ಇಂಡೋ-ಮ್ಯಾನ್ಮಾರ್ ಗಡಿಯಲ್ಲಿ ಮತ್ತೆ ಬೃಹತ್ ಪ್ರಮಾಣದಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಅಡಿಕೆಯನ್ನು ಅಸ್ಸಾಂ ಗಡಿ ಭದ್ರತಾ ಪಡೆ ಪತ್ತೆ ಮಾಡಿದೆ.100 ಕೆಜಿಯನ್ನು ಹೊಂದಿರುವ 1,700 ಚೀಲ ಅಡಿಕೆ ಸಹಿತ 7 ಲಾರಿಗಳನ್ನು ವಶಕ್ಕೆ ಪಡೆದಿದ್ದಾರೆ.
ಇಂಡೋ-ಮ್ಯಾನ್ಮಾರ್ ಗಡಿಯಲ್ಲಿ ಕಳೆದ ಕೆಲವು ದಿನಗಳಿಂದ ಕಟ್ಟೆಚ್ಚರ ವಹಿಸುತ್ತಿದ್ದರೂ ವಿವಿಧ ದಾರಿಗಳ ಮೂಲಕ ನಿರಂತರವಾಗಿ ಅಡಿಕೆ ಸಾಗಾಟ ನಡೆಸಲಾಗುತ್ತಿದೆ. ಹೀಗಾಗಿ ಮತ್ತೆ ಬಿಗುವಿನ ತಪಾಸಣೆಯನ್ನು ಗಡಿ ಭದ್ರತಾ ಪಡೆ ನಡೆಸುತ್ತಿದೆ. ಗುಪ್ತಚರ ಮಾಹಿತಿ ಮೇರೆಗೆ ಮತ್ತೆ ದಾಳಿ ನಡೆಸಿದ ಅಸ್ಸಾಂ ರೈಫಲ್ಸ್ನ ತಂಡವು ಕಾರ್ಯಾಚರಣೆ ನಡೆಸಿತ್ತು. ಇದೀಗ ಅಡಿಕೆ ಅಕ್ರಮವಾಗಿ ಸಾಗಾಟ ಮಾಡುವ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಿದ್ದು ಈ ಪ್ರದೇಶಗಳಲ್ಲಿ ಬಿಗುವಿನ ಕಾರ್ಯಾಚರಣೆ ಆರಂಭಿಸಿದೆ. ಹೀಗಾಗಿ ಕಳೆದ ಒಂದು ವಾರಗಳಲ್ಲಿ ವ್ಯಾಪಕ ಪ್ರಮಾಣದ ಅಡಿಕೆಯನ್ನು ವಶಕ್ಕೆ ತೆಗೆದುಕೊಂಡಿದೆ.
ಕಾರ್ಯಾಚರಣೆಯು ಮಣಿಪುರದ ಫೈಕೊಹ್ ಗ್ರಾಮದ ಸಾಮಾನ್ಯ ಸುತ್ತಮುತ್ತಲ ಪ್ರದೇಶದಲ್ಲಿ ನಡೆಯುತ್ತಿದೆ. ಅಂತಾರಾಷ್ಟ್ರೀಯ ಗಡಿಯನ್ನು ದಾಟಿ ಭಾರತದ ಪ್ರದೇಶಕ್ಕೆ ಪ್ರವೇಶಿಸಲು ಪ್ರಯತ್ನಿಸಿದಾಗ ಅಡಿಕೆಯನ್ನು ತಡೆಹಿಡಿಯಲಾಗಿದೆ. ವಶಪಡಿಸಿಕೊಂಡ ಅಡಿಕೆ ಚೀಲ, ಬಂಧಿತ ವ್ಯಕ್ತಿಗಳು ಮತ್ತು ಕಳ್ಳಸಾಗಣೆಗೆ ಬಳಸಿದ ಟ್ರಕ್ಗಳನ್ನು ಮುಂದಿನ ತನಿಖೆಗೆ ಒಳಪಡಿಸಲಾಗುತ್ತಿದೆ.
@The Assam Rifles X
ಅಡಿಕೆ ಎಲೆ ಚುಕ್ಕೆ ರೋಗವು ಗಾಳಿ ಮತ್ತು ತೇವಾಂಶದಿಂದ ವೇಗವಾಗಿ ಹರಡುತ್ತಿದ್ದು, ತೋಟಗಳಿಗೆ…
ಇಂಟರ್ನೆಟ್ ಸೇವೆ ವ್ಯತ್ಯಯಕ್ಕೆ ಸುಳ್ಯದ ಗ್ರಾಹಕನಿಗೆ ₹30,000 ಪರಿಹಾರ ನೀಡಲು ಆದೇಶ. ಬಿ…
ಮೇ 2ರಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಕಡಿಮೆಯಾಗುವ ಸೂಚನೆಗಳು ಕಂಡುಬರುತ್ತಿವೆ. ಮೇ…
ಚಿಕ್ಕಮಗಳೂರಿನಲ್ಲಿ ಅಕ್ರಮವಾಗಿ ಶೇಖರಿಸಿದ್ದ ಯೂರಿಯಾ ಗೊಬ್ಬರ ಜಪ್ತಿ ಮಾಡಲಾಗಿದೆ. 181 ಚೀಲಗಳು ಹಾಗೂ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲ ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ.…
NEET ಪರೀಕ್ಷೆಯ ಒತ್ತಡದಿಂದ ವಿದ್ಯಾರ್ಥಿಗಳಲ್ಲಿ ಮಾನಸಿಕ ಸಮಸ್ಯೆಗಳು ಹೆಚ್ಚುತ್ತಿವೆ. ಒತ್ತಡರಹಿತ, ಅನುಭವಾಧಾರಿತ ಶಿಕ್ಷಣ…