ಅಡಿಕೆ ಅಕ್ರಮ ಸಾಗಾಟದ ವಿರುದ್ಧ ಮತ್ತೆ ಅಸ್ಸಾಂ ಗಡಿ ಭದ್ರತಾ ಪಡೆ ಕಾರ್ಯಾಚರಣೆ ಚುರುಕುಗೊಳಿಸಿದೆ. ಶುಕ್ರವಾರ ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಸುಮಾರು 6785 ಅಡಿಕೆ ಚೀಲವನ್ನು ವಶಕ್ಕೆ ತೆಗೆದುಕೊಂಡಿದೆ. ಈ ಅಡಿಕೆಯ ಮೌಲ್ಯ ಸುಮಾರು 46 ಕೋಟಿ ರೂಪಾಯಿ ಎಂದು ಅಸ್ಸಾಂ ರೈಫಲ್ಸ್ ತಿಳಿಸಿದೆ.
ಮಣಿಪುರದ ಕಾಮ್ಜಾಂಗ್ ಜಿಲ್ಲೆಯ ವಾಂಗ್ಲೀ ಗ್ರಾಮದ ಕೆಲವು ಪ್ರದೇಶದಲ್ಲಿ ಅಡಿಕೆ ಅಕ್ರಮವಾಗಿ ದಾಸ್ತಾನು ಮಾಡಿರುವ ಬಗ್ಗೆ ಖಚಿತ ಮಾಹಿತಿ ಆಧಾರದಲ್ಲಿ ಅಸ್ಸಾಂ ರೈಫಲ್ಸ್ ಶೋಧ ಕಾರ್ಯ ಆರಂಭ ಮಾಡಿತ್ತು. ವಾಂಗ್ಲೆ ಗ್ರಾಮ, ನಮ್ಲೀ ಗ್ರಾಮ ಮತ್ತು ನಮ್ಲೀ ಮಾರುಕಟ್ಟೆಯ ಸುತ್ತಮುತ್ತಲಿನ 13 ಮನೆಗಳಲ್ಲಿ ಸಂಪೂರ್ಣ ಶೋಧ ನಡೆಸಿದಾಗ, ನಾಗಾಲ್ಯಾಂಡ್, ಅಸ್ಸಾಂ ಮತ್ತು ಉತ್ತರದ ಇತರ ಭಾಗಗಳಿಗೆ ಕಾಳಸಂತೆ ಮಾರಾಟಕ್ಕಾಗಿ ಬರ್ಮಾ ಅಡಿಕೆ ದಾಸ್ತಾನು ಆಗಿರುವುದು ಕಂಡುಬಂದಿತ್ತು. ಒಟ್ಟು 6,785 ಚೀಲ ಅಡಿಕೆಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವರದಿಯಾಗಿದೆ. ಈ ನಡುವೆ ಇಂಡೋ-ಮ್ಯಾನ್ಮಾರ್ ಗಡಿಯಲ್ಲಿ ಕೂಡಾ ಇನ್ನೊಂದು ಅಡಿಕೆ ಸಾಗಾಟ ಪ್ರಕರಣವನ್ನು ಅಸ್ಸಾಂ ರೈಫಲ್ಸ್ ತಡೆ ಹಿಡಿದಿದೆ ಎಂದು UNI ವರದಿ ಮಾಡಿದೆ.
1,486 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಚೆನಾಬ್ ಸೇತುವೆಯನ್ನು ಸರ್ಕಾರವು "ಇತ್ತೀಚಿನ ಇತಿಹಾಸದಲ್ಲಿ…
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ಆರಂಭವಾಗಲಿದೆ. ಅಲ್ಲಲ್ಲಿ ಸಾಧಾರಣ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರವ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕತೆ 9535156490
ಭೋಜನವೆಂದರೆ ಉದರಾಗ್ನಿಯನ್ನು ತಣಿಸುವ ಯಜ್ಞ. ಉದರಾಗ್ನಿಗೆ ಖಾದ್ಯಗಳೇ ಆಜ್ಯಗಳು. ಯಜ್ಞವೆಂದಾಗ ಶ್ರದ್ಧೆ, ಭಕ್ತಿ ಮತ್ತು…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ಇದರ ಪ್ರಭಾವದಿಂದ ಜೂನ್ 11 ರಿಂದ…