ಇಂಡೋ-ಮ್ಯಾನ್ಮಾರ್ ಗಡಿಯಲ್ಲಿ ಮತ್ತೆ ಬೃಹತ್ ಪ್ರಮಾಣದಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಅಡಿಕೆಯನ್ನು ಅಸ್ಸಾಂ ಗಡಿ ಭದ್ರತಾ ಪಡೆ ಪತ್ತೆ ಮಾಡಿದೆ.100 ಕೆಜಿಯನ್ನು ಹೊಂದಿರುವ 1,700 ಚೀಲ ಅಡಿಕೆ ಸಹಿತ 7 ಲಾರಿಗಳನ್ನು ವಶಕ್ಕೆ ಪಡೆದಿದ್ದಾರೆ.
ಇಂಡೋ-ಮ್ಯಾನ್ಮಾರ್ ಗಡಿಯಲ್ಲಿ ಕಳೆದ ಕೆಲವು ದಿನಗಳಿಂದ ಕಟ್ಟೆಚ್ಚರ ವಹಿಸುತ್ತಿದ್ದರೂ ವಿವಿಧ ದಾರಿಗಳ ಮೂಲಕ ನಿರಂತರವಾಗಿ ಅಡಿಕೆ ಸಾಗಾಟ ನಡೆಸಲಾಗುತ್ತಿದೆ. ಹೀಗಾಗಿ ಮತ್ತೆ ಬಿಗುವಿನ ತಪಾಸಣೆಯನ್ನು ಗಡಿ ಭದ್ರತಾ ಪಡೆ ನಡೆಸುತ್ತಿದೆ. ಗುಪ್ತಚರ ಮಾಹಿತಿ ಮೇರೆಗೆ ಮತ್ತೆ ದಾಳಿ ನಡೆಸಿದ ಅಸ್ಸಾಂ ರೈಫಲ್ಸ್ನ ತಂಡವು ಕಾರ್ಯಾಚರಣೆ ನಡೆಸಿತ್ತು. ಇದೀಗ ಅಡಿಕೆ ಅಕ್ರಮವಾಗಿ ಸಾಗಾಟ ಮಾಡುವ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಿದ್ದು ಈ ಪ್ರದೇಶಗಳಲ್ಲಿ ಬಿಗುವಿನ ಕಾರ್ಯಾಚರಣೆ ಆರಂಭಿಸಿದೆ. ಹೀಗಾಗಿ ಕಳೆದ ಒಂದು ವಾರಗಳಲ್ಲಿ ವ್ಯಾಪಕ ಪ್ರಮಾಣದ ಅಡಿಕೆಯನ್ನು ವಶಕ್ಕೆ ತೆಗೆದುಕೊಂಡಿದೆ.
ಕಾರ್ಯಾಚರಣೆಯು ಮಣಿಪುರದ ಫೈಕೊಹ್ ಗ್ರಾಮದ ಸಾಮಾನ್ಯ ಸುತ್ತಮುತ್ತಲ ಪ್ರದೇಶದಲ್ಲಿ ನಡೆಯುತ್ತಿದೆ. ಅಂತಾರಾಷ್ಟ್ರೀಯ ಗಡಿಯನ್ನು ದಾಟಿ ಭಾರತದ ಪ್ರದೇಶಕ್ಕೆ ಪ್ರವೇಶಿಸಲು ಪ್ರಯತ್ನಿಸಿದಾಗ ಅಡಿಕೆಯನ್ನು ತಡೆಹಿಡಿಯಲಾಗಿದೆ. ವಶಪಡಿಸಿಕೊಂಡ ಅಡಿಕೆ ಚೀಲ, ಬಂಧಿತ ವ್ಯಕ್ತಿಗಳು ಮತ್ತು ಕಳ್ಳಸಾಗಣೆಗೆ ಬಳಸಿದ ಟ್ರಕ್ಗಳನ್ನು ಮುಂದಿನ ತನಿಖೆಗೆ ಒಳಪಡಿಸಲಾಗುತ್ತಿದೆ.
@The Assam Rifles X
ಯುದ್ಧ ಆದರೆ ಅಥವಾ ಬಿಗುವಿನ ವಾತಾವರಣ ನಿರ್ಮಾಣವಾದರೆ ತಾತ್ಕಾಲಿಕವಾಗಿ ಎಲ್ಲಾ ಉತ್ಪನ್ನಗಳ ಮಾರುಕಟ್ಟೆಗಳು…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಮಂಗಳೂರು ಟೌನ್ ಹಾಲ್ ನಲ್ಲಿ ಶನಿವಾರದಿಂದ ನಡೆಯುತ್ತಿದ್ದ ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್…
ರಾಜ್ಯದ ವಿವಿಧ ಅರಣ್ಯ ಪ್ರದೇಶಗಳಲ್ಲಿ ಸಹಜವಾಗಿ ಸಾವನ್ನಪ್ಪುವ ಕಾಡುಪ್ರಾಣಿಗಳ ಕಳೇಬರವನ್ನು ಸುಡದೆ ಕಾಡಿನಲ್ಲಿಯೇ…
ಉತ್ತರಾಖಂಡದ ಪ್ರಸಿದ್ಧ ಯಾತ್ರಾ ಕ್ಷೇತ್ರ ಬದರೀನಾಥ ಧಾಮವನ್ನು ತೆರೆಯಲಾಗಿದೆ. ಮುಂಜಾನೆ 6 ಗಂಟೆಯ…
ಅರಣ್ಯ ಪ್ರದೇಶದಲ್ಲಿ ಆಗಿರುವ ಅಕ್ರಮ ಮಂಜೂರಾತಿ ರದ್ದುಪಡಿಸಿ, ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ…