲದಲ್ಲಿ ಸೇವಿಸುವುದು ಆರೋಗ್ಯಕರ ಜೀವನದ ಮೂಲಮಂತ್ರ…

6 hours ago

ಭಾರೀ ಮಳೆ ಹಿನ್ನೆಲೆ – ಆಗಸ್ಟ್‌ 1ರಂದು ದಕ್ಷಿಣ ಕನ್ನಡದಲ್ಲಿ ಶಾಲೆ-ಕಾಲೇಜುಗಳಿಗೆ ರಜೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಶಾಲೆ, ಪಿಯು, ಐಟಿಐ…

7 hours ago

ಹವಾಮಾನ ವರದಿ | 31-06-2026 | ಆಗಸ್ಟ್ 4ಕ್ಕೆ ಇನ್ನೊಂದು ವಾಯುಭಾರ ಕುಸಿತ ಸಾಧ್ಯತೆ..?

ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 1ರವರೆಗೆ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ…

9 hours ago

ಸುಳ್ಯ ಸುತ್ತಮುತ್ತ ಭಾರೀ ಮಳೆ – ಬಾಳುಗೋಡಿನಲ್ಲಿ ಈ ವರ್ಷದ ಮೊದಲ ಸೇತುವೆ ಮುಳುಗಡೆ, ಹೊಳೆ-ತೋಡುಗಳು ತುಂಬಿ ಹರಿವು

ಸುಳ್ಯ ತಾಲೂಕಿನ ಬಾಳುಗೋಡು, ಹರಿಹರ, ಬಳ್ಪ, ಗುತ್ತಿಗಾರು, ಸುಬ್ರಹ್ಮಣ್ಯ ಸೇರಿದಂತೆ ಹಲವು ಗ್ರಾಮಗಳಲ್ಲಿ…

9 hours ago

ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ – ಬಾಂಗ್ಲಾದೇಶದ ವಿಜ್ಞಾನಿಗಳಿಂದ ಹೊಸ ತಂತ್ರಜ್ಞಾನಕ್ಕೆ ಪೇಟೆಂಟ್

ಬಾಂಗ್ಲಾದೇಶದ ವಿಜ್ಞಾನಿಗಳು ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ ತಯಾರಿಸುವ ತಂತ್ರಜ್ಞಾನಕ್ಕೆ ಪೇಟೆಂಟ್…

17 hours ago