ಅಡಿಕೆ ಸಾಗಾಣಿಕೆಯ ಎರಡು ಪ್ರಕರಣ | ಮುಂದುವರಿದ ಬರ್ಮಾ ಅಡಿಕೆ ಕಳ್ಳಸಾಗಾಟ | ಮಿಜೋರಾಂನಲ್ಲಿ ಪತ್ತೆಯಾಯ್ತು ಅಡಿಕೆ |

March 23, 2025
7:20 AM
ಬರ್ಮಾ ಅಡಿಕೆ ಕಳ್ಳಸಾಗಾಣಿಕೆ ಮತ್ತೆ ಮುಂದುವರಿದಿದೆ. ಈ ಬಾರಿ ಅಸ್ಸಾಂ ಹಾಗೂ ತ್ರಿಪುರಾ ರೈತರು ಕೂಡಾ ಅಡಿಕೆ ಕಳ್ಳಸಾಗಾಣಿಕೆಯ ಬಗ್ಗೆ ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಈ ನಡುವೆ ಅಡಿಕೆ ಸಾಗಾಟದ ಲಾರಿಗಳು ಕೂಡಾ ಅಪಹರಣದ ಘಟನೆಗಳೂ ನಡೆಯುತ್ತಿದೆ.

ಅಸ್ಸಾಂ ರೈಫಲ್ಸ್ ಮತ್ತು ಕಸ್ಟಮ್ಸ್ ಅಧಿಕಾರಿಗಳ ಜಂಟಿ ಕಾರ್ಯಾಚರಣೆಯಲ್ಲಿ ಮಿಜೋರಾಂನಲ್ಲಿ 1.08 ಕೋಟಿ ರೂ. ಮೌಲ್ಯದ ಅಡಿಕೆಯನ್ನು ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಚಂಫೈ ಜಿಲ್ಲೆಯ ಜೊಟೆಯಲ್ಲಿ 180 ಚೀಲಗಳಲ್ಲಿ ಇದ್ದ ದೊಡ್ಡ ಪ್ರಮಾಣದ ಅಡಿಕೆ ಸಾಗಾಟ ಪ್ರಕರಣವು ಬೆಳಕಿಗೆ ಬಂದಿದೆ. ಈ ಅಡಿಕೆಯನ್ನು ಮ್ಯಾನ್ಮಾರ್‌ನಿಂದ ಕಳ್ಳಸಾಗಣೆ ಮಾಡಿ ಕಾಡಿನಲ್ಲಿ ಅಡಗಿಸಿಡಲಾಗಿತ್ತು. ………ಮುಂದೆ ಓದಿ……..

Advertisement

ಮ್ಯಾನ್ಮಾರ್ ಜೊತೆ ಬೇಲಿಯಿಲ್ಲದ ಗಡಿಭಾಗವನ್ನು ಹಂಚಿಕೊಂಡಿರುವ ಚಾಂಫೈ ಜಿಲ್ಲೆಯಲ್ಲಿ ಅಡಿಕೆ ಕಳ್ಳಸಾಗಾಣಿಕೆ ನಡೆಯುತ್ತಿದೆ. ಅಡಿಕೆ ಮಾತ್ರವಲ್ಲ ಇದರ ಜೊತೆಗೆ ಕೆಲವು ಮಾದಕ ವಸ್ತುಗಳೂ ಕಳ್ಳಸಾಗಾಣಿಕೆಯಾಗುತ್ತಿದೆ. ಮ್ಯಾನ್ಮಾರ್‌ನ ಚಿನ್ ರಾಜ್ಯವು  ಮಿಜೋರಾಂ ಜಿಲ್ಲೆಗಳಾದ ಚಾಂಫೈ, ಸಿಯಾಹಾ, ಲಾಂಗ್ಟ್ಲೈ, ಹನ್ನಾಥಿಯಲ್, ಸೈತುಯಲ್ ಮತ್ತು ಸೆರ್ಚಿಪ್ ಮೂಲಕ ಕಳ್ಳಸಾಗಾಣಿಕೆಯ ದಾರಿಯಾಗಿದೆ. ಇದೀಗ ಮ್ಯಾನ್ಮಾರ್‌ನಿಂದ ದೊಡ್ಡ ಪ್ರಮಾಣದಲ್ಲಿ ಅಡಿಕೆ ಕಳ್ಳಸಾಗಣೆಯಾಗುತ್ತಿರುವುದು ಭಾರತದ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಬೀರುತ್ತಿದೆ. ವಿಶೇಷವಾಗಿ ಅಸ್ಸಾಂ ಮತ್ತು ತ್ರಿಪುರಾದಲ್ಲಿ ಅಡಿಕೆ ಬೆಳೆಗಾರರ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ.

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಭಾರತದ ಕಡೆಗೆ ಅಡಿಕೆ ಆಮದು ಮಾಡಿಕೊಂಡ ಕಾರಣ ಅಸ್ಸಾಂ ಸರ್ಕಾರವು ಅಡಿಕೆ ಸಾಗಾಟ ಮೇಲೆಯೇ ನಿರ್ಬಂಧಗಳನ್ನು ವಿಧಿಸಿತ್ತು, ಇದು ತ್ರಿಪುರಾದಿಂದ  ಇತರ ಭಾಗಗಳಿಗೆ ಅಡಿಕೆ ಸಾಗಣೆಯ ಮೇಲೆ ಪರಿಣಾಮ ಬೀರಿತು. ಬಳಿಕ ಸರ್ಕಾರ ಮಾತುಕತೆಗಳ ಮೂಲಕ ತ್ರಿಪುರಾದಿಂದ ಅಸ್ಸಾಂಗೆ ಅಡಿಕೆ ಪೂರೈಕೆಗೆ ಸಂಬಂಧಿಸಿದ ರೈತರ ಸಮಸ್ಯೆಯನ್ನು ಬಗೆಹರಿಸಲಾಗಿತ್ತು. ಇದೀಗ ಮತ್ತೆ ಅಡಿಕೆ ಕಳ್ಳಸಾಗಾಣಿಕೆ ರೈತರಿಗೆ ಆತಂಕ ಮೂಡಿಸಿದೆ. ಈ ಹಿಂದೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಅಸ್ಸಾಂ ಮೂಲಕ ತ್ರಿಪುರಾದಲ್ಲಿ ಬೆಳೆದ ಅಡಿಕೆಯ ಸುಗಮ ಸಾಗಣೆ ಮತ್ತು ವ್ಯಾಪಾರಕ್ಕಾಗಿ ಎರಡೂ ರಾಜ್ಯಗಳು ಮಾತುಕತೆ ನಡೆಸಿದ್ದವು. ಅದಾದ ಬಳಿಕ ಮ್ಯಾನ್ಮಾರ್‌ನಿಂದ ಕಳ್ಳಸಾಗಣೆ ಮಾಡಿದ ಅಡಿಕೆ ಸಾಗಣೆಗೆವಿರುದ್ಧ ಕ್ರಮಕ್ಕೆ ಎರಡೂ ಸರ್ಕಾರಗಳೂ ಸಮ್ಮತಿಸಿದ್ದವು. ಇದೀಗ ಇದೆಲ್ಲದರ ಹೊರತಾಗಿಯೂ ಅಡಿಕೆ ಕಳ್ಳಸಾಗಾಣಿಕೆಗೆ ನಡೆಯುತ್ತಿದೆ.

ಈ ನಡುವೆ  ಅಸ್ಸಾಂನ ರಂಗಿಯಾದಲ್ಲಿ  ಅಡಿಕೆ ಸಾಗಿಸುತ್ತಿದ್ದ ಲಾರಿಯನ್ನು 6 ಜನರ ತಂಡವೊಂದು ಅಪರಹಿಸಿದೆ ಎಂದು  ಆರೋಪಿಸಲಾಗಿದೆ. ಮಧ್ಯರಾತ್ರಿಯ ಸುಮಾರಿಗೆ ದುಷ್ಕರ್ಮಿಗಳು ಲಾರಿಯ ಮೇಲೆ ದಾಳಿ ನಡೆಸಿ ಚಾಲಕ ಮತ್ತು ಸಹಾಯಕ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ.  ಅಸ್ಸಾಂನ ಗುವಾಹಟಿಯಿಂದ ಮಹಾರಾಷ್ಟ್ರಕ್ಕೆ ತೆರಳುತ್ತಿದ್ದ ಲಾರಿಯನ್ನು  ಅಪಹರಣಕಾರರು ತಡೆದರು ಎಂದು ಆರೋಪಿಸಲಾಗಿದೆ. ಮಾರ್ಚ್ 10 ರಂದು ಬೊಕೊದ ಬಂಡಪಾರದಲ್ಲಿ ನಡೆದ ಇದೇ ರೀತಿಯ ಘಟನೆ ನಡೆದಿತ್ತು. ಪೊಲೀಸರು ದೂರು ದಾಖಲಿಸಿಕೊಂಡು ಎರಡೂ ಘಟನೆಗಳ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

Advertisement

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 26-03-2025 | ಇಂದೂ ಕೆಲವು ಕಡೆ ಗಾಳಿ ಸಹಿತ ಮಳೆ ಸಾಧ್ಯತೆ | ಮಾ.27 ರಿಂದ ಮಳೆ ಕಡಿಮೆ |
March 26, 2025
1:29 PM
by: ಸಾಯಿಶೇಖರ್ ಕರಿಕಳ
ಕಂದಕ ಬದು ನಿರ್ಮಾಣ ಕುರಿತ ಕಾರ್ಯಾಗಾರ | ಬದು ನಿರ್ಮಾಣದಿಂದ ಮಳೆ ನೀರು ಪೋಲು ನಿಯಂತ್ರಣ |
March 26, 2025
7:06 AM
by: The Rural Mirror ಸುದ್ದಿಜಾಲ
ಹಾಸನ ಜಿಲ್ಲೆಯಲ್ಲಿ ಆತಂಕ ಸೃಷ್ಟಿಸಿದ್ದ ಕಾಡಾನೆ | ಸೆರೆ ಹಿಡಿದ ಇಲಾಖೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದನೆ
March 26, 2025
6:49 AM
by: The Rural Mirror ಸುದ್ದಿಜಾಲ
ಕೋಲಾರ ತಾಲೂಕಿನ ಅಬ್ಬಣಿ ಕಿರು ಅರಣ್ಯ ಪ್ರದೇಶದಲ್ಲಿ ಒತ್ತುವರಿ ತೆರವು  ಕಾರ್ಯಾಚರಣೆ
March 26, 2025
6:46 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group