ಮಿಜೋರಾಂನಲ್ಲಿ ನಡೆದ ಜಂಟಿ ಕಾರ್ಯಾಚರಣೆಯಲ್ಲಿ 3 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಬರ್ಮಾ ಅಡಿಕೆಯನ್ನು ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ. ಬರ್ಮಾದಿಂದ ಅಕ್ರಮವಾಗಿ ಅಡಿಕೆಯನ್ನು ಭಾರತಕ್ಕೆ ಸಾಗಿಸಲಾಗುತ್ತಿತ್ತು.
ಅಸ್ಸಾಂ ರೈಫಲ್ಸ್ನ ಸಿಬ್ಬಂದಿಗಳು ಮತ್ತು ಗಡಿ ಕಸ್ಟಮ್ಸ್ ಇಲಾಖೆಯು ಮಿಜೋರಾಂನ ಮೆಲ್ಬುಕ್ ಬಳಿ ಭಾರತ-ಮ್ಯಾನ್ಮಾರ್ ಅಂತರಾಷ್ಟ್ರೀಯ ಗಡಿಯಲ್ಲಿ ಜಂಟಿ ಕಾರ್ಯಾಚರಣೆಯನ್ನು ನಡೆಸಿತ್ತು. ಕಾರ್ಯಾಚರಣೆ ವೇಳೆ ಸುಮಾರು 780 ಚೀಲ ಬರ್ಮಾ ಅಡಿಕೆ ಪತ್ತೆಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಅಡಿಕೆಯನ್ನು ಕಳ್ಳಸಾಗಣೆ ಮಾಡಲಾಗುತ್ತಿತ್ತು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ವಶಪಡಿಸಿಕೊಂಡ ಅಡಿಕೆಯ ಮೌಲ್ಯ ಸುಮಾರು 3.51 ಕೋಟಿ ರೂಪಾಯಿ.
ಕಳೆದ ಡಿಸೆಂಬರ್ನಲ್ಲಿ ಅಸ್ಸಾಂ ಪೊಲೀಸರು ಕಳ್ಳಸಾಗಣೆ ಯತ್ನವನ್ನು ವಿಫಲಗೊಳಿಸಿದ್ದರು. ಮಿಜೋರಾಂನಿಂದ ಅಕ್ರಮವಾಗಿ ಸಾಗಿಸಲಾಗಿದ್ದ ಅಡಿಕೆಯನ್ನು ಕ್ಯಾಚಾರ್ ಜಿಲ್ಲೆಯಲ್ಲಿ ಪತ್ತೆ ಮಾಡಿದ್ದರು. ಅಂದು ತೈಲ ಟ್ಯಾಂಕರ್ನಲ್ಲಿ ಬಚ್ಚಿಟ್ಟಿದ್ದ 2000 ಕಿಲೋಗ್ರಾಂಗಳಷ್ಟು ಬರ್ಮಾ ಅಡಿಕೆಗಳನ್ನು ವಶಪಡಿಸಿಕೊಂಡಿದ್ದರು. ಈ ಜಾಲದ ಹಿಂದೆ ಪ್ರಭಾವಿ ವ್ಯಕ್ತಿಗಳೂ ಇದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದರು.
ಇದಾದ ಬಳಿಕ ನಾಗ್ಪುರ ನಿವಾಸಿಯನ್ನು ಅಂದು ಬಂಧಿಸಲಾಗಿತ್ತು. ಆತ ಬರ್ಮಾದಿಂದ ಅಕ್ರಮವಾಗಿ ಅಡಿಕೆಯನ್ನು ಕಳ್ಳಸಾಗಣೆ ಮಾಡಿ ವಿವಿಧ ಮಾರುಕಟ್ಟೆಯಲ್ಲಿ ಮಾರಾಟ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದರು. ಇದೀಗ ಈ ಪ್ರಕರಣದ ಬಗ್ಗೆಯೂ ತನಿಖೆ ನಡೆಸುತ್ತಿದ್ದು, ಅಡಿಕೆ ಕಳ್ಳಸಾಗಾಣಿಗೆಯ ಜಾಲವನ್ನು ಪತ್ತೆ ಮಾಡುತ್ತಿದ್ದಾರೆ.
ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.
''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…
ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…
ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.
ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್ ಇಂಡಸ್ಟ್ರೀಸ್(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…
ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…