ಮ್ಯಾನ್ಮಾರ್ನಿಂದ ಕಳ್ಳಸಾಗಣೆ ಮಾಡಲಾಗುತ್ತಿದ್ದ ಅಡಿಕೆಯನ್ನು ಮಿಜೋರಾಂನಲ್ಲಿ ಅಸ್ಸಾಂ ರೈಫಲ್ಸ್ ವಶಪಡಿಸಿಕೊಂಡಿದೆ. ಮಿಜೋರಾಂನಲ್ಲಿ ಅಸ್ಸಾಂ ರೈಫಲ್ಸ್ ಪಡೆ ಒಂದು ಕೋಟಿ ರೂಪಾಯಿ ಮೌಲ್ಯದ 90 ಚೀಲ ಗಸಗಸೆ ಮತ್ತು 120 ಚೀಲ ಅಡಿಕೆ ವಶಪಡಿಸಿಕೊಂಡಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಗುಪ್ತಚರ ಮಾಹಿತಿಯ ಆಧಾರದ ಮೇಲೆ, ಅಸ್ಸಾಂ ರೈಫಲ್ಸ್ ಮಿಜೋರಾಂನ ಗಡಿ ಚಾಂಫೈ ಜಿಲ್ಲೆಯ ರುವಾಂಟ್ಲಾಂಗ್ನ ಫರ್ಲುಯಿ ರಸ್ತೆ ಪ್ರದೇಶಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿ, ಅಕ್ರಮವಾಗಿ ಸಾಗಿಸಲಾಗುತ್ತಿದ್ದ ವಸ್ತುಗಳನ್ನು ವಶಪಡಿಸಿಕೊಂಡಿದೆ ಎಂದು ತಿಳಿಸಿದ್ದಾರೆ.
ಅಡಿಕೆಯನ್ನು ಮ್ಯಾನ್ಮಾರ್ನಿಂದ ಕಳ್ಳಸಾಗಣೆ ಮಾಡಲಾಗಿದ್ದು, ಭಾರತದ ಇತರ ರಾಜ್ಯಗಳಿಗೆ ಸಾಗಿಸಲು ಉದ್ದೇಶಿಸಲಾಗಿದೆ ಎಂದು ತನಿಖೆಯ ವೇಳೆ ಬೆಳೆಕಿಗೆ ಬಂದಿದೆ. ಮ್ಯಾನ್ಮಾರ್ನಿಂದ “ಬರ್ಮಾ ಅಡಿಕೆ” ಎಂದು ಕರೆಯಲ್ಪಡುವ ಅಡಿಕೆ ಕಳ್ಳಸಾಗಣೆಯು ಈಶಾನ್ಯ ರಾಜ್ಯಗಳ ಸ್ಥಳೀಯ ರೈತರ ಮೇಲೆ ಹೆಚ್ಚಿನ ಪರಿಣಾಮ ಬೀರುತ್ತಿದೆ. ಇದರ ಜೊತೆಗೇ ದೇಶದ ಇತರಡೆಯ ಅಡಿಕೆ ಬೆಳೆಗಾರರ ಮೇಲೂ ಪರಿಣಾಮ ಬೀರುತ್ತಿದೆ. ತ್ರಿಪುರಾ ಮತ್ತು ಅಸ್ಸಾಂನಲ್ಲಿ ಅಡಿಕೆ ಬೆಳೆಗಾರರು ಇತ್ತೀಚಿನ ದಿನಗಳಲ್ಲಿ ಮ್ಯಾನ್ಮಾರ್ನಿಂದ ಅಡಿಕೆ ಕಳ್ಳಸಾಗಣೆ ವಿರುದ್ಧ ಪ್ರತಿಭಟನೆಗಳನ್ನು ನಡೆಸಿದ್ದಾರೆ.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…
ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…
ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ,…