ಇಂಡೋ-ಮ್ಯಾನ್ಮಾರ್ ಗಡಿಯಲ್ಲಿ ಮತ್ತೆ ಬೃಹತ್ ಪ್ರಮಾಣದಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಅಡಿಕೆಯನ್ನು ಅಸ್ಸಾಂ ಗಡಿ ಭದ್ರತಾ ಪಡೆ ಪತ್ತೆ ಮಾಡಿದೆ.100 ಕೆಜಿಯನ್ನು ಹೊಂದಿರುವ 1,700 ಚೀಲ ಅಡಿಕೆ ಸಹಿತ 7 ಲಾರಿಗಳನ್ನು ವಶಕ್ಕೆ ಪಡೆದಿದ್ದಾರೆ.
ಇಂಡೋ-ಮ್ಯಾನ್ಮಾರ್ ಗಡಿಯಲ್ಲಿ ಕಳೆದ ಕೆಲವು ದಿನಗಳಿಂದ ಕಟ್ಟೆಚ್ಚರ ವಹಿಸುತ್ತಿದ್ದರೂ ವಿವಿಧ ದಾರಿಗಳ ಮೂಲಕ ನಿರಂತರವಾಗಿ ಅಡಿಕೆ ಸಾಗಾಟ ನಡೆಸಲಾಗುತ್ತಿದೆ. ಹೀಗಾಗಿ ಮತ್ತೆ ಬಿಗುವಿನ ತಪಾಸಣೆಯನ್ನು ಗಡಿ ಭದ್ರತಾ ಪಡೆ ನಡೆಸುತ್ತಿದೆ. ಗುಪ್ತಚರ ಮಾಹಿತಿ ಮೇರೆಗೆ ಮತ್ತೆ ದಾಳಿ ನಡೆಸಿದ ಅಸ್ಸಾಂ ರೈಫಲ್ಸ್ನ ತಂಡವು ಕಾರ್ಯಾಚರಣೆ ನಡೆಸಿತ್ತು. ಇದೀಗ ಅಡಿಕೆ ಅಕ್ರಮವಾಗಿ ಸಾಗಾಟ ಮಾಡುವ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಿದ್ದು ಈ ಪ್ರದೇಶಗಳಲ್ಲಿ ಬಿಗುವಿನ ಕಾರ್ಯಾಚರಣೆ ಆರಂಭಿಸಿದೆ. ಹೀಗಾಗಿ ಕಳೆದ ಒಂದು ವಾರಗಳಲ್ಲಿ ವ್ಯಾಪಕ ಪ್ರಮಾಣದ ಅಡಿಕೆಯನ್ನು ವಶಕ್ಕೆ ತೆಗೆದುಕೊಂಡಿದೆ.
ಕಾರ್ಯಾಚರಣೆಯು ಮಣಿಪುರದ ಫೈಕೊಹ್ ಗ್ರಾಮದ ಸಾಮಾನ್ಯ ಸುತ್ತಮುತ್ತಲ ಪ್ರದೇಶದಲ್ಲಿ ನಡೆಯುತ್ತಿದೆ. ಅಂತಾರಾಷ್ಟ್ರೀಯ ಗಡಿಯನ್ನು ದಾಟಿ ಭಾರತದ ಪ್ರದೇಶಕ್ಕೆ ಪ್ರವೇಶಿಸಲು ಪ್ರಯತ್ನಿಸಿದಾಗ ಅಡಿಕೆಯನ್ನು ತಡೆಹಿಡಿಯಲಾಗಿದೆ. ವಶಪಡಿಸಿಕೊಂಡ ಅಡಿಕೆ ಚೀಲ, ಬಂಧಿತ ವ್ಯಕ್ತಿಗಳು ಮತ್ತು ಕಳ್ಳಸಾಗಣೆಗೆ ಬಳಸಿದ ಟ್ರಕ್ಗಳನ್ನು ಮುಂದಿನ ತನಿಖೆಗೆ ಒಳಪಡಿಸಲಾಗುತ್ತಿದೆ.
@The Assam Rifles X
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…
ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…
ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ,…