ಇಂಡೋ-ಮ್ಯಾನ್ಮಾರ್ ಗಡಿಯಲ್ಲಿ ಮತ್ತೆ ಬೃಹತ್ ಪ್ರಮಾಣದಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಅಡಿಕೆಯನ್ನು ಅಸ್ಸಾಂ ಗಡಿ ಭದ್ರತಾ ಪಡೆ ಪತ್ತೆ ಮಾಡಿದೆ.100 ಕೆಜಿಯನ್ನು ಹೊಂದಿರುವ 1,700 ಚೀಲ ಅಡಿಕೆ ಸಹಿತ 7 ಲಾರಿಗಳನ್ನು ವಶಕ್ಕೆ ಪಡೆದಿದ್ದಾರೆ.
ಇಂಡೋ-ಮ್ಯಾನ್ಮಾರ್ ಗಡಿಯಲ್ಲಿ ಕಳೆದ ಕೆಲವು ದಿನಗಳಿಂದ ಕಟ್ಟೆಚ್ಚರ ವಹಿಸುತ್ತಿದ್ದರೂ ವಿವಿಧ ದಾರಿಗಳ ಮೂಲಕ ನಿರಂತರವಾಗಿ ಅಡಿಕೆ ಸಾಗಾಟ ನಡೆಸಲಾಗುತ್ತಿದೆ. ಹೀಗಾಗಿ ಮತ್ತೆ ಬಿಗುವಿನ ತಪಾಸಣೆಯನ್ನು ಗಡಿ ಭದ್ರತಾ ಪಡೆ ನಡೆಸುತ್ತಿದೆ. ಗುಪ್ತಚರ ಮಾಹಿತಿ ಮೇರೆಗೆ ಮತ್ತೆ ದಾಳಿ ನಡೆಸಿದ ಅಸ್ಸಾಂ ರೈಫಲ್ಸ್ನ ತಂಡವು ಕಾರ್ಯಾಚರಣೆ ನಡೆಸಿತ್ತು. ಇದೀಗ ಅಡಿಕೆ ಅಕ್ರಮವಾಗಿ ಸಾಗಾಟ ಮಾಡುವ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಿದ್ದು ಈ ಪ್ರದೇಶಗಳಲ್ಲಿ ಬಿಗುವಿನ ಕಾರ್ಯಾಚರಣೆ ಆರಂಭಿಸಿದೆ. ಹೀಗಾಗಿ ಕಳೆದ ಒಂದು ವಾರಗಳಲ್ಲಿ ವ್ಯಾಪಕ ಪ್ರಮಾಣದ ಅಡಿಕೆಯನ್ನು ವಶಕ್ಕೆ ತೆಗೆದುಕೊಂಡಿದೆ.
ಕಾರ್ಯಾಚರಣೆಯು ಮಣಿಪುರದ ಫೈಕೊಹ್ ಗ್ರಾಮದ ಸಾಮಾನ್ಯ ಸುತ್ತಮುತ್ತಲ ಪ್ರದೇಶದಲ್ಲಿ ನಡೆಯುತ್ತಿದೆ. ಅಂತಾರಾಷ್ಟ್ರೀಯ ಗಡಿಯನ್ನು ದಾಟಿ ಭಾರತದ ಪ್ರದೇಶಕ್ಕೆ ಪ್ರವೇಶಿಸಲು ಪ್ರಯತ್ನಿಸಿದಾಗ ಅಡಿಕೆಯನ್ನು ತಡೆಹಿಡಿಯಲಾಗಿದೆ. ವಶಪಡಿಸಿಕೊಂಡ ಅಡಿಕೆ ಚೀಲ, ಬಂಧಿತ ವ್ಯಕ್ತಿಗಳು ಮತ್ತು ಕಳ್ಳಸಾಗಣೆಗೆ ಬಳಸಿದ ಟ್ರಕ್ಗಳನ್ನು ಮುಂದಿನ ತನಿಖೆಗೆ ಒಳಪಡಿಸಲಾಗುತ್ತಿದೆ.
@The Assam Rifles X
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…