ಅಡಿಕೆ ಅಕ್ರಮ ಸಾಗಾಟದ ವಿರುದ್ಧ ಮತ್ತೆ ಅಸ್ಸಾಂ ಗಡಿ ಭದ್ರತಾ ಪಡೆ ಕಾರ್ಯಾಚರಣೆ ಚುರುಕುಗೊಳಿಸಿದೆ. ಶುಕ್ರವಾರ ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಸುಮಾರು 6785 ಅಡಿಕೆ ಚೀಲವನ್ನು ವಶಕ್ಕೆ ತೆಗೆದುಕೊಂಡಿದೆ. ಈ ಅಡಿಕೆಯ ಮೌಲ್ಯ ಸುಮಾರು 46 ಕೋಟಿ ರೂಪಾಯಿ ಎಂದು ಅಸ್ಸಾಂ ರೈಫಲ್ಸ್ ತಿಳಿಸಿದೆ.
ಮಣಿಪುರದ ಕಾಮ್ಜಾಂಗ್ ಜಿಲ್ಲೆಯ ವಾಂಗ್ಲೀ ಗ್ರಾಮದ ಕೆಲವು ಪ್ರದೇಶದಲ್ಲಿ ಅಡಿಕೆ ಅಕ್ರಮವಾಗಿ ದಾಸ್ತಾನು ಮಾಡಿರುವ ಬಗ್ಗೆ ಖಚಿತ ಮಾಹಿತಿ ಆಧಾರದಲ್ಲಿ ಅಸ್ಸಾಂ ರೈಫಲ್ಸ್ ಶೋಧ ಕಾರ್ಯ ಆರಂಭ ಮಾಡಿತ್ತು. ವಾಂಗ್ಲೆ ಗ್ರಾಮ, ನಮ್ಲೀ ಗ್ರಾಮ ಮತ್ತು ನಮ್ಲೀ ಮಾರುಕಟ್ಟೆಯ ಸುತ್ತಮುತ್ತಲಿನ 13 ಮನೆಗಳಲ್ಲಿ ಸಂಪೂರ್ಣ ಶೋಧ ನಡೆಸಿದಾಗ, ನಾಗಾಲ್ಯಾಂಡ್, ಅಸ್ಸಾಂ ಮತ್ತು ಉತ್ತರದ ಇತರ ಭಾಗಗಳಿಗೆ ಕಾಳಸಂತೆ ಮಾರಾಟಕ್ಕಾಗಿ ಬರ್ಮಾ ಅಡಿಕೆ ದಾಸ್ತಾನು ಆಗಿರುವುದು ಕಂಡುಬಂದಿತ್ತು. ಒಟ್ಟು 6,785 ಚೀಲ ಅಡಿಕೆಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವರದಿಯಾಗಿದೆ. ಈ ನಡುವೆ ಇಂಡೋ-ಮ್ಯಾನ್ಮಾರ್ ಗಡಿಯಲ್ಲಿ ಕೂಡಾ ಇನ್ನೊಂದು ಅಡಿಕೆ ಸಾಗಾಟ ಪ್ರಕರಣವನ್ನು ಅಸ್ಸಾಂ ರೈಫಲ್ಸ್ ತಡೆ ಹಿಡಿದಿದೆ ಎಂದು UNI ವರದಿ ಮಾಡಿದೆ.
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…